ಶಿವಮೊಗ್ಗ: ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ..
ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಆದೇಶ ಮಾಡಿದ್ದಾರೆ.
2020ರ ಜನವರಿ 15ರಂದು ಪ್ರಕಾಶ್ ಬಾಬು ಎಂಬುವವರನ್ನು ಪತ್ನಿ ಫ್ಲೋರಾ ನ್ಯಾನ್ಸಿ ಹಾಗೂ ಆಕೆಯ ಪ್ರಿಯಕರ ರಾಜಶೇಖರಯ್ಯ ಕೊಲೆ ಮಾಡಿದ್ದರು. ಪ್ರಕಾಶ್ ಬಾಬು ಪೇಪರ್ ಟೌನ್ ಪೊಲಿಸ್ ಠಾಣಾ ವ್ಯಾಪ್ತಿಯ ಸುರಗಿತೋಪಿನ ವಾಸಿಯಾಗಿದ್ದರು.
ಪ್ರಕಾಶ್ ಬಾಬು ಪತ್ನಿ ಫ್ಲೋರಾ ನ್ಯಾನ್ಸಿ ರಾಜಶೇಖರಯ್ಯನ ಜೊತೆ ಅನೈತಿಕ ಸಂಬಂಧ ಹೊಂದಿದ್ದರು.
ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿ ಬರುತ್ತಾನೆ ಎಂದು ಪ್ರಕಾಶ್ ಬಾಬುನನ್ನು ಪತ್ನಿ ಫ್ಲೋರಾ ನ್ಯಾನ್ಸಿ ಹಾಗೂ ಆಕೆಯ ಪ್ರಿಯಕರ ರಾಜಶೇಖರಯ್ಯ ಕೊಲೆ ಮಾಡಿದ್ದರು.
ಪ್ರಕಾಶ್ ಬಾಬುವಿಗೆ ಮತ್ತು ಬರುವ ಔಷದಿಯನ್ನು ಹಾಕಿ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ಈ ಬಗ್ಗೆ ಅಂದಿನ ಇನ್ಸ್ ಪೆಕ್ಟರ್ ಮಂಜುನಾಥ್ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಗಲ್ಲು ಶಿಕ್ಷೆ ಜೊತೆಗೆ 14 ಲಕ್ಷ ದಂಡ ವಿಧಿಸಿದೆ. ಜೊತೆಗೆ ದೂರುದಾರರಿಗೆ 5 ಲಕ್ಷ ನೀಡುವಂತೆ ಆದೇಶಿಸಲಾಗಿದೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…