ಅವರಿಬ್ಬರು 4 ವರ್ಷ ಪರಸ್ಪರ ಪ್ರೀತಿಸಿದ್ರೂ ಮದುವೆಯಾಗೋಕೆ ಜಾತಿ ಅಡ್ಡ ಬಂದಿತ್ತು…ಕೊನೆಗೆ ಪ್ರಿಯತಮೆ ತಾನಾಯ್ತು ತನ್ನ ಪಾಡಾಯ್ತು ಅಂತ ಮನೆಯವರು ತೋರಿಸಿದ ಯುವಕನನ್ನ ವರಿಸಿ ಗಂಡನ ಜೊತೆ ಸುಖ ಸಂಸಾರದ ಕನಸು ಕಂಡಿದ್ದಳು..
ಆದ್ರೆ, ಮದುವೆಯಾಗಿ 20 ದಿನ ಕಳೆಯೋದ್ರೋಳಗೆ ವಿಲನ್ ಆಗಿರೋ ಆಕೆಯ ಪ್ರಿಯಕರ ಅವರಿಬ್ಬರ ಖಾಸಗಿ ವಿಡಿಯೋಗಳನ್ನ ಗಂಡನಿಗೆ ಕಳುಹಿಸಿದ್ದಾನೆ.
ಇದ್ರಿಂದ ಕೆರಳಿ ಕೆಂಡವಾದ ಆಕೆಯ ಗಂಡ ಕಟ್ಟಿದ್ದ ತಾಳಿ ಕಿತ್ತುಕೊಂಡು ಮನೆಯಿಂದ ಹೊರಹಾಕಿದ್ದಾನೆ. ಹೀಗಾಗಿ ನೊಂದ ಯುವತಿ ಸೀದಾ ಇದಕ್ಕೆಲ್ಲಾ ಪ್ರಿಯಕರನೇ ಕಾರಣ ಅಂತ ಆತನ ಮನೆಯ ಎದುರು ಧರಣಿ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಲಿಚೆರ್ಲು ಗ್ರಾಮದಲ್ಲಿ ನಡೆದಿದೆ.
ಘಟನೆಯ ವಿವರ..!
ಪಲಿಚೆರ್ಲು ಗ್ರಾಮದ ಅಂಬರೀಶ್ ಮತ್ತು ಕೆಂಪನಹಳ್ಳಿ ಗ್ರಾಮದ ಪ್ರೇಮ ಎಂಬುವವರು ಬೇರೆ ಬೇರೆ ಜಾತಿ ಬೇರೆಯಾಗಿದ್ರೂ, 4 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು..ಇಬ್ಬರು ಜೊತೆ ಜೊತೆಯಾಗಿ ಫೋಟೋ ವಿಡಿಯೋಗಳನ್ನ ಮಾಡಿಕೊಂಡಿದ್ದರಂತೆ….ಆದ್ರೆ ಈ ವಿಚಾರ ಯುವತಿ ಮನೆಯಲ್ಲಿ ಗೊತ್ತಾಗಿ ಯುವತಿಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯ ಮಾಡಿದ್ದಾರೆ. ಈ ವೇಳೆ ಪ್ರಿಯಕರ ಸಹ ಬೇರೆ ಬೇರೆ ಜಾತಿ ಇದ್ರಿಂದ ಸಮಸ್ಯೆ ಯಾಕೆ..? ನೀನು ಮನೆಯವರನ್ನ ನೋಡಿದವರನ್ನ ಮದುವೆಯಾಗುವಂತೆ ಹೇಳಿದ್ದನಂತೆ…ಹೀಗಾಗಿ ಪ್ರೇಮಾ ಬೇರೆ ಯುವಕನನ್ನ ಮದುವೆ ಮಾಡಿಕೊಂಡು ಗಂಡನ ಮನೆಯಲ್ಲಿ ಆರಾಮಾಗಿದ್ಲು..
ಆದ್ರೆ ಅಷ್ಟರಲ್ಲೇ ಪ್ರಿಯಕರ ಅಂಬರೀಶ್ ಇತರರು ಸೇರಿ ಹಳೆಯ ಪೋಟೊ ವಿಡಿಯೊಗಳನ್ನ ಗಂಡನಿಗೆ ಕಳುಹಿಸಿದ್ದಾರಂತೆ. ಇದ್ರಿಂದ ಗಂಡ ಆಕೆಯನ್ನ ಮನೆಯಿಂದ ಹೊರಹಾಕಿದ್ದಾನೆ. ಹೀಗಾಗಿ ನೊಂದ ಯುವತಿ ಪ್ರಿಯಕರ ಅಂಬರೀಶ್ ಮನೆ ಎದುರು ಧರಣಿ ನಡೆಸಿ ನ್ಯಾಯಕ್ಕಾಗಿ ಹೋರಾಟ ನಡೆಸಿದ್ದಾಳೆ. ಅಂಬರೀಶ್ ಮನೆ ಬಿಟ್ಟು ಪರಾರಿಯಾಗಿದ್ದಾನೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…