ಪ್ರೀತಿಸಿ ಕೈ ಹಿಡಿದ ಗಂಡ ಕುಡುಕನಾದ.. ಪರಿಚಯಸ್ಥ ಪ್ರಿಯಕರನಾದ; ಹೆಂಡತಿ ಹುಡ್ಕೊಂಡ್ ಬಂದು ಆಕೆಯ ಉಸಿರು ತೆಗೆದ ಕುಡುಕ ಗಂಡ

 

ಪ್ರೀತಿಸಿ ಮದುವೆಯಾದ ಗಂಡ ಕುಡುಕನಾದ, ಗಂಡನ ಕುಡಿತದ ಚಟಕ್ಕೆ ಬೇಸತ್ತ ಅವಳು ಪರಿಯಸ್ಥನ ಪ್ರೀತಿಯ ಬಲೆಗೆ ಬಿದ್ದು, ದೇವಸ್ಥಾನಕ್ಕೆ ಹೋಗುವುದಾಗಿ ಗಂಡನ ಮನೆಯಿಂದ ಬಂದವಳು ಪ್ರಿಯಕರನ ಜೊತೆ ಒಂದಾಗಿದ್ದಳು. ಗಂಡನ ಮನೆಯಿಂದ ಬಂದು ವಾರವಾಗಿತ್ತು ಅಷ್ಟೇ ಪ್ರಿಯಕರನ ಮನೆಯಲ್ಲಿ ಹೆಣವಾಗಿದ್ದಾಳೆ.

ಮೃತ ಭಾರತಿ ಆಂಧ್ರಪ್ರದೇಶದ ಪುಲ್ಮಿತ್ತಿ ಗ್ರಾಮದವಳು, ಅಕ್ಕನ ಮದುವೆಗೆಂದ್ದು ಬಂದವಳಿಗೆ ಮಧುಗಿರಿ ತಾಲೂಕಿನ ಚಿಕ್ಕದಾಳವಟ ಗ್ರಾಮದ ಹರೀಶ್ ಪರಿಚಯವಾಗಿತ್ತು, ಪ್ರೀತಿಯ ಬಲೆಗೆ ಬಿದ್ದು 15 ವರ್ಷಗಳ ಹಿಂದೆ ಮದುವೆಯಾಗಿದ್ದರು, ಇವರ ದಾಪಂತ್ಯಕ್ಕೆ ಇಬ್ಬರು ಮಕ್ಕಳು ಸಹ ಇದ್ದರು. ಕೈಹಿಡಿದ ಹರೀಶ್ ಕುಡುಕನಾಗಿದ್ದ, ಕುಡುಕ ಗಂಡನಿಂದ ಬೇಸತ್ತಿದ್ದ ಭಾರತಿಗೆ ಅದೇ ಗ್ರಾಮದ ಗಂಗರಾಜ್ ಪರಿಚಯವಾಗಿತ್ತು. ಈ ಗಂಗರಾಜ್ ಕೋಳೂರಿನ ದ್ರಾಕ್ಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ, ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿದ ಭಾರತಿ ಮಗಳನ್ನು ಕರೆದುಕೊಂಡು ಬಂದು ಗಂಗರಾಜ್ ಜೊತೆ ವಾಸವಾಗಿದ್ದಳು.

ಮನೆ ಬಿಟ್ಟು ಹೋದ ಹೆಂಡತಿ ಬೆನ್ನತ್ತ ಹರೀಶ್ ಗೆ ಕೋಳೂರು ಗ್ರಾಮದಲ್ಲಿ ಗಂಗರಾಜ್ ಜೊತೆ ಇರುವ ಮಾಹಿತಿ ತಿಳಿಯುತ್ತೆ. ಹೆಂಡತಿಯನ್ನ ಕರೆದುಕೊಂಡು ಹೋಗಲು ಹರೀಶ್ ಕಳೆದ ಮಂಗಳವಾರ ಗಂಗರಾಜ್ ಮನೆಗೆ ಬಂದಿದ್ದಾನೆ, ಮರುದಿನ ಬೆಳಗ್ಗೆ ಕೆಲಸ ನಿಮಿತ್ತ ಗಂಗರಾಜ್ ಸಂಬಂಧಿಕರ ಮನೆಗೆ ಹೋಗಿದ್ದ, ಈ ವೇಳೆ ಭಾರತಿ ಮತ್ತು ಹರೀಶ್ ನಡುವೆ ಜಗಳವಾಗಿದೆ, ಭಾರತಿ ಕತ್ತು ಬಿಗಿದು ಹರೀಶ್ ಆಕೆಯ ಉಸಿರು ನಿಲ್ಲಿಸಿ ಮಗಳನ್ನು ಕರೆದುಕೊಂಡು ಪರಾರಿಯಾಗಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,‌ ಸದ್ಯ ಆರೋಪಿ ಹರೀಶ್ ನನ್ನ ಪೊಲೀಸರು ಬಂಧಿಸಿದ್ದಾರೆ.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

15 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

2 days ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

3 days ago