ಅವರಿಬ್ಬರು 4 ವರ್ಷ ಪರಸ್ಪರ ಪ್ರೀತಿಸಿದ್ರೂ ಮದುವೆಯಾಗೋಕೆ ಜಾತಿ ಅಡ್ಡ ಬಂದಿತ್ತು…ಕೊನೆಗೆ ಪ್ರಿಯತಮೆ ತಾನಾಯ್ತು ತನ್ನ ಪಾಡಾಯ್ತು ಅಂತ ಮನೆಯವರು ತೋರಿಸಿದ ಯುವಕನನ್ನ ವರಿಸಿ ಗಂಡನ ಜೊತೆ ಸುಖ ಸಂಸಾರದ ಕನಸು ಕಂಡಿದ್ದಳು..
ಆದ್ರೆ, ಮದುವೆಯಾಗಿ 20 ದಿನ ಕಳೆಯೋದ್ರೋಳಗೆ ವಿಲನ್ ಆಗಿರೋ ಆಕೆಯ ಪ್ರಿಯಕರ ಅವರಿಬ್ಬರ ಖಾಸಗಿ ವಿಡಿಯೋಗಳನ್ನ ಗಂಡನಿಗೆ ಕಳುಹಿಸಿದ್ದಾನೆ.
ಇದ್ರಿಂದ ಕೆರಳಿ ಕೆಂಡವಾದ ಆಕೆಯ ಗಂಡ ಕಟ್ಟಿದ್ದ ತಾಳಿ ಕಿತ್ತುಕೊಂಡು ಮನೆಯಿಂದ ಹೊರಹಾಕಿದ್ದಾನೆ. ಹೀಗಾಗಿ ನೊಂದ ಯುವತಿ ಸೀದಾ ಇದಕ್ಕೆಲ್ಲಾ ಪ್ರಿಯಕರನೇ ಕಾರಣ ಅಂತ ಆತನ ಮನೆಯ ಎದುರು ಧರಣಿ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಲಿಚೆರ್ಲು ಗ್ರಾಮದಲ್ಲಿ ನಡೆದಿದೆ.
ಘಟನೆಯ ವಿವರ..!
ಪಲಿಚೆರ್ಲು ಗ್ರಾಮದ ಅಂಬರೀಶ್ ಮತ್ತು ಕೆಂಪನಹಳ್ಳಿ ಗ್ರಾಮದ ಪ್ರೇಮ ಎಂಬುವವರು ಬೇರೆ ಬೇರೆ ಜಾತಿ ಬೇರೆಯಾಗಿದ್ರೂ, 4 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು..ಇಬ್ಬರು ಜೊತೆ ಜೊತೆಯಾಗಿ ಫೋಟೋ ವಿಡಿಯೋಗಳನ್ನ ಮಾಡಿಕೊಂಡಿದ್ದರಂತೆ….ಆದ್ರೆ ಈ ವಿಚಾರ ಯುವತಿ ಮನೆಯಲ್ಲಿ ಗೊತ್ತಾಗಿ ಯುವತಿಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯ ಮಾಡಿದ್ದಾರೆ. ಈ ವೇಳೆ ಪ್ರಿಯಕರ ಸಹ ಬೇರೆ ಬೇರೆ ಜಾತಿ ಇದ್ರಿಂದ ಸಮಸ್ಯೆ ಯಾಕೆ..? ನೀನು ಮನೆಯವರನ್ನ ನೋಡಿದವರನ್ನ ಮದುವೆಯಾಗುವಂತೆ ಹೇಳಿದ್ದನಂತೆ…ಹೀಗಾಗಿ ಪ್ರೇಮಾ ಬೇರೆ ಯುವಕನನ್ನ ಮದುವೆ ಮಾಡಿಕೊಂಡು ಗಂಡನ ಮನೆಯಲ್ಲಿ ಆರಾಮಾಗಿದ್ಲು..
ಆದ್ರೆ ಅಷ್ಟರಲ್ಲೇ ಪ್ರಿಯಕರ ಅಂಬರೀಶ್ ಇತರರು ಸೇರಿ ಹಳೆಯ ಪೋಟೊ ವಿಡಿಯೊಗಳನ್ನ ಗಂಡನಿಗೆ ಕಳುಹಿಸಿದ್ದಾರಂತೆ. ಇದ್ರಿಂದ ಗಂಡ ಆಕೆಯನ್ನ ಮನೆಯಿಂದ ಹೊರಹಾಕಿದ್ದಾನೆ. ಹೀಗಾಗಿ ನೊಂದ ಯುವತಿ ಪ್ರಿಯಕರ ಅಂಬರೀಶ್ ಮನೆ ಎದುರು ಧರಣಿ ನಡೆಸಿ ನ್ಯಾಯಕ್ಕಾಗಿ ಹೋರಾಟ ನಡೆಸಿದ್ದಾಳೆ. ಅಂಬರೀಶ್ ಮನೆ ಬಿಟ್ಟು ಪರಾರಿಯಾಗಿದ್ದಾನೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…