ಅವರಿಬ್ಬರು 4 ವರ್ಷ ಪರಸ್ಪರ ಪ್ರೀತಿಸಿದ್ರೂ ಮದುವೆಯಾಗೋಕೆ ಜಾತಿ ಅಡ್ಡ ಬಂದಿತ್ತು…ಕೊನೆಗೆ ಪ್ರಿಯತಮೆ ತಾನಾಯ್ತು ತನ್ನ ಪಾಡಾಯ್ತು ಅಂತ ಮನೆಯವರು ತೋರಿಸಿದ ಯುವಕನನ್ನ ವರಿಸಿ ಗಂಡನ ಜೊತೆ ಸುಖ ಸಂಸಾರದ ಕನಸು ಕಂಡಿದ್ದಳು..
ಆದ್ರೆ, ಮದುವೆಯಾಗಿ 20 ದಿನ ಕಳೆಯೋದ್ರೋಳಗೆ ವಿಲನ್ ಆಗಿರೋ ಆಕೆಯ ಪ್ರಿಯಕರ ಅವರಿಬ್ಬರ ಖಾಸಗಿ ವಿಡಿಯೋಗಳನ್ನ ಗಂಡನಿಗೆ ಕಳುಹಿಸಿದ್ದಾನೆ.
ಇದ್ರಿಂದ ಕೆರಳಿ ಕೆಂಡವಾದ ಆಕೆಯ ಗಂಡ ಕಟ್ಟಿದ್ದ ತಾಳಿ ಕಿತ್ತುಕೊಂಡು ಮನೆಯಿಂದ ಹೊರಹಾಕಿದ್ದಾನೆ. ಹೀಗಾಗಿ ನೊಂದ ಯುವತಿ ಸೀದಾ ಇದಕ್ಕೆಲ್ಲಾ ಪ್ರಿಯಕರನೇ ಕಾರಣ ಅಂತ ಆತನ ಮನೆಯ ಎದುರು ಧರಣಿ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಲಿಚೆರ್ಲು ಗ್ರಾಮದಲ್ಲಿ ನಡೆದಿದೆ.
ಘಟನೆಯ ವಿವರ..!
ಪಲಿಚೆರ್ಲು ಗ್ರಾಮದ ಅಂಬರೀಶ್ ಮತ್ತು ಕೆಂಪನಹಳ್ಳಿ ಗ್ರಾಮದ ಪ್ರೇಮ ಎಂಬುವವರು ಬೇರೆ ಬೇರೆ ಜಾತಿ ಬೇರೆಯಾಗಿದ್ರೂ, 4 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು..ಇಬ್ಬರು ಜೊತೆ ಜೊತೆಯಾಗಿ ಫೋಟೋ ವಿಡಿಯೋಗಳನ್ನ ಮಾಡಿಕೊಂಡಿದ್ದರಂತೆ….ಆದ್ರೆ ಈ ವಿಚಾರ ಯುವತಿ ಮನೆಯಲ್ಲಿ ಗೊತ್ತಾಗಿ ಯುವತಿಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯ ಮಾಡಿದ್ದಾರೆ. ಈ ವೇಳೆ ಪ್ರಿಯಕರ ಸಹ ಬೇರೆ ಬೇರೆ ಜಾತಿ ಇದ್ರಿಂದ ಸಮಸ್ಯೆ ಯಾಕೆ..? ನೀನು ಮನೆಯವರನ್ನ ನೋಡಿದವರನ್ನ ಮದುವೆಯಾಗುವಂತೆ ಹೇಳಿದ್ದನಂತೆ…ಹೀಗಾಗಿ ಪ್ರೇಮಾ ಬೇರೆ ಯುವಕನನ್ನ ಮದುವೆ ಮಾಡಿಕೊಂಡು ಗಂಡನ ಮನೆಯಲ್ಲಿ ಆರಾಮಾಗಿದ್ಲು..
ಆದ್ರೆ ಅಷ್ಟರಲ್ಲೇ ಪ್ರಿಯಕರ ಅಂಬರೀಶ್ ಇತರರು ಸೇರಿ ಹಳೆಯ ಪೋಟೊ ವಿಡಿಯೊಗಳನ್ನ ಗಂಡನಿಗೆ ಕಳುಹಿಸಿದ್ದಾರಂತೆ. ಇದ್ರಿಂದ ಗಂಡ ಆಕೆಯನ್ನ ಮನೆಯಿಂದ ಹೊರಹಾಕಿದ್ದಾನೆ. ಹೀಗಾಗಿ ನೊಂದ ಯುವತಿ ಪ್ರಿಯಕರ ಅಂಬರೀಶ್ ಮನೆ ಎದುರು ಧರಣಿ ನಡೆಸಿ ನ್ಯಾಯಕ್ಕಾಗಿ ಹೋರಾಟ ನಡೆಸಿದ್ದಾಳೆ. ಅಂಬರೀಶ್ ಮನೆ ಬಿಟ್ಟು ಪರಾರಿಯಾಗಿದ್ದಾನೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…
ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…
ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…
ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…
ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ…
ನನ್ನ ಸಾವಿನೊಂದಿಗೆ ಈ ಜಗತ್ತೂ ಇಲ್ಲವಾಗುತ್ತದೆ.......... ದಿಢೀರ್ ಸಾವುಗಳ ಸುತ್ತಾ..... ಇತ್ತೀಚಿನ ಕೆಲವು ಮಾಧ್ಯಮ ವರದಿಗಳನ್ನು ನೋಡುತ್ತಿದ್ದರೆ ಅನೇಕ ಯುವಕ…