ಪ್ರೀತಿಸಿ ಕೈ ಹಿಡಿದ ಗಂಡ ಕುಡುಕನಾದ.. ಪರಿಚಯಸ್ಥ ಪ್ರಿಯಕರನಾದ; ಹೆಂಡತಿ ಹುಡ್ಕೊಂಡ್ ಬಂದು ಆಕೆಯ ಉಸಿರು ತೆಗೆದ ಕುಡುಕ ಗಂಡ

 

ಪ್ರೀತಿಸಿ ಮದುವೆಯಾದ ಗಂಡ ಕುಡುಕನಾದ, ಗಂಡನ ಕುಡಿತದ ಚಟಕ್ಕೆ ಬೇಸತ್ತ ಅವಳು ಪರಿಯಸ್ಥನ ಪ್ರೀತಿಯ ಬಲೆಗೆ ಬಿದ್ದು, ದೇವಸ್ಥಾನಕ್ಕೆ ಹೋಗುವುದಾಗಿ ಗಂಡನ ಮನೆಯಿಂದ ಬಂದವಳು ಪ್ರಿಯಕರನ ಜೊತೆ ಒಂದಾಗಿದ್ದಳು. ಗಂಡನ ಮನೆಯಿಂದ ಬಂದು ವಾರವಾಗಿತ್ತು ಅಷ್ಟೇ ಪ್ರಿಯಕರನ ಮನೆಯಲ್ಲಿ ಹೆಣವಾಗಿದ್ದಾಳೆ.

ಮೃತ ಭಾರತಿ ಆಂಧ್ರಪ್ರದೇಶದ ಪುಲ್ಮಿತ್ತಿ ಗ್ರಾಮದವಳು, ಅಕ್ಕನ ಮದುವೆಗೆಂದ್ದು ಬಂದವಳಿಗೆ ಮಧುಗಿರಿ ತಾಲೂಕಿನ ಚಿಕ್ಕದಾಳವಟ ಗ್ರಾಮದ ಹರೀಶ್ ಪರಿಚಯವಾಗಿತ್ತು, ಪ್ರೀತಿಯ ಬಲೆಗೆ ಬಿದ್ದು 15 ವರ್ಷಗಳ ಹಿಂದೆ ಮದುವೆಯಾಗಿದ್ದರು, ಇವರ ದಾಪಂತ್ಯಕ್ಕೆ ಇಬ್ಬರು ಮಕ್ಕಳು ಸಹ ಇದ್ದರು. ಕೈಹಿಡಿದ ಹರೀಶ್ ಕುಡುಕನಾಗಿದ್ದ, ಕುಡುಕ ಗಂಡನಿಂದ ಬೇಸತ್ತಿದ್ದ ಭಾರತಿಗೆ ಅದೇ ಗ್ರಾಮದ ಗಂಗರಾಜ್ ಪರಿಚಯವಾಗಿತ್ತು. ಈ ಗಂಗರಾಜ್ ಕೋಳೂರಿನ ದ್ರಾಕ್ಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ, ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿದ ಭಾರತಿ ಮಗಳನ್ನು ಕರೆದುಕೊಂಡು ಬಂದು ಗಂಗರಾಜ್ ಜೊತೆ ವಾಸವಾಗಿದ್ದಳು.

ಮನೆ ಬಿಟ್ಟು ಹೋದ ಹೆಂಡತಿ ಬೆನ್ನತ್ತ ಹರೀಶ್ ಗೆ ಕೋಳೂರು ಗ್ರಾಮದಲ್ಲಿ ಗಂಗರಾಜ್ ಜೊತೆ ಇರುವ ಮಾಹಿತಿ ತಿಳಿಯುತ್ತೆ. ಹೆಂಡತಿಯನ್ನ ಕರೆದುಕೊಂಡು ಹೋಗಲು ಹರೀಶ್ ಕಳೆದ ಮಂಗಳವಾರ ಗಂಗರಾಜ್ ಮನೆಗೆ ಬಂದಿದ್ದಾನೆ, ಮರುದಿನ ಬೆಳಗ್ಗೆ ಕೆಲಸ ನಿಮಿತ್ತ ಗಂಗರಾಜ್ ಸಂಬಂಧಿಕರ ಮನೆಗೆ ಹೋಗಿದ್ದ, ಈ ವೇಳೆ ಭಾರತಿ ಮತ್ತು ಹರೀಶ್ ನಡುವೆ ಜಗಳವಾಗಿದೆ, ಭಾರತಿ ಕತ್ತು ಬಿಗಿದು ಹರೀಶ್ ಆಕೆಯ ಉಸಿರು ನಿಲ್ಲಿಸಿ ಮಗಳನ್ನು ಕರೆದುಕೊಂಡು ಪರಾರಿಯಾಗಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,‌ ಸದ್ಯ ಆರೋಪಿ ಹರೀಶ್ ನನ್ನ ಪೊಲೀಸರು ಬಂಧಿಸಿದ್ದಾರೆ.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

22 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago