ಪ್ರಿಯತಮೆಗೆ ಪ್ರಿಯಕರ ಪ್ರಶ್ನೆ ಮಾಡಿದ್ದೇ ತಪ್ಪಾಯ್ತಾ?- ನನ್ನೇ ಪ್ರಶ್ನೆ ಮಾಡ್ತೀಯಾ ಎಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚೇ ಬಿಟ್ಲಾ ಪಾಪಿ ಪ್ರಿಯತಮೆ? ಪಾಪಾ ಆ ಪ್ರಿಯಕರ ಕೇಳಿದ್ದಾದ್ರು ಏನು? ಸದ್ಯ ಪ್ರಿಯಕರನ ಸ್ಥಿತಿ ಹೇಗಿದೆ? 

ಲವ್ ಸ್ಟೋರಿಯನ್ನು ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ತನ್ನ ಪ್ರಿಯಕರನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹೋಂಗಾರ್ಡ್ ರಾಣಿ ಎಂಬಾಕೆ ಕಾನ್ಸ್ ಟೇಬಲ್ ಸಂಜಯ್ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ್ದಾರೆ. ಸದ್ಯ ಕಾನ್ಸ್‌ಟೇಬಲ್- ಹೋಂ ಗಾರ್ಡ್ ಲವ್ ಸ್ಟೋರಿ ಸ್ಟೇಷನ್ ಮೆಟ್ಟಿಲೇರಿದೆ.

ಇಬ್ಬರೂ ಕೂಡ ಬಸವನಗುಡಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಹೋಂಗಾರ್ಡ್ ರಾಣಿ ಅವರಿಗೆ ಮದುವೆಯಾಗಿ ಮಕ್ಕಳಿದ್ದರೂ ಕಾನ್ಸ್‌ಟೇಬಲ್ ಜೊತೆ ಸ್ನೇಹ ಬೆಳೆಸಿದ್ದರು.

ಕಳೆದ ಎರಡು ದಿನದ ಹಿಂದೆ ಹೋಂಗಾರ್ಡ್ ರಾಣಿ ಅವರು ಕಾನ್ಸ್ ಟೇಬಲ್ ಸಂಜಯ್ ಅವರಿಗೆ ಕರೆ ಮಾಡಿ ತನ್ನ ಬಳಿಗೆ ಕರೆಸಿಕೊಂಡು ದೈಹಿಕ ಸಂಪರ್ಕ ಬೆಳೆಸಿದ್ದರು. ಈ ವೇಳೆ ಚೇತನ್ ಎಂಬಾತ ರಾಣಿಗೆ ಕರೆ ಮಾಡಿದ್ದ. ಚೇತನ್ ಎಂಬಾತ ಕರೆ ಮಾಡಿದಾಗ ಪಕ್ಕದಲ್ಲೇ ಇದ್ದ ಸಂಜಯ್ ಅನುಮಾನಗೊಂಡು ಆತ ಯಾರೂ ಎಂದು ಪ್ರಶ್ನೆ ಮಾಡಿದ್ದ.

ಬಳಿಕ ರಾಣಿ ಮೊಬೈಲ್ ಪಡೆದು ಚೆಕ್ ಮಾಡಿದಾಗ ಮತ್ತೋರ್ವನ ಜೊತೆ ಸಲಿಗೆಯಿಂದ ಚಾಟಿಂಗ್ ಮಾಡಿರುವುದು ಕಂಡುಬಂದಿದೆ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ.

ಮತ್ತೋರ್ವನೊಂದಿಗೆ ಲವ್ವಿಡವ್ವಿ ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ತನ್ನ ಪ್ರಿಯಕರನ ಮೇಲೆ ಪೆಟ್ರೋಲ್ ಹಾಕಿ ಸುಟ್ಟಿದ್ದಾರೆ.‌ ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ಕಾನ್ಸ್‌ಟೇಬಲ್ ನನ್ನ ದಾಖಲಿಸಲಾಗಿದೆ. ಸದ್ಯ ಗಾಯಾಳು ಕಾನ್ಸ್‌ಟೇಬಲ್ ಗೆ ವಿಕ್ಟೋರಿಯಾದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಕುರಿತು ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *