Categories: ಲೇಖನ

ಪ್ರೀತಿ ಎಂಬ ಮಾಯೆಯೊಳಗೆ ಸಿಲುಕಿ……

ಪ್ರೀತಿ ಎಂಬ ಭಾವನೆಗಳ ಆಳಕ್ಕೆ ಅರಿವಿಲ್ಲದೇ ಪ್ರವೇಶಿಸುವ ಯುವಕ ಯುವತಿಯರು ಮತ್ತು ಅದರ ಒಳ ಸುಳಿಗಳ ಹಿಡಿತದಲ್ಲಿ ಅನುಭವಿಸುವ ಯಾತನೆಗಳು……………

ಯಾವುದೋ ಸಂದರ್ಭ, ಸನ್ನಿವೇಶ, ಆಕಸ್ಮಿಕ ಅಥವಾ ಇನ್ನೇನೋ ಕಾರಣದಿಂದ ಪ್ರೇಮಿಗಳು ಪ್ರೀತಿಯ ಆಳಕ್ಕೆ ಇಳಿದು ಬಿಡುತ್ತಾರೆ. ಅದು ಎಷ್ಟು ಆಳವಾಗಿ ಇರುತ್ತದೆಯೆಂದರೆ ಎಷ್ಟೋ ಮುಗ್ಧ ಮನಸ್ಸುಗಳು ಅಲ್ಲಿಂದ ಹೊರ ಬರುವ ದಾರಿಯನ್ನೇ ಗುರುತಿಸಲು ವಿಫಲರಾಗುತ್ತಾರೆ.

ಒಂದು ವೇಳೆ ಪ್ರೀತಿಯ ಆಳದಲ್ಲಿ ಅವರಿಗೆ ಒಂದಷ್ಟು ಕಷ್ಟ, ಬೇಸರ, ಜಗಳ, ಅಸಮಾಧಾನ, ನಿರಾಸೆಯ ಅನುಭವವಾದರು ಪ್ರೀತಿ ಎಂಬ ಭಾವ ತೀವ್ರತೆ ಅದನ್ನೆಲ್ಲಾ ಹೇಗೋ ಸಹಿಸಿಕೊಳ್ಳುತ್ತದೆ. ಕೊನೆಗೆ ತೀರಾ ಹೊಂದಾಣಿಕೆ ಸಾಧ್ಯವಾಗದಿದ್ದರೆ ಮುಂದೆ ಬಿಡುಗಡೆ ಹೊಂದಬಹುದು ಅಥವಾ ಅದು ಕೋಪವಾಗಿ ಪರಿವರ್ತನೆ ಹೊಂದಿ ಬೇರೆ ಬೇರೆಯಾಗಬಹುದು. ಇದೊಂದು ಸಹಜ ಪ್ರಕ್ರಿಯೆ.

ಆದರೆ ಪ್ರೀತಿಯಲ್ಲಿ ಇದನ್ನು ಮೀರಿದ ಈ ಎರಡು ಘಟನೆಗಳು ಪ್ರೀತಿಸುವ ಜೀವಗಳನ್ನು ವಯಸ್ಸು, ಲಿಂಗದ ಭೇದವಿಲ್ಲದೆ ತುಂಬಾ ನೋವು, ಸಂಕಟ, ಜಿಗುಪ್ಸೆ, ಯಾತನೆ, ಕೊನೆಗೆ ಪದಗಳಲ್ಲಿ – ಮಾತುಗಳಲ್ಲಿ ವಿವರಿಸಲಾಗದ ಮನಸ್ಥಿತಿಗೆ ತಲುಪಿಸಿಬಿಡುತ್ತದೆ. ನಮ್ಮ ಸುತ್ತಮುತ್ತಲಿನ ಯಾವ‌ ಸಂಬಂಧವೂ ಇದನ್ನು ‌ಗುರುತಿಸುವ ಅಥವಾ ಅರ್ಥಮಾಡಿಕೊಳ್ಳುವ ಹಂತವನ್ನು ‌ದಾಟಿ ಬಿಡುತ್ತದೆ. ಅಂತಹ ಸಮಯದಲ್ಲಿ ನಿಜವಾದ ನರಕ ಎಂಬುದು ಅದನ್ನು ಅನುಭವಿಸಿದವರಿಗೆ ಮಾತ್ರ ಗೊತ್ತಿರುತ್ತದೆ.

ಒಂದು,
ಪರಿಸ್ಥಿತಿಯ ಒತ್ತಡದ ಕಾರಣದಿಂದಾಗಿ ಪ್ರೀತಿಸುವ ಎರಡು ಜೀವಗಳು ಅನಿವಾರ್ಯವಾಗಿ ಬೇರ್ಪಡಲೇ ಬೇಕಾದಾಗ…..

ಇನ್ನು ಈ ಜನ್ಮದಲ್ಲಿ ನಾವು ಪ್ರೇಮಿಗಳಾಗಿ ಇರುವುದು ಸಾಧ್ಯವೇ ಇಲ್ಲ ಮತ್ತು ಆ ಜಾಗದಲ್ಲಿ ನಮ್ಮ ಜೊತೆ ಇನ್ನೊಬ್ಬರು ಬರುತ್ತಾರೆ ಎಂಬುದೇ ಆ ಕ್ಷಣದಲ್ಲಿ ಮನಸ್ಸು ವಿಲವಿಲ ಒದ್ದಾಡುವಂತೆ ಮಾಡಿ ಬಿಡುತ್ತದೆ. ಅಬ್ಬಾ ಆ ಯಾತನೆ ಯಾವ ಶತ್ರುವಿಗೂ ಬೇಡ. ಒಳಗೊಳಗೆ, ಒಳಗೊಳಗೆ ಮನಸ್ಸು ದಹಿಸಿ ಬಿಡುತ್ತದೆ.

ಇನ್ನೊಂದು,
ಗಾಢ ಪ್ರೀತಿಯಲ್ಲಿ ಇರುವಾಗ ಗಂಡು ಅಥವಾ ಹೆಣ್ಣು ವೈಯಕ್ತಿಕವಾಗಿ ಮೋಸ ಮಾಡಿ ಇನ್ನೊಬ್ಬರ ಜೊತೆ ಸ್ವತಃ ಸೇರುವುದು. ಇಲ್ಲಿ ಅಗಲಿಕೆಯ ವಿರಹ ಮಾತ್ರವಿರುವುದಿಲ್ಲ. ಮೋಸ ಮಾಡಿದ, ಮೋಸ ಹೋದ, ನಮ್ಮ ನಂಬಿಕೆಗೆ ದ್ರೋಹ ಬಗೆದ, ನಮ್ಮ ಸರ್ವಸ್ವವೂ ಆಗಿದ್ದ ಒಂದು ಜೀವ ಇನ್ನೊಬ್ಬರ ಜೊತೆಗೆ ಸೇರುವುದು ಮುಂತಾದ ಭಾವಗಳು ಒಟ್ಟಿಗೆ ಸೇರಿ ಮನಸ್ಸು – ದೇಹವನ್ನು ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ.

ಪ್ರತಿ ಕ್ಷಣವೂ ಅದೇ ನೆನಪಾಗಿ ದುಃಖ ಉಕ್ಕಿ ಉಕ್ಕಿ ಬರುತ್ತದೆ.
ಸಾವಿನ ಭಯಕ್ಕಿಂತ ತೀವ್ರ ನೋವನ್ನು ಇದು ಕೊಡುತ್ತದೆ. ಎಷ್ಟೇ ವಿದ್ಯೆ, ