ಲವ್ ಸ್ಟೋರಿಯನ್ನು ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ತನ್ನ ಪ್ರಿಯಕರನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೋಂಗಾರ್ಡ್ ರಾಣಿ ಎಂಬಾಕೆ ಕಾನ್ಸ್ ಟೇಬಲ್ ಸಂಜಯ್ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ್ದಾರೆ. ಸದ್ಯ ಕಾನ್ಸ್ಟೇಬಲ್- ಹೋಂ ಗಾರ್ಡ್ ಲವ್ ಸ್ಟೋರಿ ಸ್ಟೇಷನ್ ಮೆಟ್ಟಿಲೇರಿದೆ.
ಇಬ್ಬರೂ ಕೂಡ ಬಸವನಗುಡಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಹೋಂಗಾರ್ಡ್ ರಾಣಿ ಅವರಿಗೆ ಮದುವೆಯಾಗಿ ಮಕ್ಕಳಿದ್ದರೂ ಕಾನ್ಸ್ಟೇಬಲ್ ಜೊತೆ ಸ್ನೇಹ ಬೆಳೆಸಿದ್ದರು.
ಕಳೆದ ಎರಡು ದಿನದ ಹಿಂದೆ ಹೋಂಗಾರ್ಡ್ ರಾಣಿ ಅವರು ಕಾನ್ಸ್ ಟೇಬಲ್ ಸಂಜಯ್ ಅವರಿಗೆ ಕರೆ ಮಾಡಿ ತನ್ನ ಬಳಿಗೆ ಕರೆಸಿಕೊಂಡು ದೈಹಿಕ ಸಂಪರ್ಕ ಬೆಳೆಸಿದ್ದರು. ಈ ವೇಳೆ ಚೇತನ್ ಎಂಬಾತ ರಾಣಿಗೆ ಕರೆ ಮಾಡಿದ್ದ. ಚೇತನ್ ಎಂಬಾತ ಕರೆ ಮಾಡಿದಾಗ ಪಕ್ಕದಲ್ಲೇ ಇದ್ದ ಸಂಜಯ್ ಅನುಮಾನಗೊಂಡು ಆತ ಯಾರೂ ಎಂದು ಪ್ರಶ್ನೆ ಮಾಡಿದ್ದ.
ಬಳಿಕ ರಾಣಿ ಮೊಬೈಲ್ ಪಡೆದು ಚೆಕ್ ಮಾಡಿದಾಗ ಮತ್ತೋರ್ವನ ಜೊತೆ ಸಲಿಗೆಯಿಂದ ಚಾಟಿಂಗ್ ಮಾಡಿರುವುದು ಕಂಡುಬಂದಿದೆ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ.
ಮತ್ತೋರ್ವನೊಂದಿಗೆ ಲವ್ವಿಡವ್ವಿ ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ತನ್ನ ಪ್ರಿಯಕರನ ಮೇಲೆ ಪೆಟ್ರೋಲ್ ಹಾಕಿ ಸುಟ್ಟಿದ್ದಾರೆ. ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ಕಾನ್ಸ್ಟೇಬಲ್ ನನ್ನ ದಾಖಲಿಸಲಾಗಿದೆ. ಸದ್ಯ ಗಾಯಾಳು ಕಾನ್ಸ್ಟೇಬಲ್ ಗೆ ವಿಕ್ಟೋರಿಯಾದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಕುರಿತು ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…