ಪ್ರೀತಿಸಿ ಕೈ ಹಿಡಿದ ಗಂಡ ಕುಡುಕನಾದ.. ಪರಿಚಯಸ್ಥ ಪ್ರಿಯಕರನಾದ; ಹೆಂಡತಿ ಹುಡ್ಕೊಂಡ್ ಬಂದು ಆಕೆಯ ಉಸಿರು ತೆಗೆದ ಕುಡುಕ ಗಂಡ

 

ಪ್ರೀತಿಸಿ ಮದುವೆಯಾದ ಗಂಡ ಕುಡುಕನಾದ, ಗಂಡನ ಕುಡಿತದ ಚಟಕ್ಕೆ ಬೇಸತ್ತ ಅವಳು ಪರಿಯಸ್ಥನ ಪ್ರೀತಿಯ ಬಲೆಗೆ ಬಿದ್ದು, ದೇವಸ್ಥಾನಕ್ಕೆ ಹೋಗುವುದಾಗಿ ಗಂಡನ ಮನೆಯಿಂದ ಬಂದವಳು ಪ್ರಿಯಕರನ ಜೊತೆ ಒಂದಾಗಿದ್ದಳು. ಗಂಡನ ಮನೆಯಿಂದ ಬಂದು ವಾರವಾಗಿತ್ತು ಅಷ್ಟೇ ಪ್ರಿಯಕರನ ಮನೆಯಲ್ಲಿ ಹೆಣವಾಗಿದ್ದಾಳೆ.

ಮೃತ ಭಾರತಿ ಆಂಧ್ರಪ್ರದೇಶದ ಪುಲ್ಮಿತ್ತಿ ಗ್ರಾಮದವಳು, ಅಕ್ಕನ ಮದುವೆಗೆಂದ್ದು ಬಂದವಳಿಗೆ ಮಧುಗಿರಿ ತಾಲೂಕಿನ ಚಿಕ್ಕದಾಳವಟ ಗ್ರಾಮದ ಹರೀಶ್ ಪರಿಚಯವಾಗಿತ್ತು, ಪ್ರೀತಿಯ ಬಲೆಗೆ ಬಿದ್ದು 15 ವರ್ಷಗಳ ಹಿಂದೆ ಮದುವೆಯಾಗಿದ್ದರು, ಇವರ ದಾಪಂತ್ಯಕ್ಕೆ ಇಬ್ಬರು ಮಕ್ಕಳು ಸಹ ಇದ್ದರು. ಕೈಹಿಡಿದ ಹರೀಶ್ ಕುಡುಕನಾಗಿದ್ದ, ಕುಡುಕ ಗಂಡನಿಂದ ಬೇಸತ್ತಿದ್ದ ಭಾರತಿಗೆ ಅದೇ ಗ್ರಾಮದ ಗಂಗರಾಜ್ ಪರಿಚಯವಾಗಿತ್ತು. ಈ ಗಂಗರಾಜ್ ಕೋಳೂರಿನ ದ್ರಾಕ್ಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ, ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿದ ಭಾರತಿ ಮಗಳನ್ನು ಕರೆದುಕೊಂಡು ಬಂದು ಗಂಗರಾಜ್ ಜೊತೆ ವಾಸವಾಗಿದ್ದಳು.

ಮನೆ ಬಿಟ್ಟು ಹೋದ ಹೆಂಡತಿ ಬೆನ್ನತ್ತ ಹರೀಶ್ ಗೆ ಕೋಳೂರು ಗ್ರಾಮದಲ್ಲಿ ಗಂಗರಾಜ್ ಜೊತೆ ಇರುವ ಮಾಹಿತಿ ತಿಳಿಯುತ್ತೆ. ಹೆಂಡತಿಯನ್ನ ಕರೆದುಕೊಂಡು ಹೋಗಲು ಹರೀಶ್ ಕಳೆದ ಮಂಗಳವಾರ ಗಂಗರಾಜ್ ಮನೆಗೆ ಬಂದಿದ್ದಾನೆ, ಮರುದಿನ ಬೆಳಗ್ಗೆ ಕೆಲಸ ನಿಮಿತ್ತ ಗಂಗರಾಜ್ ಸಂಬಂಧಿಕರ ಮನೆಗೆ ಹೋಗಿದ್ದ, ಈ ವೇಳೆ ಭಾರತಿ ಮತ್ತು ಹರೀಶ್ ನಡುವೆ ಜಗಳವಾಗಿದೆ, ಭಾರತಿ ಕತ್ತು ಬಿಗಿದು ಹರೀಶ್ ಆಕೆಯ ಉಸಿರು ನಿಲ್ಲಿಸಿ ಮಗಳನ್ನು ಕರೆದುಕೊಂಡು ಪರಾರಿಯಾಗಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,‌ ಸದ್ಯ ಆರೋಪಿ ಹರೀಶ್ ನನ್ನ ಪೊಲೀಸರು ಬಂಧಿಸಿದ್ದಾರೆ.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

2 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

2 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

6 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

8 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

11 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

15 hours ago