ಪ್ರೀತಿಸಿ ಕೈ ಹಿಡಿದ ಗಂಡ ಕುಡುಕನಾದ.. ಪರಿಚಯಸ್ಥ ಪ್ರಿಯಕರನಾದ; ಹೆಂಡತಿ ಹುಡ್ಕೊಂಡ್ ಬಂದು ಆಕೆಯ ಉಸಿರು ತೆಗೆದ ಕುಡುಕ ಗಂಡ

 

ಪ್ರೀತಿಸಿ ಮದುವೆಯಾದ ಗಂಡ ಕುಡುಕನಾದ, ಗಂಡನ ಕುಡಿತದ ಚಟಕ್ಕೆ ಬೇಸತ್ತ ಅವಳು ಪರಿಯಸ್ಥನ ಪ್ರೀತಿಯ ಬಲೆಗೆ ಬಿದ್ದು, ದೇವಸ್ಥಾನಕ್ಕೆ ಹೋಗುವುದಾಗಿ ಗಂಡನ ಮನೆಯಿಂದ ಬಂದವಳು ಪ್ರಿಯಕರನ ಜೊತೆ ಒಂದಾಗಿದ್ದಳು. ಗಂಡನ ಮನೆಯಿಂದ ಬಂದು ವಾರವಾಗಿತ್ತು ಅಷ್ಟೇ ಪ್ರಿಯಕರನ ಮನೆಯಲ್ಲಿ ಹೆಣವಾಗಿದ್ದಾಳೆ.

ಮೃತ ಭಾರತಿ ಆಂಧ್ರಪ್ರದೇಶದ ಪುಲ್ಮಿತ್ತಿ ಗ್ರಾಮದವಳು, ಅಕ್ಕನ ಮದುವೆಗೆಂದ್ದು ಬಂದವಳಿಗೆ ಮಧುಗಿರಿ ತಾಲೂಕಿನ ಚಿಕ್ಕದಾಳವಟ ಗ್ರಾಮದ ಹರೀಶ್ ಪರಿಚಯವಾಗಿತ್ತು, ಪ್ರೀತಿಯ ಬಲೆಗೆ ಬಿದ್ದು 15 ವರ್ಷಗಳ ಹಿಂದೆ ಮದುವೆಯಾಗಿದ್ದರು, ಇವರ ದಾಪಂತ್ಯಕ್ಕೆ ಇಬ್ಬರು ಮಕ್ಕಳು ಸಹ ಇದ್ದರು. ಕೈಹಿಡಿದ ಹರೀಶ್ ಕುಡುಕನಾಗಿದ್ದ, ಕುಡುಕ ಗಂಡನಿಂದ ಬೇಸತ್ತಿದ್ದ ಭಾರತಿಗೆ ಅದೇ ಗ್ರಾಮದ ಗಂಗರಾಜ್ ಪರಿಚಯವಾಗಿತ್ತು. ಈ ಗಂಗರಾಜ್ ಕೋಳೂರಿನ ದ್ರಾಕ್ಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ, ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿದ ಭಾರತಿ ಮಗಳನ್ನು ಕರೆದುಕೊಂಡು ಬಂದು ಗಂಗರಾಜ್ ಜೊತೆ ವಾಸವಾಗಿದ್ದಳು.

ಮನೆ ಬಿಟ್ಟು ಹೋದ ಹೆಂಡತಿ ಬೆನ್ನತ್ತ ಹರೀಶ್ ಗೆ ಕೋಳೂರು ಗ್ರಾಮದಲ್ಲಿ ಗಂಗರಾಜ್ ಜೊತೆ ಇರುವ ಮಾಹಿತಿ ತಿಳಿಯುತ್ತೆ. ಹೆಂಡತಿಯನ್ನ ಕರೆದುಕೊಂಡು ಹೋಗಲು ಹರೀಶ್ ಕಳೆದ ಮಂಗಳವಾರ ಗಂಗರಾಜ್ ಮನೆಗೆ ಬಂದಿದ್ದಾನೆ, ಮರುದಿನ ಬೆಳಗ್ಗೆ ಕೆಲಸ ನಿಮಿತ್ತ ಗಂಗರಾಜ್ ಸಂಬಂಧಿಕರ ಮನೆಗೆ ಹೋಗಿದ್ದ, ಈ ವೇಳೆ ಭಾರತಿ ಮತ್ತು ಹರೀಶ್ ನಡುವೆ ಜಗಳವಾಗಿದೆ, ಭಾರತಿ ಕತ್ತು ಬಿಗಿದು ಹರೀಶ್ ಆಕೆಯ ಉಸಿರು ನಿಲ್ಲಿಸಿ ಮಗಳನ್ನು ಕರೆದುಕೊಂಡು ಪರಾರಿಯಾಗಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,‌ ಸದ್ಯ ಆರೋಪಿ ಹರೀಶ್ ನನ್ನ ಪೊಲೀಸರು ಬಂಧಿಸಿದ್ದಾರೆ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

6 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

14 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

15 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago