ಪ್ರಿಯತಮೆಗಾಗಿ ಮಾಜಿ ಹಾಗೂ ಹಾಲಿ ಲವ್ವರ್ ಗಳ ನಡುವೆ ಜಗಳ:‌ ಹಾಲಿ ಲವ್ವರ್ ಗೆ ಚಾಕುವಿನಿಂದ ಹಿರಿದು ಕೊಲೆ ಮಾಡಿದ ಮಾಜಿ ಲವ್ವರ್

ಯುವಕ ತಾನು ಪ್ರೀತಿ ಮಾಡ್ತಿದ್ದ ಯುವತಿಯನ್ನ, ಮತ್ತೊಬ್ಬ ಯುವಕ ಪ್ರೀತಿಸಿದ್ದ ಅನ್ನೋ ಕಾರಣಕ್ಕಾಗಿ ಪಾರ್ಟಿ ಮಾಡೋ ನೆಪದಲ್ಲಿ ಫಾರ್ಮ್​ಹೌಸ್​​ಗೆ ಕರೆದು ಮನೋಸೋ ಇಚ್ಚೆ ಚಾಕುವಿನಲ್ಲಿ ಇರಿದು ಕೊಲೆ ಮಾಡಿರುವ ಘಟನೆ ನೆಲಮಂಗಲದ ರೈಲ್ವೇ ಗೊಲ್ಲಹಳ್ಳಿಯಲ್ಲಿ ಘಟನೆ ನಡೆದಿದೆ.

ವೇಣುಗೋಪಲ್​ ಎಂಬಾತ ದರ್ಶನ್​ ಎಂಬ ಯುವಕನನ್ನು ಚಾಕುವಿನಿಂದ ಹಿರಿದು ಕೊಲೆ ಮಾಡಿದ್ದಾನೆ.

ವೇಣುಗೋಪಾಲ್​ ಪ್ರೀತಿಸುತ್ತಿದ್ದ ಯುವತಿಯನ್ನ, ದರ್ಶನ್​ ಕೂಡ ಪ್ರೀತಿಸುತ್ತಿದ್ದ. ಆಕೆ ವೇಣುಗೋಪಾಲ್​ನನ್ನು ಬಿಟ್ಟು, ದರ್ಶನ್​ನನ್ನ ಪ್ರೀತಿಸುತ್ತಿದ್ದಳು. ಇದರಿಂದ ಕೋಪಗೊಂಡಿದ್ದ ವೇಣುಗೋಪಾಲ್​ ದರ್ಶನ್​ ಕೊಲೆ ಮಾಡಲು ಸಂಚು ರೂಪಿಸಿದ್ದನು.

ಇದೇ ಕಾರಣಕ್ಕೆ ಪಾರ್ಟಿ ಮಾಡೋ ನೆಪದಲ್ಲಿ ರಾತ್ರಿ 9.30ರ ಸುಮಾರಿಗೆ ಯುವತಿಯ ಮಾಜಿ ಲವ್ವರ್ ವೇಣುಗೋಪಾಲ್​ ಹಾಲಿ ಲವ್ವರ್​ ದರ್ಶನ್​​ರನ್ನು ತೋಟದ ಮನೆಗೆ ಕರೆಸಿದ್ದನು.

ಈ ವೇಳೆ ಮಾತಿಗೆ ಮಾತು ಬೆಳೆದು ವೇಣು ಗೋಪಾಲ್​, ಹಾಲಿ ಲವ್ವರ್​ ದರ್ಶನ್​ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಕೊಲೆ ಮಾಡ್ತಿದ್ದಂತೆ ಮಾಜಿ ಪ್ರಿಯತಮ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ.

ಸದ್ಯ ಈ ಬಗ್ಗೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತಂಡ ರಚನೆ ಮಾಡಿ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರದಲ್ಲಿ ಎಸ್ಪಿ ಸಿ.ಕೆ ಬಾಬಾ ಪ್ರತಿಕ್ರಿಯಿಸಿದ ಅವರು, ರಾತ್ರಿ 9:30 ರ ವೇಳೆ ರೈಲ್ವೆಗೊಲ್ಲಹಳ್ಳಿ ಬಳಿ ಘಟನೆ ನಡೆದಿದೆ.‌ ತೋಟದ ಮನೆಯಲ್ಲಿ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದೆ. ಘಟನೆಯಲ್ಲಿ ದರ್ಶನ್(26) ಕೊಲೆಯಾಗಿದ್ದಾನೆ. ಯುವತಿಯ ವಿಚಾರಕ್ಕೆ ತೋಟದ ಮನೆಯಲ್ಲಿ ಮಾತಿಗೆ ಮಾತು ಬೆಳೆದು ಕೊಲೆಯಲ್ಲಿ ಅಂತ್ಯವಾಗಿದೆ. ಹೊಸ ಲವರ್ ಜೊತೆ ಯುವತಿ ಮದುವೆ ಮಾಡಿಕೊಳ್ಳುವ ಪ್ಲಾನ್ ಇತ್ತು. ಯುವಕ-ಯುವತಿಯ ಪೋಷಕರು ಮದುವೆಗೆ ಒಪ್ಪಿಗೆ ಸೂಚಿಸಿದ್ದರು ಎಂದರು.

ಕೊಲೆ ಆರೋಪಿಯನ್ನು ವಶಕ್ಕೆ ಪಡೆಯಲು ಹೀಗಾಗಲೇ ಒಂದು ತಂಡ ರಚನೆ ಮಾಡಿದ್ದೇವೆ. ಆರೋಪಿಯನ್ನು ಕೂಡಲೇ ಅರೆಸ್ಟ್ ಮಾಡುತ್ತೇವೆ ಎಂದು ಹೇಳಿದರು.

Ramesh Babu

Journalist

Recent Posts

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

4 hours ago

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

8 hours ago

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

22 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

23 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

1 day ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

1 day ago