ಪ್ರೀತಿಸಿ ಮನೆಯವರ ವಿರೋಧದ ನಡುವೆ ಮನೆ ಬಿಟ್ಟು ಹೋಗಿ ಯುವಕ ಯುವತಿ ಮದುವೆಯಾಗಿದ್ದು…ಇದ್ರಿಂದ ರೊಚ್ಚಿಗೆದ್ದ ಹುಡುಗಿ ಕಡೆಯವರು ಯುವಕನ ಮನೆಗೆ ನುಗ್ಗಿ ಆತನ ತಾಯಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸಂಗಟಪಲ್ಲಿ ಗ್ರಾಮದಲ್ಲಿ ನಡೆದಿದೆ.
ಸಂಗಟಪಲ್ಲಿ ಗ್ರಾಮದ ಅಂಬರೀಶ್ ಹಾಗೂ ಸಿಂಗಪ್ಪಗಾರಪಲ್ಲಿಯ ಪ್ರತಿಭಾ ಪ್ರೇಮ ವಿವಾಹವಾಗಿದ್ದಾರೆ.
ಇದ್ರಿಂದ ರೋಸಿ ಹೋದ ಪ್ರತಿಭಾ ಪೋಷಕರು ಅಂಬರೀಶ್ ಮನೆಗೆ ನುಗ್ಗಿ ಆಕೆಯ ಬಟ್ಟೆ ಹಾಗೂ ಪುಸ್ತಕಗಳನ್ನ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.
ಈ ವೇಳೆ ಅಡ್ಡ ಬಂದ ಅಂಬರೀಶ್ ತಾಯಿ ಬಯ್ಯಮ್ಮ ಮೇಲೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.
ಇದ್ರಿಂದ ಗಂಭೀರವಾಗಿ ಗಾಯಗೊಂಡಿರುವ ಬಯ್ಯಮ್ಮಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಇನ್ನೂ ಈ ಸಂಬಂಧ ರಾಧಮ್ಮ, ಅಶ್ವತ್ಥಮ್ಮ, ಪದ್ಮಮ್ಮ, ವೆಂಕಟರಾಮಿರೆಡ್ಡಿ, ವೆಂಕಟರೆಡ್ಡಿ ವಿರುದ್ದ ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…