ಪ್ರಿಯತಮೆಯ ಖಾಸಗಿ ವಿಡಿಯೋಗಳನ್ನ ಗಂಡನಿಗೆ ಕಳುಹಿಸಿದ ಪ್ರಿಯಕರ: ಪ್ರಿಯಕರನ ಮನೆ ಮುಂದೆ ವಿವಾಹಿತೆ ಧರಣಿ..!

ಅವರಿಬ್ಬರು 4 ವರ್ಷ ಪರಸ್ಪರ ಪ್ರೀತಿಸಿದ್ರೂ ಮದುವೆಯಾಗೋಕೆ ಜಾತಿ ಅಡ್ಡ ಬಂದಿತ್ತು…ಕೊನೆಗೆ ಪ್ರಿಯತಮೆ ತಾನಾಯ್ತು ತನ್ನ ಪಾಡಾಯ್ತು ಅಂತ ಮನೆಯವರು ತೋರಿಸಿದ ಯುವಕನನ್ನ ವರಿಸಿ ಗಂಡನ ಜೊತೆ ಸುಖ ಸಂಸಾರದ ಕನಸು ಕಂಡಿದ್ದಳು..

ಆದ್ರೆ, ಮದುವೆಯಾಗಿ 20 ದಿನ ಕಳೆಯೋದ್ರೋಳಗೆ ವಿಲನ್ ಆಗಿರೋ ಆಕೆಯ ಪ್ರಿಯಕರ ಅವರಿಬ್ಬರ ಖಾಸಗಿ ವಿಡಿಯೋಗಳನ್ನ ಗಂಡನಿಗೆ ಕಳುಹಿಸಿದ್ದಾನೆ.

ಇದ್ರಿಂದ ಕೆರಳಿ ಕೆಂಡವಾದ ಆಕೆಯ ಗಂಡ ಕಟ್ಟಿದ್ದ ತಾಳಿ ಕಿತ್ತುಕೊಂಡು ಮನೆಯಿಂದ ಹೊರಹಾಕಿದ್ದಾನೆ. ಹೀಗಾಗಿ ನೊಂದ ಯುವತಿ ಸೀದಾ ಇದಕ್ಕೆಲ್ಲಾ ಪ್ರಿಯಕರನೇ ಕಾರಣ ಅಂತ ಆತನ ಮನೆಯ ಎದುರು ಧರಣಿ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಲಿಚೆರ್ಲು ಗ್ರಾಮದಲ್ಲಿ ನಡೆದಿದೆ.

ಘಟನೆಯ ವಿವರ..!

ಪಲಿಚೆರ್ಲು ಗ್ರಾಮದ ಅಂಬರೀಶ್ ಮತ್ತು ಕೆಂಪನಹಳ್ಳಿ ಗ್ರಾಮದ ಪ್ರೇಮ ಎಂಬುವವರು ಬೇರೆ ಬೇರೆ ಜಾತಿ ಬೇರೆಯಾಗಿದ್ರೂ, 4 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು..ಇಬ್ಬರು ಜೊತೆ ಜೊತೆಯಾಗಿ ಫೋಟೋ ವಿಡಿಯೋಗಳನ್ನ ಮಾಡಿಕೊಂಡಿದ್ದರಂತೆ….ಆದ್ರೆ ಈ ವಿಚಾರ ಯುವತಿ ಮನೆಯಲ್ಲಿ ಗೊತ್ತಾಗಿ ಯುವತಿಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯ ಮಾಡಿದ್ದಾರೆ. ಈ ವೇಳೆ ಪ್ರಿಯಕರ ಸಹ ಬೇರೆ ಬೇರೆ ಜಾತಿ ಇದ್ರಿಂದ ಸಮಸ್ಯೆ ಯಾಕೆ..? ನೀನು ಮನೆಯವರನ್ನ ನೋಡಿದವರನ್ನ ಮದುವೆಯಾಗುವಂತೆ ಹೇಳಿದ್ದನಂತೆ…ಹೀಗಾಗಿ ಪ್ರೇಮಾ ಬೇರೆ ಯುವಕನನ್ನ ಮದುವೆ ಮಾಡಿಕೊಂಡು ಗಂಡನ ಮನೆಯಲ್ಲಿ ಆರಾಮಾಗಿದ್ಲು..

