ಲವ್ ಸ್ಟೋರಿಯನ್ನು ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ತನ್ನ ಪ್ರಿಯಕರನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೋಂಗಾರ್ಡ್ ರಾಣಿ ಎಂಬಾಕೆ ಕಾನ್ಸ್ ಟೇಬಲ್ ಸಂಜಯ್ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ್ದಾರೆ. ಸದ್ಯ ಕಾನ್ಸ್ಟೇಬಲ್- ಹೋಂ ಗಾರ್ಡ್ ಲವ್ ಸ್ಟೋರಿ ಸ್ಟೇಷನ್ ಮೆಟ್ಟಿಲೇರಿದೆ.
ಇಬ್ಬರೂ ಕೂಡ ಬಸವನಗುಡಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಹೋಂಗಾರ್ಡ್ ರಾಣಿ ಅವರಿಗೆ ಮದುವೆಯಾಗಿ ಮಕ್ಕಳಿದ್ದರೂ ಕಾನ್ಸ್ಟೇಬಲ್ ಜೊತೆ ಸ್ನೇಹ ಬೆಳೆಸಿದ್ದರು.
ಕಳೆದ ಎರಡು ದಿನದ ಹಿಂದೆ ಹೋಂಗಾರ್ಡ್ ರಾಣಿ ಅವರು ಕಾನ್ಸ್ ಟೇಬಲ್ ಸಂಜಯ್ ಅವರಿಗೆ ಕರೆ ಮಾಡಿ ತನ್ನ ಬಳಿಗೆ ಕರೆಸಿಕೊಂಡು ದೈಹಿಕ ಸಂಪರ್ಕ ಬೆಳೆಸಿದ್ದರು. ಈ ವೇಳೆ ಚೇತನ್ ಎಂಬಾತ ರಾಣಿಗೆ ಕರೆ ಮಾಡಿದ್ದ. ಚೇತನ್ ಎಂಬಾತ ಕರೆ ಮಾಡಿದಾಗ ಪಕ್ಕದಲ್ಲೇ ಇದ್ದ ಸಂಜಯ್ ಅನುಮಾನಗೊಂಡು ಆತ ಯಾರೂ ಎಂದು ಪ್ರಶ್ನೆ ಮಾಡಿದ್ದ.
ಬಳಿಕ ರಾಣಿ ಮೊಬೈಲ್ ಪಡೆದು ಚೆಕ್ ಮಾಡಿದಾಗ ಮತ್ತೋರ್ವನ ಜೊತೆ ಸಲಿಗೆಯಿಂದ ಚಾಟಿಂಗ್ ಮಾಡಿರುವುದು ಕಂಡುಬಂದಿದೆ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ.
ಮತ್ತೋರ್ವನೊಂದಿಗೆ ಲವ್ವಿಡವ್ವಿ ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ತನ್ನ ಪ್ರಿಯಕರನ ಮೇಲೆ ಪೆಟ್ರೋಲ್ ಹಾಕಿ ಸುಟ್ಟಿದ್ದಾರೆ. ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ಕಾನ್ಸ್ಟೇಬಲ್ ನನ್ನ ದಾಖಲಿಸಲಾಗಿದೆ. ಸದ್ಯ ಗಾಯಾಳು ಕಾನ್ಸ್ಟೇಬಲ್ ಗೆ ವಿಕ್ಟೋರಿಯಾದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಕುರಿತು ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…