ಪ್ರೀತಿಸಿ ಕೈ ಹಿಡಿದ ಗಂಡ ಕುಡುಕನಾದ.. ಪರಿಚಯಸ್ಥ ಪ್ರಿಯಕರನಾದ; ಹೆಂಡತಿ ಹುಡ್ಕೊಂಡ್ ಬಂದು ಆಕೆಯ ಉಸಿರು ತೆಗೆದ ಕುಡುಕ ಗಂಡ

 

ಪ್ರೀತಿಸಿ ಮದುವೆಯಾದ ಗಂಡ ಕುಡುಕನಾದ, ಗಂಡನ ಕುಡಿತದ ಚಟಕ್ಕೆ ಬೇಸತ್ತ ಅವಳು ಪರಿಯಸ್ಥನ ಪ್ರೀತಿಯ ಬಲೆಗೆ ಬಿದ್ದು, ದೇವಸ್ಥಾನಕ್ಕೆ ಹೋಗುವುದಾಗಿ ಗಂಡನ ಮನೆಯಿಂದ ಬಂದವಳು ಪ್ರಿಯಕರನ ಜೊತೆ ಒಂದಾಗಿದ್ದಳು. ಗಂಡನ ಮನೆಯಿಂದ ಬಂದು ವಾರವಾಗಿತ್ತು ಅಷ್ಟೇ ಪ್ರಿಯಕರನ ಮನೆಯಲ್ಲಿ ಹೆಣವಾಗಿದ್ದಾಳೆ.

ಮೃತ ಭಾರತಿ ಆಂಧ್ರಪ್ರದೇಶದ ಪುಲ್ಮಿತ್ತಿ ಗ್ರಾಮದವಳು, ಅಕ್ಕನ ಮದುವೆಗೆಂದ್ದು ಬಂದವಳಿಗೆ ಮಧುಗಿರಿ ತಾಲೂಕಿನ ಚಿಕ್ಕದಾಳವಟ ಗ್ರಾಮದ ಹರೀಶ್ ಪರಿಚಯವಾಗಿತ್ತು, ಪ್ರೀತಿಯ ಬಲೆಗೆ ಬಿದ್ದು 15 ವರ್ಷಗಳ ಹಿಂದೆ ಮದುವೆಯಾಗಿದ್ದರು, ಇವರ ದಾಪಂತ್ಯಕ್ಕೆ ಇಬ್ಬರು ಮಕ್ಕಳು ಸಹ ಇದ್ದರು. ಕೈಹಿಡಿದ ಹರೀಶ್ ಕುಡುಕನಾಗಿದ್ದ, ಕುಡುಕ ಗಂಡನಿಂದ ಬೇಸತ್ತಿದ್ದ ಭಾರತಿಗೆ ಅದೇ ಗ್ರಾಮದ ಗಂಗರಾಜ್ ಪರಿಚಯವಾಗಿತ್ತು. ಈ ಗಂಗರಾಜ್ ಕೋಳೂರಿನ ದ್ರಾಕ್ಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ, ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿದ ಭಾರತಿ ಮಗಳನ್ನು ಕರೆದುಕೊಂಡು ಬಂದು ಗಂಗರಾಜ್ ಜೊತೆ ವಾಸವಾಗಿದ್ದಳು.

ಮನೆ ಬಿಟ್ಟು ಹೋದ ಹೆಂಡತಿ ಬೆನ್ನತ್ತ ಹರೀಶ್ ಗೆ ಕೋಳೂರು ಗ್ರಾಮದಲ್ಲಿ ಗಂಗರಾಜ್ ಜೊತೆ ಇರುವ ಮಾಹಿತಿ ತಿಳಿಯುತ್ತೆ. ಹೆಂಡತಿಯನ್ನ ಕರೆದುಕೊಂಡು ಹೋಗಲು ಹರೀಶ್ ಕಳೆದ ಮಂಗಳವಾರ ಗಂಗರಾಜ್ ಮನೆಗೆ ಬಂದಿದ್ದಾನೆ, ಮರುದಿನ ಬೆಳಗ್ಗೆ ಕೆಲಸ ನಿಮಿತ್ತ ಗಂಗರಾಜ್ ಸಂಬಂಧಿಕರ ಮನೆಗೆ ಹೋಗಿದ್ದ, ಈ ವೇಳೆ ಭಾರತಿ ಮತ್ತು ಹರೀಶ್ ನಡುವೆ ಜಗಳವಾಗಿದೆ, ಭಾರತಿ ಕತ್ತು ಬಿಗಿದು ಹರೀಶ್ ಆಕೆಯ ಉಸಿರು ನಿಲ್ಲಿಸಿ ಮಗಳನ್ನು ಕರೆದುಕೊಂಡು ಪರಾರಿಯಾಗಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,‌ ಸದ್ಯ ಆರೋಪಿ ಹರೀಶ್ ನನ್ನ ಪೊಲೀಸರು ಬಂಧಿಸಿದ್ದಾರೆ.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

1 hour ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

2 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

7 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

9 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

12 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

13 hours ago