ಆದ್ರೆ ಅಷ್ಟರಲ್ಲೇ ಪ್ರಿಯಕರ ಅಂಬರೀಶ್ ಇತರರು ಸೇರಿ ಹಳೆಯ ಪೋಟೊ ವಿಡಿಯೊಗಳನ್ನ ಗಂಡನಿಗೆ ಕಳುಹಿಸಿದ್ದಾರಂತೆ. ಇದ್ರಿಂದ ಗಂಡ ಆಕೆಯನ್ನ ಮನೆಯಿಂದ ಹೊರಹಾಕಿದ್ದಾನೆ. ಹೀಗಾಗಿ ನೊಂದ ಯುವತಿ ಪ್ರಿಯಕರ ಅಂಬರೀಶ್ ಮನೆ ಎದುರು ಧರಣಿ ನಡೆಸಿ ನ್ಯಾಯಕ್ಕಾಗಿ ಹೋರಾಟ ನಡೆಸಿದ್ದಾಳೆ. ಅಂಬರೀಶ್ ಮನೆ ಬಿಟ್ಟು ಪರಾರಿಯಾಗಿದ್ದಾನೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.

Ramesh Babu

Journalist

Recent Posts

ಫೆ.26ರಂದು ಪ್ರಸಿದ್ದ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ

ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…

5 hours ago

Accident Update: ನೆಲಮಂಗಲದ ಜಿಂದಾಲ್‌ ಸಮೀಪ ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರದ ಐವರ ಸಾವು ಕೇಸ್: ಮೃತರಲ್ಲಿ ಮೂವರ ಕಣ್ಣುಗಳ ದಾನ

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ…

6 hours ago

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಫಾರ್ಮ್ ಪಾರ್ಟಿ: ಸಂತಸದಿಂದ ಪ್ರಾಣಿಗಳ ಜೊತೆಯಲ್ಲಿ ಸಮಯ ಕಳೆದ ವಿದ್ಯಾರ್ಥಿಗಳು ಮತ್ತು ಪೋಷಕರು

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಶನಿವಾರದಂದು ನಡೆದ ಸೈನ್ಸ್ ಫೆಸ್ಟ್ ನಂತರ ಮಕ್ಕಳಿಗೆ ಮತ್ತು ಪೋಷಕರಿಗೆ ಮನರಂಜನೆ ಉಣಬಡಿಸುವ ಪ್ರಯುಕ್ತ ಮಧ್ಯಾಹ್ನ…

7 hours ago

Accident Update: ಹೊಸಕೋಟೆ ಸರಣಿ ಅಪಘಾತ ಪ್ರಕರಣ ಮಾಸುವ ಮುನ್ನವೇ, ನೆಲಮಂಗಲದ ಜಿಂದಾಲ್‌ ಸಮೀಪ ಮತ್ತೊಂದು ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರದ ಐವರ ಸಾವು: ಮೃತರ ವಿವರ ಇಲ್ಲಿದೆ ನೋಡಿ…

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 12 ಗಂಟೆಯ ಸುಮಾರಿಗೆ…

14 hours ago

ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಚಿನ್ನದ ಮಾಂಗಲ್ಯ ಸರ ಎಗರಿಸಿದ ಖದೀಮರು

ದೊಡ್ಡಬಳ್ಳಾಪುರ: ಶಿವರಾತ್ರಿ ಹಬ್ಬಕ್ಕೆಂದು ಮನೆಯ ಮುಂದೆ ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು, ಸರ ಕಳ್ಳರು ಎಸ್ಕೇಪ್…

17 hours ago

ನಿಕ್ಷಯ ಮಿತ್ರ (Nikshay Mitra) ಕಾರ್ಯಕ್ರಮ ವೀಕ್ಷಣೆ ಹಾಗೂ ಫುಡ್ ಕಿಟ್ ವಿತರಣೆ

ಕೇಂದ್ರ ಟಿಬಿ ಡಿವಿಷನ್, ದೆಹಲಿಯಿಂದ ನಿಕ್ಷಯ ಮಿತ್ರ ಕಾರ್ಯಕ್ರಮದ ಪ್ರಗತಿ ವೀಕ್ಷಣೆಗಾಗಿ ತಾಂತ್ರಿಕ ಸಹಾಯ ತಂಡವು ದೊಡ್ಡಬಳ್ಳಾಪುರಕ್ಕೆ ಆಗಮಿಸಿ, ನಿಕ್ಷಯ…

17 hours ago