ಪ್ರೀತಿಸಿ ಏಳು ತಿಂಗಳ ಗರ್ಭಿಣಿ ಮಾಡಿ ಕೈ ಕೊಟ್ಟ ಪ್ರಿಯತಮ: ಪ್ರೀತಿಸಿದ ಯುವಕನ ಜೊತೆ ವಿವಾಹ ಮಾಡಿಸುವಂತೆ ಪ್ರಿಯತಮೆ ಪರದಾಟ

ಕಾಲೇಜಿನಲ್ಲಿ ಪ್ರೀತಿ, ಪ್ರೇಮ ಪ್ರಣಯ ಅಂತ ಜಗತ್ತನ್ನೇ ಮರೆತಿದ್ದ ಜೋಡಿಗಳು, ಇಂದು ನಡು ಬೀದಿಯಲ್ಲಿ ಹೊಡೆದಾಡಿಕೊಳ್ಳುತ್ತಿದ್ದಾರೆ. ಪ್ರೀತಿಸಿ ಕೈ ಕೊಟ್ಟ ಯುವಕನನ್ನು ಮದುವೆ ಆಗುವಂತೆ ಗರ್ಭಿಣಿ ಗೋಗರೆಯುತ್ತಿದ್ದಾಳೆ. ಪೋಷಕರ ಮಾತು ನಂಬಿಕೊಂಡು ಪ್ರಿಯತಮೆಗೆ ಕೈ ಕೊಟ್ಟು ಯುವಕ ನಡು ಬೀದಿಯಲ್ಲಿ ಏಟು ತಿಂದಿದ್ದಾನೆ.

 ಹೀಗೆ ವಿವಾಹಕ್ಕೂ ಮುನ್ನವೇ ತುಂಬು ಗರ್ಭಿಣಿಯಾಗಿರುವ ಯುವತಿ, ಯುವತಿ ಸ್ಥಿತಿಗೆ ಕಾರಣವಾದವನ ಜೊತೆ ಯುವತಿ ಬೀದಿಯಲ್ಲಿ ರಂಪಾಟ, ತನ್ನ ಮಗಳ ಸ್ಥಿತಿ ಕಂಡು  ಕಣ್ನೀರಿಡುತ್ತಿರುವ ತಾಯಿ, ಗರ್ಭಿಣಿ ಯುವತಿಯನ್ನು ಸಮಾಧಾನ ಮಾಡುತ್ತಿರುವ ಮಹಿಳೆಯರು ಈ ದೃಶ್ಯಗಳು ಕಂಡುಬಂದಿದ್ದು ಚಿಕ್ಕಬಳ್ಳಾಪುರ ಜಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಮಲ್ಲಸಂದ್ರ ಗ್ರಾಮದಲ್ಲಿ.

ಈ ಗರ್ಭಿಣಿ ಯುವತಿಯ ಹೆಸರು ಗಗನಾ (22) ಮಲ್ಲಸಂದ್ರ ಗ್ರಾಮದ ಯುವತಿ, ಬಾಗೇಪಲ್ಲಿ ನಗರದ ನ್ಯಾಷನಲ್ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತಿದ್ದಾಗ ಅದೇ ಗ್ರಾಮದ ಸೂರ್ಯಪ್ರಕಾಶ್ ಎಂಬ ಯುವಕನ ಜೊತೆಯಲ್ಲಿ ಪ್ರೀತಿ ಆರಂಭವಾಗಿದೆ. ಪ್ರೀತಿ ಹೆಚ್ಚಾದಂತೆ ಯುವತಿಯನ್ನು ಮದುವೆ ಆಗುತ್ತೇನೆ ಎಂದು ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದಾನೆ.

ಪ್ರಿಯಕರನ ಒತ್ತಾಯದ ಮೇಲೆ ನಾಲ್ಕೈದು ಬಾರಿ ಗರ್ಭಪಾತ ಕೂಡ ಮಾಡಿಸಿಕೊಂಡಿದ್ದಾಳೆ. ನಂತರ ಮತ್ತೊಮ್ಮೆ ಗರ್ಭಿಣಿ ಆದಾಗ ಗರ್ಭಪಾತ ಮಾಡಲು ಮುಂದಾಗಿದ್ದಾನೆ. ಗರ್ಭಪಾತ ಆಗದೆ ಗಗನಾ ಗರ್ಭಿಣಿಯಾಗಿರುವ ವಿಷಯ ಮನೆಯವರಿಗೆ ತಿಳಿದು, ಪ್ರಿಯಕರಿನಿಗೆ ವಿವಾಹವಾಗುವಂತೆ ಕೇಳಿದ್ದಾರೆ. ಆದರೆ, ಗರ್ಭಿಣಿ ಆಗಲು ನಾನು ಕಾರಣ ಅಲ್ಲ ಅಂತ ಪ್ರಿಯತಮೆಗೆ ಶಾಕ್ ಕೊಟ್ಟಿದ್ದಾನೆ.

