ಪ್ರಿಯತಮೆಗಾಗಿ ಮಾಜಿ ಹಾಗೂ ಹಾಲಿ ಲವ್ವರ್ ಗಳ ನಡುವೆ ಜಗಳ:‌ ಹಾಲಿ ಲವ್ವರ್ ಗೆ ಚಾಕುವಿನಿಂದ ಹಿರಿದು ಕೊಲೆ ಮಾಡಿದ ಮಾಜಿ ಲವ್ವರ್

ಯುವಕ ತಾನು ಪ್ರೀತಿ ಮಾಡ್ತಿದ್ದ ಯುವತಿಯನ್ನ, ಮತ್ತೊಬ್ಬ ಯುವಕ ಪ್ರೀತಿಸಿದ್ದ ಅನ್ನೋ ಕಾರಣಕ್ಕಾಗಿ ಪಾರ್ಟಿ ಮಾಡೋ ನೆಪದಲ್ಲಿ ಫಾರ್ಮ್​ಹೌಸ್​​ಗೆ ಕರೆದು ಮನೋಸೋ ಇಚ್ಚೆ ಚಾಕುವಿನಲ್ಲಿ ಇರಿದು ಕೊಲೆ ಮಾಡಿರುವ ಘಟನೆ ನೆಲಮಂಗಲದ ರೈಲ್ವೇ ಗೊಲ್ಲಹಳ್ಳಿಯಲ್ಲಿ ಘಟನೆ ನಡೆದಿದೆ.

ವೇಣುಗೋಪಲ್​ ಎಂಬಾತ ದರ್ಶನ್​ ಎಂಬ ಯುವಕನನ್ನು ಚಾಕುವಿನಿಂದ ಹಿರಿದು ಕೊಲೆ ಮಾಡಿದ್ದಾನೆ.

ವೇಣುಗೋಪಾಲ್​ ಪ್ರೀತಿಸುತ್ತಿದ್ದ ಯುವತಿಯನ್ನ, ದರ್ಶನ್​ ಕೂಡ ಪ್ರೀತಿಸುತ್ತಿದ್ದ. ಆಕೆ ವೇಣುಗೋಪಾಲ್​ನನ್ನು ಬಿಟ್ಟು, ದರ್ಶನ್​ನನ್ನ ಪ್ರೀತಿಸುತ್ತಿದ್ದಳು. ಇದರಿಂದ ಕೋಪಗೊಂಡಿದ್ದ ವೇಣುಗೋಪಾಲ್​ ದರ್ಶನ್​ ಕೊಲೆ ಮಾಡಲು ಸಂಚು ರೂಪಿಸಿದ್ದನು.

ಇದೇ ಕಾರಣಕ್ಕೆ ಪಾರ್ಟಿ ಮಾಡೋ ನೆಪದಲ್ಲಿ ರಾತ್ರಿ 9.30ರ ಸುಮಾರಿಗೆ ಯುವತಿಯ ಮಾಜಿ ಲವ್ವರ್ ವೇಣುಗೋಪಾಲ್​ ಹಾಲಿ ಲವ್ವರ್​ ದರ್ಶನ್​​ರನ್ನು ತೋಟದ ಮನೆಗೆ ಕರೆಸಿದ್ದನು.

ಈ ವೇಳೆ ಮಾತಿಗೆ ಮಾತು ಬೆಳೆದು ವೇಣು ಗೋಪಾಲ್​, ಹಾಲಿ ಲವ್ವರ್​ ದರ್ಶನ್​ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಕೊಲೆ ಮಾಡ್ತಿದ್ದಂತೆ ಮಾಜಿ ಪ್ರಿಯತಮ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ.

ಸದ್ಯ ಈ ಬಗ್ಗೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತಂಡ ರಚನೆ ಮಾಡಿ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರದಲ್ಲಿ ಎಸ್ಪಿ ಸಿ.ಕೆ ಬಾಬಾ ಪ್ರತಿಕ್ರಿಯಿಸಿದ ಅವರು, ರಾತ್ರಿ 9:30 ರ ವೇಳೆ ರೈಲ್ವೆಗೊಲ್ಲಹಳ್ಳಿ ಬಳಿ ಘಟನೆ ನಡೆದಿದೆ.‌ ತೋಟದ ಮನೆಯಲ್ಲಿ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದೆ. ಘಟನೆಯಲ್ಲಿ ದರ್ಶನ್(26) ಕೊಲೆಯಾಗಿದ್ದಾನೆ. ಯುವತಿಯ ವಿಚಾರಕ್ಕೆ ತೋಟದ ಮನೆಯಲ್ಲಿ ಮಾತಿಗೆ ಮಾತು ಬೆಳೆದು ಕೊಲೆಯಲ್ಲಿ ಅಂತ್ಯವಾಗಿದೆ. ಹೊಸ ಲವರ್ ಜೊತೆ ಯುವತಿ ಮದುವೆ ಮಾಡಿಕೊಳ್ಳುವ ಪ್ಲಾನ್ ಇತ್ತು. ಯುವಕ-ಯುವತಿಯ ಪೋಷಕರು ಮದುವೆಗೆ ಒಪ್ಪಿಗೆ ಸೂಚಿಸಿದ್ದರು ಎಂದರು.

ಕೊಲೆ ಆರೋಪಿಯನ್ನು ವಶಕ್ಕೆ ಪಡೆಯಲು ಹೀಗಾಗಲೇ ಒಂದು ತಂಡ ರಚನೆ ಮಾಡಿದ್ದೇವೆ. ಆರೋಪಿಯನ್ನು ಕೂಡಲೇ ಅರೆಸ್ಟ್ ಮಾಡುತ್ತೇವೆ ಎಂದು ಹೇಳಿದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

11 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

19 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

21 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

22 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago