ಲವ್ ಸ್ಟೋರಿಯನ್ನು ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ತನ್ನ ಪ್ರಿಯಕರನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೋಂಗಾರ್ಡ್ ರಾಣಿ ಎಂಬಾಕೆ ಕಾನ್ಸ್ ಟೇಬಲ್ ಸಂಜಯ್ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ್ದಾರೆ. ಸದ್ಯ ಕಾನ್ಸ್ಟೇಬಲ್- ಹೋಂ ಗಾರ್ಡ್ ಲವ್ ಸ್ಟೋರಿ ಸ್ಟೇಷನ್ ಮೆಟ್ಟಿಲೇರಿದೆ.
ಇಬ್ಬರೂ ಕೂಡ ಬಸವನಗುಡಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಹೋಂಗಾರ್ಡ್ ರಾಣಿ ಅವರಿಗೆ ಮದುವೆಯಾಗಿ ಮಕ್ಕಳಿದ್ದರೂ ಕಾನ್ಸ್ಟೇಬಲ್ ಜೊತೆ ಸ್ನೇಹ ಬೆಳೆಸಿದ್ದರು.
ಕಳೆದ ಎರಡು ದಿನದ ಹಿಂದೆ ಹೋಂಗಾರ್ಡ್ ರಾಣಿ ಅವರು ಕಾನ್ಸ್ ಟೇಬಲ್ ಸಂಜಯ್ ಅವರಿಗೆ ಕರೆ ಮಾಡಿ ತನ್ನ ಬಳಿಗೆ ಕರೆಸಿಕೊಂಡು ದೈಹಿಕ ಸಂಪರ್ಕ ಬೆಳೆಸಿದ್ದರು. ಈ ವೇಳೆ ಚೇತನ್ ಎಂಬಾತ ರಾಣಿಗೆ ಕರೆ ಮಾಡಿದ್ದ. ಚೇತನ್ ಎಂಬಾತ ಕರೆ ಮಾಡಿದಾಗ ಪಕ್ಕದಲ್ಲೇ ಇದ್ದ ಸಂಜಯ್ ಅನುಮಾನಗೊಂಡು ಆತ ಯಾರೂ ಎಂದು ಪ್ರಶ್ನೆ ಮಾಡಿದ್ದ.
ಬಳಿಕ ರಾಣಿ ಮೊಬೈಲ್ ಪಡೆದು ಚೆಕ್ ಮಾಡಿದಾಗ ಮತ್ತೋರ್ವನ ಜೊತೆ ಸಲಿಗೆಯಿಂದ ಚಾಟಿಂಗ್ ಮಾಡಿರುವುದು ಕಂಡುಬಂದಿದೆ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ.
ಮತ್ತೋರ್ವನೊಂದಿಗೆ ಲವ್ವಿಡವ್ವಿ ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ತನ್ನ ಪ್ರಿಯಕರನ ಮೇಲೆ ಪೆಟ್ರೋಲ್ ಹಾಕಿ ಸುಟ್ಟಿದ್ದಾರೆ. ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ಕಾನ್ಸ್ಟೇಬಲ್ ನನ್ನ ದಾಖಲಿಸಲಾಗಿದೆ. ಸದ್ಯ ಗಾಯಾಳು ಕಾನ್ಸ್ಟೇಬಲ್ ಗೆ ವಿಕ್ಟೋರಿಯಾದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಕುರಿತು ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…