ಪ್ರೀತಿಸಿ ಏಳು ತಿಂಗಳ ಗರ್ಭಿಣಿ ಮಾಡಿ ಕೈ ಕೊಟ್ಟ ಪ್ರಿಯತಮ: ಪ್ರೀತಿಸಿದ ಯುವಕನ ಜೊತೆ ವಿವಾಹ ಮಾಡಿಸುವಂತೆ ಪ್ರಿಯತಮೆ ಪರದಾಟ

ಕಾಲೇಜಿನಲ್ಲಿ ಪ್ರೀತಿ, ಪ್ರೇಮ ಪ್ರಣಯ ಅಂತ ಜಗತ್ತನ್ನೇ ಮರೆತಿದ್ದ ಜೋಡಿಗಳು, ಇಂದು ನಡು ಬೀದಿಯಲ್ಲಿ ಹೊಡೆದಾಡಿಕೊಳ್ಳುತ್ತಿದ್ದಾರೆ. ಪ್ರೀತಿಸಿ ಕೈ ಕೊಟ್ಟ ಯುವಕನನ್ನು ಮದುವೆ ಆಗುವಂತೆ ಗರ್ಭಿಣಿ ಗೋಗರೆಯುತ್ತಿದ್ದಾಳೆ. ಪೋಷಕರ ಮಾತು ನಂಬಿಕೊಂಡು ಪ್ರಿಯತಮೆಗೆ ಕೈ ಕೊಟ್ಟು ಯುವಕ ನಡು ಬೀದಿಯಲ್ಲಿ ಏಟು ತಿಂದಿದ್ದಾನೆ.

 ಹೀಗೆ ವಿವಾಹಕ್ಕೂ ಮುನ್ನವೇ ತುಂಬು ಗರ್ಭಿಣಿಯಾಗಿರುವ ಯುವತಿ, ಯುವತಿ ಸ್ಥಿತಿಗೆ ಕಾರಣವಾದವನ ಜೊತೆ ಯುವತಿ ಬೀದಿಯಲ್ಲಿ ರಂಪಾಟ, ತನ್ನ ಮಗಳ ಸ್ಥಿತಿ ಕಂಡು  ಕಣ್ನೀರಿಡುತ್ತಿರುವ ತಾಯಿ, ಗರ್ಭಿಣಿ ಯುವತಿಯನ್ನು ಸಮಾಧಾನ ಮಾಡುತ್ತಿರುವ ಮಹಿಳೆಯರು ಈ ದೃಶ್ಯಗಳು ಕಂಡುಬಂದಿದ್ದು ಚಿಕ್ಕಬಳ್ಳಾಪುರ ಜಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಮಲ್ಲಸಂದ್ರ ಗ್ರಾಮದಲ್ಲಿ.

ಈ ಗರ್ಭಿಣಿ ಯುವತಿಯ ಹೆಸರು ಗಗನಾ (22) ಮಲ್ಲಸಂದ್ರ ಗ್ರಾಮದ ಯುವತಿ, ಬಾಗೇಪಲ್ಲಿ ನಗರದ ನ್ಯಾಷನಲ್ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತಿದ್ದಾಗ ಅದೇ ಗ್ರಾಮದ ಸೂರ್ಯಪ್ರಕಾಶ್ ಎಂಬ ಯುವಕನ ಜೊತೆಯಲ್ಲಿ ಪ್ರೀತಿ ಆರಂಭವಾಗಿದೆ. ಪ್ರೀತಿ ಹೆಚ್ಚಾದಂತೆ ಯುವತಿಯನ್ನು ಮದುವೆ ಆಗುತ್ತೇನೆ ಎಂದು ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದಾನೆ.

ಪ್ರಿಯಕರನ ಒತ್ತಾಯದ ಮೇಲೆ ನಾಲ್ಕೈದು ಬಾರಿ ಗರ್ಭಪಾತ ಕೂಡ ಮಾಡಿಸಿಕೊಂಡಿದ್ದಾಳೆ. ನಂತರ ಮತ್ತೊಮ್ಮೆ ಗರ್ಭಿಣಿ ಆದಾಗ ಗರ್ಭಪಾತ ಮಾಡಲು ಮುಂದಾಗಿದ್ದಾನೆ. ಗರ್ಭಪಾತ ಆಗದೆ ಗಗನಾ ಗರ್ಭಿಣಿಯಾಗಿರುವ ವಿಷಯ ಮನೆಯವರಿಗೆ ತಿಳಿದು, ಪ್ರಿಯಕರಿನಿಗೆ ವಿವಾಹವಾಗುವಂತೆ ಕೇಳಿದ್ದಾರೆ. ಆದರೆ, ಗರ್ಭಿಣಿ ಆಗಲು ನಾನು ಕಾರಣ ಅಲ್ಲ ಅಂತ ಪ್ರಿಯತಮೆಗೆ ಶಾಕ್ ಕೊಟ್ಟಿದ್ದಾನೆ.

