ಲವ್ ಸ್ಟೋರಿಯನ್ನು ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ತನ್ನ ಪ್ರಿಯಕರನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೋಂಗಾರ್ಡ್ ರಾಣಿ ಎಂಬಾಕೆ ಕಾನ್ಸ್ ಟೇಬಲ್ ಸಂಜಯ್ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ್ದಾರೆ. ಸದ್ಯ ಕಾನ್ಸ್ಟೇಬಲ್- ಹೋಂ ಗಾರ್ಡ್ ಲವ್ ಸ್ಟೋರಿ ಸ್ಟೇಷನ್ ಮೆಟ್ಟಿಲೇರಿದೆ.
ಇಬ್ಬರೂ ಕೂಡ ಬಸವನಗುಡಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಹೋಂಗಾರ್ಡ್ ರಾಣಿ ಅವರಿಗೆ ಮದುವೆಯಾಗಿ ಮಕ್ಕಳಿದ್ದರೂ ಕಾನ್ಸ್ಟೇಬಲ್ ಜೊತೆ ಸ್ನೇಹ ಬೆಳೆಸಿದ್ದರು.
ಕಳೆದ ಎರಡು ದಿನದ ಹಿಂದೆ ಹೋಂಗಾರ್ಡ್ ರಾಣಿ ಅವರು ಕಾನ್ಸ್ ಟೇಬಲ್ ಸಂಜಯ್ ಅವರಿಗೆ ಕರೆ ಮಾಡಿ ತನ್ನ ಬಳಿಗೆ ಕರೆಸಿಕೊಂಡು ದೈಹಿಕ ಸಂಪರ್ಕ ಬೆಳೆಸಿದ್ದರು. ಈ ವೇಳೆ ಚೇತನ್ ಎಂಬಾತ ರಾಣಿಗೆ ಕರೆ ಮಾಡಿದ್ದ. ಚೇತನ್ ಎಂಬಾತ ಕರೆ ಮಾಡಿದಾಗ ಪಕ್ಕದಲ್ಲೇ ಇದ್ದ ಸಂಜಯ್ ಅನುಮಾನಗೊಂಡು ಆತ ಯಾರೂ ಎಂದು ಪ್ರಶ್ನೆ ಮಾಡಿದ್ದ.
ಬಳಿಕ ರಾಣಿ ಮೊಬೈಲ್ ಪಡೆದು ಚೆಕ್ ಮಾಡಿದಾಗ ಮತ್ತೋರ್ವನ ಜೊತೆ ಸಲಿಗೆಯಿಂದ ಚಾಟಿಂಗ್ ಮಾಡಿರುವುದು ಕಂಡುಬಂದಿದೆ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ.
ಮತ್ತೋರ್ವನೊಂದಿಗೆ ಲವ್ವಿಡವ್ವಿ ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ತನ್ನ ಪ್ರಿಯಕರನ ಮೇಲೆ ಪೆಟ್ರೋಲ್ ಹಾಕಿ ಸುಟ್ಟಿದ್ದಾರೆ. ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ಕಾನ್ಸ್ಟೇಬಲ್ ನನ್ನ ದಾಖಲಿಸಲಾಗಿದೆ. ಸದ್ಯ ಗಾಯಾಳು ಕಾನ್ಸ್ಟೇಬಲ್ ಗೆ ವಿಕ್ಟೋರಿಯಾದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಕುರಿತು ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…