ಶಿವಮೊಗ್ಗ: ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ..
ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಆದೇಶ ಮಾಡಿದ್ದಾರೆ.
2020ರ ಜನವರಿ 15ರಂದು ಪ್ರಕಾಶ್ ಬಾಬು ಎಂಬುವವರನ್ನು ಪತ್ನಿ ಫ್ಲೋರಾ ನ್ಯಾನ್ಸಿ ಹಾಗೂ ಆಕೆಯ ಪ್ರಿಯಕರ ರಾಜಶೇಖರಯ್ಯ ಕೊಲೆ ಮಾಡಿದ್ದರು. ಪ್ರಕಾಶ್ ಬಾಬು ಪೇಪರ್ ಟೌನ್ ಪೊಲಿಸ್ ಠಾಣಾ ವ್ಯಾಪ್ತಿಯ ಸುರಗಿತೋಪಿನ ವಾಸಿಯಾಗಿದ್ದರು.
ಪ್ರಕಾಶ್ ಬಾಬು ಪತ್ನಿ ಫ್ಲೋರಾ ನ್ಯಾನ್ಸಿ ರಾಜಶೇಖರಯ್ಯನ ಜೊತೆ ಅನೈತಿಕ ಸಂಬಂಧ ಹೊಂದಿದ್ದರು.
ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿ ಬರುತ್ತಾನೆ ಎಂದು ಪ್ರಕಾಶ್ ಬಾಬುನನ್ನು ಪತ್ನಿ ಫ್ಲೋರಾ ನ್ಯಾನ್ಸಿ ಹಾಗೂ ಆಕೆಯ ಪ್ರಿಯಕರ ರಾಜಶೇಖರಯ್ಯ ಕೊಲೆ ಮಾಡಿದ್ದರು.
ಪ್ರಕಾಶ್ ಬಾಬುವಿಗೆ ಮತ್ತು ಬರುವ ಔಷದಿಯನ್ನು ಹಾಕಿ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ಈ ಬಗ್ಗೆ ಅಂದಿನ ಇನ್ಸ್ ಪೆಕ್ಟರ್ ಮಂಜುನಾಥ್ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಗಲ್ಲು ಶಿಕ್ಷೆ ಜೊತೆಗೆ 14 ಲಕ್ಷ ದಂಡ ವಿಧಿಸಿದೆ. ಜೊತೆಗೆ ದೂರುದಾರರಿಗೆ 5 ಲಕ್ಷ ನೀಡುವಂತೆ ಆದೇಶಿಸಲಾಗಿದೆ.
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…
ರಾಜ್ಯ ಸರ್ಕಾರವು ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ…
ಆಧುನಿಕ ನರ್ಸಿಂಗ್ನ ಸಂಸ್ಥಾಪಕಿ ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಅಂಗವಾಗಿ ಅಂತಾರಾಷ್ಟ್ರೀಯ ದಾದಿಯರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಈ ದಿನವು…