ಇದಕ್ಕೆ ಕೋಪಗೊಂಡ ಪ್ರಿಯತಮೆ ಬಾಗೇಪಲ್ಲಿ ನಗರದ ನಡುರಸ್ತೆಯಲ್ಲಿ ವಿವಾಹವಾಗುವಂತೆ ರಂಪಾಟ ಮಾಡಿ, ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಲವ್ ಕಂ ಸೆಕ್ಸ್ ದೋಖಾ ಆರೋಪದಡಿ ದೂರು ದಾಖಲಿಸಿದ್ದಳು. ಮೊದಲು ಯುವಕನನ್ನು ಬಂಧಿಸಿದ್ದ ಪೊಲೀಸರು, ರಾಜಿಗೆ ಒಪ್ಪಿದ ಕಾರಣ ಯುವಕನ್ನು ಬಿಡುಗಡೆ ಮಾಡಿದರು. ಪೋಷಕರು ಜಾಮೀನಿಗೆ ಸಹಿ ಹಾಕಿ ಕೇಸ್ ವಾಪಸ್ಸು ತೆಗೆದುಕೊಂಡರೆ ನಿಮ್ಮ ಇಬ್ಬರಿಗೂ ವಿವಾಹ ಮಾಡೊದಾಗಿ ನಂಬಿಸಿದ್ದಾರೆ. ಸುಳ್ಳಿನ ಮಾತುಗಳಿಗೆ ಬೆರಗಾದ ಪ್ರಿಯತಮೆ ಗಗನಾ ಜಾಮೀನು ನೀಡುವಂತೆ ಸಹಿ ಹಾಕಿ ಪೊಲೀಸ್ ಕೇಸ್ ನಿಂದ ಮುಕ್ತಿಗೊಳಿಸಿದ್ದಳು.

ಜಾಮೀನು ಬಂದ ಬಳಿಕ ಯುವಕನ ಪೋಷಕರು ಉಲ್ಟಾ ಹೊಡೆದಿದ್ದು, ಏನ್ ಮಾಡಿಕೊಳ್ತೀಯೋ ಮಾಡಿಕೋ, ಜಪ್ಪಯ್ಯ ಅಂದರೂ ನಿನ್ನ ಜೊತೆ ನನ್ನ ಮಗನ ಮದುವೆ ನಡೆಯಲ್ಲಾ ಎಂದು ಮುಖದ ಮೇಲೆ ಹೊಡೆದಂತೆ ಹೇಳಿದ್ದಾರೆ.

ಪ್ರೀತಿ ಹೆಸರಲ್ಲಿ ಏಳು ತಿಂಗಳ ಗರ್ಭಿಣಿ ಮಾಡಿ ಪ್ರಿಯತಮ ಕೈ ಕೊಟ್ಟಿದ್ದು ಈಗ ಪ್ರಿಯತಮೆ ನ್ಯಾಯಾಲಯದ ಮೆಟ್ಟಿಲೇರಿದ್ದಾಳೆ.

ಒಟ್ಟಾರೆ ಮದುವೆಗೂ ಮುನ್ನ ತುಂಬು ಗರ್ಭಿಣಿಯಾಗಿರುವ ತಮ್ಮ ಮಗಳ ಪರಿಸ್ಥಿತಿ ಕಂಡು ತಂದೆ ತಾಯಿ, ಊರಲ್ಲಿ ತಲೆ ಎತ್ತಿ ತಿರುಗಾಡಲು ಆಗುತ್ತಿಲ್ಲ, ಇತ್ತ ಮನೆಯಲ್ಲಿ ಕಿತ್ತು ತಿನ್ನುವ ಬಡತನ, ಕೋರ್ಟ್ ಕಚೇರಿಗೂ ತಿರುಗಾಡಲು ಆಗದ ಪರಿಸ್ಥಿತಿ, ಸದ್ಯ ಒಂದಷ್ಟು ಮಹಿಳೆಯರು ಯುವತಿಯ ಬೆನ್ನಿಗೆ ನಿಂತಿದ್ದು, ಪ್ರೀತಿಸಿ ಗರ್ಭಿಣಿ ಮಾಡಿ ಕೈ ಕೊಟ್ಟ ಯುವಕನ ಜೊತೆ ವಿವಾಹ ಮಾಡಲು ನ್ಯಾಯಕ್ಕಾಗಿ ಹೋರಾಟ ನಡೆಸುತಿದ್ದಾರೆ. ಇನ್ನಾದರೂ ಯುವಕ ಯುವತಿಯನ್ನು ಮದುವೆ ಆಗುತ್ತಾನಾ..? ಕಾದು ನೋಡಬೇಕಿದೆ.

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

3 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

8 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

10 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

11 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago