ಪ್ರೀತಿಸಿ ಕೈ ಹಿಡಿದ ಗಂಡ ಕುಡುಕನಾದ.. ಪರಿಚಯಸ್ಥ ಪ್ರಿಯಕರನಾದ; ಹೆಂಡತಿ ಹುಡ್ಕೊಂಡ್ ಬಂದು ಆಕೆಯ ಉಸಿರು ತೆಗೆದ ಕುಡುಕ ಗಂಡ

 

ಪ್ರೀತಿಸಿ ಮದುವೆಯಾದ ಗಂಡ ಕುಡುಕನಾದ, ಗಂಡನ ಕುಡಿತದ ಚಟಕ್ಕೆ ಬೇಸತ್ತ ಅವಳು ಪರಿಯಸ್ಥನ ಪ್ರೀತಿಯ ಬಲೆಗೆ ಬಿದ್ದು, ದೇವಸ್ಥಾನಕ್ಕೆ ಹೋಗುವುದಾಗಿ ಗಂಡನ ಮನೆಯಿಂದ ಬಂದವಳು ಪ್ರಿಯಕರನ ಜೊತೆ ಒಂದಾಗಿದ್ದಳು. ಗಂಡನ ಮನೆಯಿಂದ ಬಂದು ವಾರವಾಗಿತ್ತು ಅಷ್ಟೇ ಪ್ರಿಯಕರನ ಮನೆಯಲ್ಲಿ ಹೆಣವಾಗಿದ್ದಾಳೆ.

ಮೃತ ಭಾರತಿ ಆಂಧ್ರಪ್ರದೇಶದ ಪುಲ್ಮಿತ್ತಿ ಗ್ರಾಮದವಳು, ಅಕ್ಕನ ಮದುವೆಗೆಂದ್ದು ಬಂದವಳಿಗೆ ಮಧುಗಿರಿ ತಾಲೂಕಿನ ಚಿಕ್ಕದಾಳವಟ ಗ್ರಾಮದ ಹರೀಶ್ ಪರಿಚಯವಾಗಿತ್ತು, ಪ್ರೀತಿಯ ಬಲೆಗೆ ಬಿದ್ದು 15 ವರ್ಷಗಳ ಹಿಂದೆ ಮದುವೆಯಾಗಿದ್ದರು, ಇವರ ದಾಪಂತ್ಯಕ್ಕೆ ಇಬ್ಬರು ಮಕ್ಕಳು ಸಹ ಇದ್ದರು. ಕೈಹಿಡಿದ ಹರೀಶ್ ಕುಡುಕನಾಗಿದ್ದ, ಕುಡುಕ ಗಂಡನಿಂದ ಬೇಸತ್ತಿದ್ದ ಭಾರತಿಗೆ ಅದೇ ಗ್ರಾಮದ ಗಂಗರಾಜ್ ಪರಿಚಯವಾಗಿತ್ತು. ಈ ಗಂಗರಾಜ್ ಕೋಳೂರಿನ ದ್ರಾಕ್ಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ, ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿದ ಭಾರತಿ ಮಗಳನ್ನು ಕರೆದುಕೊಂಡು ಬಂದು ಗಂಗರಾಜ್ ಜೊತೆ ವಾಸವಾಗಿದ್ದಳು.

ಮನೆ ಬಿಟ್ಟು ಹೋದ ಹೆಂಡತಿ ಬೆನ್ನತ್ತ ಹರೀಶ್ ಗೆ ಕೋಳೂರು ಗ್ರಾಮದಲ್ಲಿ ಗಂಗರಾಜ್ ಜೊತೆ ಇರುವ ಮಾಹಿತಿ ತಿಳಿಯುತ್ತೆ. ಹೆಂಡತಿಯನ್ನ ಕರೆದುಕೊಂಡು ಹೋಗಲು ಹರೀಶ್ ಕಳೆದ ಮಂಗಳವಾರ ಗಂಗರಾಜ್ ಮನೆಗೆ ಬಂದಿದ್ದಾನೆ, ಮರುದಿನ ಬೆಳಗ್ಗೆ ಕೆಲಸ ನಿಮಿತ್ತ ಗಂಗರಾಜ್ ಸಂಬಂಧಿಕರ ಮನೆಗೆ ಹೋಗಿದ್ದ, ಈ ವೇಳೆ ಭಾರತಿ ಮತ್ತು ಹರೀಶ್ ನಡುವೆ ಜಗಳವಾಗಿದೆ, ಭಾರತಿ ಕತ್ತು ಬಿಗಿದು ಹರೀಶ್ ಆಕೆಯ ಉಸಿರು ನಿಲ್ಲಿಸಿ ಮಗಳನ್ನು ಕರೆದುಕೊಂಡು ಪರಾರಿಯಾಗಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,‌ ಸದ್ಯ ಆರೋಪಿ ಹರೀಶ್ ನನ್ನ ಪೊಲೀಸರು ಬಂಧಿಸಿದ್ದಾರೆ.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

13 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

13 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

14 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

14 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

16 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

18 hours ago