ಪ್ರಿಯತಮೆಗಾಗಿ ಮಾಜಿ ಹಾಗೂ ಹಾಲಿ ಲವ್ವರ್ ಗಳ ನಡುವೆ ಜಗಳ:‌ ಹಾಲಿ ಲವ್ವರ್ ಗೆ ಚಾಕುವಿನಿಂದ ಹಿರಿದು ಕೊಲೆ ಮಾಡಿದ ಮಾಜಿ ಲವ್ವರ್

ಯುವಕ ತಾನು ಪ್ರೀತಿ ಮಾಡ್ತಿದ್ದ ಯುವತಿಯನ್ನ, ಮತ್ತೊಬ್ಬ ಯುವಕ ಪ್ರೀತಿಸಿದ್ದ ಅನ್ನೋ ಕಾರಣಕ್ಕಾಗಿ ಪಾರ್ಟಿ ಮಾಡೋ ನೆಪದಲ್ಲಿ ಫಾರ್ಮ್​ಹೌಸ್​​ಗೆ ಕರೆದು ಮನೋಸೋ ಇಚ್ಚೆ ಚಾಕುವಿನಲ್ಲಿ ಇರಿದು ಕೊಲೆ ಮಾಡಿರುವ ಘಟನೆ ನೆಲಮಂಗಲದ ರೈಲ್ವೇ ಗೊಲ್ಲಹಳ್ಳಿಯಲ್ಲಿ ಘಟನೆ ನಡೆದಿದೆ.

ವೇಣುಗೋಪಲ್​ ಎಂಬಾತ ದರ್ಶನ್​ ಎಂಬ ಯುವಕನನ್ನು ಚಾಕುವಿನಿಂದ ಹಿರಿದು ಕೊಲೆ ಮಾಡಿದ್ದಾನೆ.

ವೇಣುಗೋಪಾಲ್​ ಪ್ರೀತಿಸುತ್ತಿದ್ದ ಯುವತಿಯನ್ನ, ದರ್ಶನ್​ ಕೂಡ ಪ್ರೀತಿಸುತ್ತಿದ್ದ. ಆಕೆ ವೇಣುಗೋಪಾಲ್​ನನ್ನು ಬಿಟ್ಟು, ದರ್ಶನ್​ನನ್ನ ಪ್ರೀತಿಸುತ್ತಿದ್ದಳು. ಇದರಿಂದ ಕೋಪಗೊಂಡಿದ್ದ ವೇಣುಗೋಪಾಲ್​ ದರ್ಶನ್​ ಕೊಲೆ ಮಾಡಲು ಸಂಚು ರೂಪಿಸಿದ್ದನು.

ಇದೇ ಕಾರಣಕ್ಕೆ ಪಾರ್ಟಿ ಮಾಡೋ ನೆಪದಲ್ಲಿ ರಾತ್ರಿ 9.30ರ ಸುಮಾರಿಗೆ ಯುವತಿಯ ಮಾಜಿ ಲವ್ವರ್ ವೇಣುಗೋಪಾಲ್​ ಹಾಲಿ ಲವ್ವರ್​ ದರ್ಶನ್​​ರನ್ನು ತೋಟದ ಮನೆಗೆ ಕರೆಸಿದ್ದನು.

ಈ ವೇಳೆ ಮಾತಿಗೆ ಮಾತು ಬೆಳೆದು ವೇಣು ಗೋಪಾಲ್​, ಹಾಲಿ ಲವ್ವರ್​ ದರ್ಶನ್​ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಕೊಲೆ ಮಾಡ್ತಿದ್ದಂತೆ ಮಾಜಿ ಪ್ರಿಯತಮ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ.

ಸದ್ಯ ಈ ಬಗ್ಗೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತಂಡ ರಚನೆ ಮಾಡಿ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರದಲ್ಲಿ ಎಸ್ಪಿ ಸಿ.ಕೆ ಬಾಬಾ ಪ್ರತಿಕ್ರಿಯಿಸಿದ ಅವರು, ರಾತ್ರಿ 9:30 ರ ವೇಳೆ ರೈಲ್ವೆಗೊಲ್ಲಹಳ್ಳಿ ಬಳಿ ಘಟನೆ ನಡೆದಿದೆ.‌ ತೋಟದ ಮನೆಯಲ್ಲಿ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದೆ. ಘಟನೆಯಲ್ಲಿ ದರ್ಶನ್(26) ಕೊಲೆಯಾಗಿದ್ದಾನೆ. ಯುವತಿಯ ವಿಚಾರಕ್ಕೆ ತೋಟದ ಮನೆಯಲ್ಲಿ ಮಾತಿಗೆ ಮಾತು ಬೆಳೆದು ಕೊಲೆಯಲ್ಲಿ ಅಂತ್ಯವಾಗಿದೆ. ಹೊಸ ಲವರ್ ಜೊತೆ ಯುವತಿ ಮದುವೆ ಮಾಡಿಕೊಳ್ಳುವ ಪ್ಲಾನ್ ಇತ್ತು. ಯುವಕ-ಯುವತಿಯ ಪೋಷಕರು ಮದುವೆಗೆ ಒಪ್ಪಿಗೆ ಸೂಚಿಸಿದ್ದರು ಎಂದರು.

ಕೊಲೆ ಆರೋಪಿಯನ್ನು ವಶಕ್ಕೆ ಪಡೆಯಲು ಹೀಗಾಗಲೇ ಒಂದು ತಂಡ ರಚನೆ ಮಾಡಿದ್ದೇವೆ. ಆರೋಪಿಯನ್ನು ಕೂಡಲೇ ಅರೆಸ್ಟ್ ಮಾಡುತ್ತೇವೆ ಎಂದು ಹೇಳಿದರು.

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

53 minutes ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

2 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

14 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

15 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago