ಅವರಿಬ್ಬರು 4 ವರ್ಷ ಪರಸ್ಪರ ಪ್ರೀತಿಸಿದ್ರೂ ಮದುವೆಯಾಗೋಕೆ ಜಾತಿ ಅಡ್ಡ ಬಂದಿತ್ತು…ಕೊನೆಗೆ ಪ್ರಿಯತಮೆ ತಾನಾಯ್ತು ತನ್ನ ಪಾಡಾಯ್ತು ಅಂತ ಮನೆಯವರು ತೋರಿಸಿದ ಯುವಕನನ್ನ ವರಿಸಿ ಗಂಡನ ಜೊತೆ ಸುಖ ಸಂಸಾರದ ಕನಸು ಕಂಡಿದ್ದಳು..
ಆದ್ರೆ, ಮದುವೆಯಾಗಿ 20 ದಿನ ಕಳೆಯೋದ್ರೋಳಗೆ ವಿಲನ್ ಆಗಿರೋ ಆಕೆಯ ಪ್ರಿಯಕರ ಅವರಿಬ್ಬರ ಖಾಸಗಿ ವಿಡಿಯೋಗಳನ್ನ ಗಂಡನಿಗೆ ಕಳುಹಿಸಿದ್ದಾನೆ.
ಇದ್ರಿಂದ ಕೆರಳಿ ಕೆಂಡವಾದ ಆಕೆಯ ಗಂಡ ಕಟ್ಟಿದ್ದ ತಾಳಿ ಕಿತ್ತುಕೊಂಡು ಮನೆಯಿಂದ ಹೊರಹಾಕಿದ್ದಾನೆ. ಹೀಗಾಗಿ ನೊಂದ ಯುವತಿ ಸೀದಾ ಇದಕ್ಕೆಲ್ಲಾ ಪ್ರಿಯಕರನೇ ಕಾರಣ ಅಂತ ಆತನ ಮನೆಯ ಎದುರು ಧರಣಿ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಲಿಚೆರ್ಲು ಗ್ರಾಮದಲ್ಲಿ ನಡೆದಿದೆ.
ಘಟನೆಯ ವಿವರ..!
ಪಲಿಚೆರ್ಲು ಗ್ರಾಮದ ಅಂಬರೀಶ್ ಮತ್ತು ಕೆಂಪನಹಳ್ಳಿ ಗ್ರಾಮದ ಪ್ರೇಮ ಎಂಬುವವರು ಬೇರೆ ಬೇರೆ ಜಾತಿ ಬೇರೆಯಾಗಿದ್ರೂ, 4 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು..ಇಬ್ಬರು ಜೊತೆ ಜೊತೆಯಾಗಿ ಫೋಟೋ ವಿಡಿಯೋಗಳನ್ನ ಮಾಡಿಕೊಂಡಿದ್ದರಂತೆ….ಆದ್ರೆ ಈ ವಿಚಾರ ಯುವತಿ ಮನೆಯಲ್ಲಿ ಗೊತ್ತಾಗಿ ಯುವತಿಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯ ಮಾಡಿದ್ದಾರೆ. ಈ ವೇಳೆ ಪ್ರಿಯಕರ ಸಹ ಬೇರೆ ಬೇರೆ ಜಾತಿ ಇದ್ರಿಂದ ಸಮಸ್ಯೆ ಯಾಕೆ..? ನೀನು ಮನೆಯವರನ್ನ ನೋಡಿದವರನ್ನ ಮದುವೆಯಾಗುವಂತೆ ಹೇಳಿದ್ದನಂತೆ…ಹೀಗಾಗಿ ಪ್ರೇಮಾ ಬೇರೆ ಯುವಕನನ್ನ ಮದುವೆ ಮಾಡಿಕೊಂಡು ಗಂಡನ ಮನೆಯಲ್ಲಿ ಆರಾಮಾಗಿದ್ಲು..
ಆದ್ರೆ ಅಷ್ಟರಲ್ಲೇ ಪ್ರಿಯಕರ ಅಂಬರೀಶ್ ಇತರರು ಸೇರಿ ಹಳೆಯ ಪೋಟೊ ವಿಡಿಯೊಗಳನ್ನ ಗಂಡನಿಗೆ ಕಳುಹಿಸಿದ್ದಾರಂತೆ. ಇದ್ರಿಂದ ಗಂಡ ಆಕೆಯನ್ನ ಮನೆಯಿಂದ ಹೊರಹಾಕಿದ್ದಾನೆ. ಹೀಗಾಗಿ ನೊಂದ ಯುವತಿ ಪ್ರಿಯಕರ ಅಂಬರೀಶ್ ಮನೆ ಎದುರು ಧರಣಿ ನಡೆಸಿ ನ್ಯಾಯಕ್ಕಾಗಿ ಹೋರಾಟ ನಡೆಸಿದ್ದಾಳೆ. ಅಂಬರೀಶ್ ಮನೆ ಬಿಟ್ಟು ಪರಾರಿಯಾಗಿದ್ದಾನೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…