ಪ್ರಿಯತಮೆ ಹೊಟ್ಟೆಗೆ ಚಾಕುವಿನಿಂದ ಇರಿದು ಪ್ರಿಯಕರ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕೊಲೆ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಪಾಲಾಗಿರುವ ಘಟನೆ ಹೊಸಕೋಟೆ ನಗರದ ಕಾಲೇಜು ರಸ್ತೆಯಲ್ಲಿ ನಡೆದಿದೆ.
ಆಂಧ್ರಪ್ರದೇಶದ ಮದನಪಲ್ಲಿ ಮೂಲದ ಹೇಮಾವತಿ (35) ಕೊಲೆಗೀಡಾದ ಮಹಿಳೆ. ಚಿಂತಾಮಣಿ ಮೂಲದ ವೇಣು (40) ಕೊಲೆಗೈದ ವ್ಯಕ್ತಿ.
ಹೇಮಾವತಿ ಮದನಪಲ್ಲಿಯಿಂದ ಬಂದು ಕಳೆದ ನಾಲ್ಕು ತಿಂಗಳಿಂದ ಹೊಸಕೋಟೆಯಲ್ಲಿ ಮನೆ ಮಾಡಿ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಳು.
ಈ ವೇಳೆ ವೇಣು ಹಾಗೂ ಹೇಮಾವತಿ ನಡುವೆ ಸ್ನೇಹ ಬೆಳೆದಿದೆ. ಆರೋಪಿ ವೇಣು ಆಗಾಗ ಹೇಮಾವತಿ ಇದ್ದ ಮನೆಗೆ ಬಂದು ಕೆಲ ದಿನ ಇದ್ದು ಹೋಗುತ್ತಿದ್ದ.
ಹೇಮಾವತಿಗೆ ಮದುವೆ ಮಾಡಲು ಆಕೆಯ ಕುಟುಂವಸ್ಥರು ಗಂಡು ನೋಡುತ್ತಿದ್ದರು. ಈ ವಿಚಾರವನ್ನು ವೇಣುಗೆ ತಿಳಿಸುತ್ತಾಳೆ. ಆಗ ಆರೋಪಿ ವೇಣು ನಿಮ್ಮ ಮನೆಯವರು ನೀಡಿದ ಹುಡುಗನನ್ನು ಮದುವೆ ಆಗ ಬೇಡ ಎಂದು ತಿಳಿಸುತ್ತಾನೆ. ಹೀಗೆ ಹಲವು ದಿನಗಳಿಂದ ಹೇಳುತ್ತಾ ಬಂದಿದ್ದ. ಆದರೆ ಮದುವೆ ಮಾತ್ರ ಆಗಿರಲಿಲ್ಲ. ಆಗ ಹೇಮಾವತಿ, ನನ್ನನ್ನು ಮದುವೆ ಆಗು ಇಲ್ಲದಿದ್ದರೆ ನಮ್ಮ ಮನೆಯವರು ನೋಡಯವ ಹುಡುಗನನ್ನು ಮದುವೆ ಆಗುತ್ತೇನೆ ಎಂದು ವೇಣುಗೆ ತಿಳಿಸುತ್ತಾಳೆ. ಇದಕ್ಕೆ ಕುಪಿತಗೊಂಡು, ಅನುಮಾನ ಹೆಚ್ಚಾಗಿ ಚಾಕುವಿನಿಂದ ಹೊಟ್ಟೆಯ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಆರೋಪ ಕೇಳಿಬಂದಿದೆ.
ರಾತ್ರಿಯೆಲ್ಲಾ ಆಕೆಯ ಜೊತೆ ಕಾಲ ಕಳೆದು ಮುಂಜಾನೆ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಆರೋಪಿ ವೇಣು ಮಹಿಳೆಯನ್ನ ಕೊಲೆ ಮಾಡಿ ಚಿಂತಾಮಣಿಗೆ ಹೋಗಿದ್ದಾನೆ. ಈ ವೇಳೆ ಮನೆಯಲ್ಲಿ ತಾನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಸದ್ಯ ಕೊಲೆ ಆರೋಪಿ ವೇಣು ಆಸ್ಪತ್ರೆಗೆ ದಾಖಲಾಗಿದ್ದಾನೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…