ಅವರಿಬ್ಬರು 4 ವರ್ಷ ಪರಸ್ಪರ ಪ್ರೀತಿಸಿದ್ರೂ ಮದುವೆಯಾಗೋಕೆ ಜಾತಿ ಅಡ್ಡ ಬಂದಿತ್ತು…ಕೊನೆಗೆ ಪ್ರಿಯತಮೆ ತಾನಾಯ್ತು ತನ್ನ ಪಾಡಾಯ್ತು ಅಂತ ಮನೆಯವರು ತೋರಿಸಿದ ಯುವಕನನ್ನ ವರಿಸಿ ಗಂಡನ ಜೊತೆ ಸುಖ ಸಂಸಾರದ ಕನಸು ಕಂಡಿದ್ದಳು..
ಆದ್ರೆ, ಮದುವೆಯಾಗಿ 20 ದಿನ ಕಳೆಯೋದ್ರೋಳಗೆ ವಿಲನ್ ಆಗಿರೋ ಆಕೆಯ ಪ್ರಿಯಕರ ಅವರಿಬ್ಬರ ಖಾಸಗಿ ವಿಡಿಯೋಗಳನ್ನ ಗಂಡನಿಗೆ ಕಳುಹಿಸಿದ್ದಾನೆ.
ಇದ್ರಿಂದ ಕೆರಳಿ ಕೆಂಡವಾದ ಆಕೆಯ ಗಂಡ ಕಟ್ಟಿದ್ದ ತಾಳಿ ಕಿತ್ತುಕೊಂಡು ಮನೆಯಿಂದ ಹೊರಹಾಕಿದ್ದಾನೆ. ಹೀಗಾಗಿ ನೊಂದ ಯುವತಿ ಸೀದಾ ಇದಕ್ಕೆಲ್ಲಾ ಪ್ರಿಯಕರನೇ ಕಾರಣ ಅಂತ ಆತನ ಮನೆಯ ಎದುರು ಧರಣಿ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಲಿಚೆರ್ಲು ಗ್ರಾಮದಲ್ಲಿ ನಡೆದಿದೆ.
ಘಟನೆಯ ವಿವರ..!
ಪಲಿಚೆರ್ಲು ಗ್ರಾಮದ ಅಂಬರೀಶ್ ಮತ್ತು ಕೆಂಪನಹಳ್ಳಿ ಗ್ರಾಮದ ಪ್ರೇಮ ಎಂಬುವವರು ಬೇರೆ ಬೇರೆ ಜಾತಿ ಬೇರೆಯಾಗಿದ್ರೂ, 4 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು..ಇಬ್ಬರು ಜೊತೆ ಜೊತೆಯಾಗಿ ಫೋಟೋ ವಿಡಿಯೋಗಳನ್ನ ಮಾಡಿಕೊಂಡಿದ್ದರಂತೆ….ಆದ್ರೆ ಈ ವಿಚಾರ ಯುವತಿ ಮನೆಯಲ್ಲಿ ಗೊತ್ತಾಗಿ ಯುವತಿಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯ ಮಾಡಿದ್ದಾರೆ. ಈ ವೇಳೆ ಪ್ರಿಯಕರ ಸಹ ಬೇರೆ ಬೇರೆ ಜಾತಿ ಇದ್ರಿಂದ ಸಮಸ್ಯೆ ಯಾಕೆ..? ನೀನು ಮನೆಯವರನ್ನ ನೋಡಿದವರನ್ನ ಮದುವೆಯಾಗುವಂತೆ ಹೇಳಿದ್ದನಂತೆ…ಹೀಗಾಗಿ ಪ್ರೇಮಾ ಬೇರೆ ಯುವಕನನ್ನ ಮದುವೆ ಮಾಡಿಕೊಂಡು ಗಂಡನ ಮನೆಯಲ್ಲಿ ಆರಾಮಾಗಿದ್ಲು..
ಆದ್ರೆ ಅಷ್ಟರಲ್ಲೇ ಪ್ರಿಯಕರ ಅಂಬರೀಶ್ ಇತರರು ಸೇರಿ ಹಳೆಯ ಪೋಟೊ ವಿಡಿಯೊಗಳನ್ನ ಗಂಡನಿಗೆ ಕಳುಹಿಸಿದ್ದಾರಂತೆ. ಇದ್ರಿಂದ ಗಂಡ ಆಕೆಯನ್ನ ಮನೆಯಿಂದ ಹೊರಹಾಕಿದ್ದಾನೆ. ಹೀಗಾಗಿ ನೊಂದ ಯುವತಿ ಪ್ರಿಯಕರ ಅಂಬರೀಶ್ ಮನೆ ಎದುರು ಧರಣಿ ನಡೆಸಿ ನ್ಯಾಯಕ್ಕಾಗಿ ಹೋರಾಟ ನಡೆಸಿದ್ದಾಳೆ. ಅಂಬರೀಶ್ ಮನೆ ಬಿಟ್ಟು ಪರಾರಿಯಾಗಿದ್ದಾನೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…