ಇದಕ್ಕೆ ಕೋಪಗೊಂಡ ಪ್ರಿಯತಮೆ ಬಾಗೇಪಲ್ಲಿ ನಗರದ ನಡುರಸ್ತೆಯಲ್ಲಿ ವಿವಾಹವಾಗುವಂತೆ ರಂಪಾಟ ಮಾಡಿ, ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಲವ್ ಕಂ ಸೆಕ್ಸ್ ದೋಖಾ ಆರೋಪದಡಿ ದೂರು ದಾಖಲಿಸಿದ್ದಳು. ಮೊದಲು ಯುವಕನನ್ನು ಬಂಧಿಸಿದ್ದ ಪೊಲೀಸರು, ರಾಜಿಗೆ ಒಪ್ಪಿದ ಕಾರಣ ಯುವಕನ್ನು ಬಿಡುಗಡೆ ಮಾಡಿದರು. ಪೋಷಕರು ಜಾಮೀನಿಗೆ ಸಹಿ ಹಾಕಿ ಕೇಸ್ ವಾಪಸ್ಸು ತೆಗೆದುಕೊಂಡರೆ ನಿಮ್ಮ ಇಬ್ಬರಿಗೂ ವಿವಾಹ ಮಾಡೊದಾಗಿ ನಂಬಿಸಿದ್ದಾರೆ. ಸುಳ್ಳಿನ ಮಾತುಗಳಿಗೆ ಬೆರಗಾದ ಪ್ರಿಯತಮೆ ಗಗನಾ ಜಾಮೀನು ನೀಡುವಂತೆ ಸಹಿ ಹಾಕಿ ಪೊಲೀಸ್ ಕೇಸ್ ನಿಂದ ಮುಕ್ತಿಗೊಳಿಸಿದ್ದಳು.

ಜಾಮೀನು ಬಂದ ಬಳಿಕ ಯುವಕನ ಪೋಷಕರು ಉಲ್ಟಾ ಹೊಡೆದಿದ್ದು, ಏನ್ ಮಾಡಿಕೊಳ್ತೀಯೋ ಮಾಡಿಕೋ, ಜಪ್ಪಯ್ಯ ಅಂದರೂ ನಿನ್ನ ಜೊತೆ ನನ್ನ ಮಗನ ಮದುವೆ ನಡೆಯಲ್ಲಾ ಎಂದು ಮುಖದ ಮೇಲೆ ಹೊಡೆದಂತೆ ಹೇಳಿದ್ದಾರೆ.

ಪ್ರೀತಿ ಹೆಸರಲ್ಲಿ ಏಳು ತಿಂಗಳ ಗರ್ಭಿಣಿ ಮಾಡಿ ಪ್ರಿಯತಮ ಕೈ ಕೊಟ್ಟಿದ್ದು ಈಗ ಪ್ರಿಯತಮೆ ನ್ಯಾಯಾಲಯದ ಮೆಟ್ಟಿಲೇರಿದ್ದಾಳೆ.

ಒಟ್ಟಾರೆ ಮದುವೆಗೂ ಮುನ್ನ ತುಂಬು ಗರ್ಭಿಣಿಯಾಗಿರುವ ತಮ್ಮ ಮಗಳ ಪರಿಸ್ಥಿತಿ ಕಂಡು ತಂದೆ ತಾಯಿ, ಊರಲ್ಲಿ ತಲೆ ಎತ್ತಿ ತಿರುಗಾಡಲು ಆಗುತ್ತಿಲ್ಲ, ಇತ್ತ ಮನೆಯಲ್ಲಿ ಕಿತ್ತು ತಿನ್ನುವ ಬಡತನ, ಕೋರ್ಟ್ ಕಚೇರಿಗೂ ತಿರುಗಾಡಲು ಆಗದ ಪರಿಸ್ಥಿತಿ, ಸದ್ಯ ಒಂದಷ್ಟು ಮಹಿಳೆಯರು ಯುವತಿಯ ಬೆನ್ನಿಗೆ ನಿಂತಿದ್ದು, ಪ್ರೀತಿಸಿ ಗರ್ಭಿಣಿ ಮಾಡಿ ಕೈ ಕೊಟ್ಟ ಯುವಕನ ಜೊತೆ ವಿವಾಹ ಮಾಡಲು ನ್ಯಾಯಕ್ಕಾಗಿ ಹೋರಾಟ ನಡೆಸುತಿದ್ದಾರೆ. ಇನ್ನಾದರೂ ಯುವಕ ಯುವತಿಯನ್ನು ಮದುವೆ ಆಗುತ್ತಾನಾ..? ಕಾದು ನೋಡಬೇಕಿದೆ.

Ramesh Babu

Journalist

Recent Posts

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

3 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

15 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

18 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

19 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

22 hours ago

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

23 hours ago