ಪ್ರಿಯತಮೆಯ ಖಾಸಗಿ ವಿಡಿಯೋಗಳನ್ನ ಗಂಡನಿಗೆ ಕಳುಹಿಸಿದ ಪ್ರಿಯಕರ: ಪ್ರಿಯಕರನ ಮನೆ ಮುಂದೆ ವಿವಾಹಿತೆ ಧರಣಿ..!

ಅವರಿಬ್ಬರು 4 ವರ್ಷ ಪರಸ್ಪರ ಪ್ರೀತಿಸಿದ್ರೂ ಮದುವೆಯಾಗೋಕೆ ಜಾತಿ ಅಡ್ಡ ಬಂದಿತ್ತು…ಕೊನೆಗೆ ಪ್ರಿಯತಮೆ ತಾನಾಯ್ತು ತನ್ನ ಪಾಡಾಯ್ತು ಅಂತ ಮನೆಯವರು ತೋರಿಸಿದ ಯುವಕನನ್ನ ವರಿಸಿ ಗಂಡನ ಜೊತೆ ಸುಖ ಸಂಸಾರದ ಕನಸು ಕಂಡಿದ್ದಳು..

ಆದ್ರೆ, ಮದುವೆಯಾಗಿ 20 ದಿನ ಕಳೆಯೋದ್ರೋಳಗೆ ವಿಲನ್ ಆಗಿರೋ ಆಕೆಯ ಪ್ರಿಯಕರ ಅವರಿಬ್ಬರ ಖಾಸಗಿ ವಿಡಿಯೋಗಳನ್ನ ಗಂಡನಿಗೆ ಕಳುಹಿಸಿದ್ದಾನೆ.

ಇದ್ರಿಂದ ಕೆರಳಿ ಕೆಂಡವಾದ ಆಕೆಯ ಗಂಡ ಕಟ್ಟಿದ್ದ ತಾಳಿ ಕಿತ್ತುಕೊಂಡು ಮನೆಯಿಂದ ಹೊರಹಾಕಿದ್ದಾನೆ. ಹೀಗಾಗಿ ನೊಂದ ಯುವತಿ ಸೀದಾ ಇದಕ್ಕೆಲ್ಲಾ ಪ್ರಿಯಕರನೇ ಕಾರಣ ಅಂತ ಆತನ ಮನೆಯ ಎದುರು ಧರಣಿ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಲಿಚೆರ್ಲು ಗ್ರಾಮದಲ್ಲಿ ನಡೆದಿದೆ.

ಘಟನೆಯ ವಿವರ..!

ಪಲಿಚೆರ್ಲು ಗ್ರಾಮದ ಅಂಬರೀಶ್ ಮತ್ತು ಕೆಂಪನಹಳ್ಳಿ ಗ್ರಾಮದ ಪ್ರೇಮ ಎಂಬುವವರು ಬೇರೆ ಬೇರೆ ಜಾತಿ ಬೇರೆಯಾಗಿದ್ರೂ, 4 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು..ಇಬ್ಬರು ಜೊತೆ ಜೊತೆಯಾಗಿ ಫೋಟೋ ವಿಡಿಯೋಗಳನ್ನ ಮಾಡಿಕೊಂಡಿದ್ದರಂತೆ….ಆದ್ರೆ ಈ ವಿಚಾರ ಯುವತಿ ಮನೆಯಲ್ಲಿ ಗೊತ್ತಾಗಿ ಯುವತಿಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯ ಮಾಡಿದ್ದಾರೆ. ಈ ವೇಳೆ ಪ್ರಿಯಕರ ಸಹ ಬೇರೆ ಬೇರೆ ಜಾತಿ ಇದ್ರಿಂದ ಸಮಸ್ಯೆ ಯಾಕೆ..? ನೀನು ಮನೆಯವರನ್ನ ನೋಡಿದವರನ್ನ ಮದುವೆಯಾಗುವಂತೆ ಹೇಳಿದ್ದನಂತೆ…ಹೀಗಾಗಿ ಪ್ರೇಮಾ ಬೇರೆ ಯುವಕನನ್ನ ಮದುವೆ ಮಾಡಿಕೊಂಡು ಗಂಡನ ಮನೆಯಲ್ಲಿ ಆರಾಮಾಗಿದ್ಲು..

ಆದ್ರೆ ಅಷ್ಟರಲ್ಲೇ ಪ್ರಿಯಕರ ಅಂಬರೀಶ್ ಇತರರು ಸೇರಿ ಹಳೆಯ ಪೋಟೊ ವಿಡಿಯೊಗಳನ್ನ ಗಂಡನಿಗೆ ಕಳುಹಿಸಿದ್ದಾರಂತೆ. ಇದ್ರಿಂದ ಗಂಡ ಆಕೆಯನ್ನ ಮನೆಯಿಂದ ಹೊರಹಾಕಿದ್ದಾನೆ. ಹೀಗಾಗಿ ನೊಂದ ಯುವತಿ ಪ್ರಿಯಕರ ಅಂಬರೀಶ್ ಮನೆ ಎದುರು ಧರಣಿ ನಡೆಸಿ ನ್ಯಾಯಕ್ಕಾಗಿ ಹೋರಾಟ ನಡೆಸಿದ್ದಾಳೆ. ಅಂಬರೀಶ್ ಮನೆ ಬಿಟ್ಟು ಪರಾರಿಯಾಗಿದ್ದಾನೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

58 minutes ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

2 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

15 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

15 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

15 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

16 hours ago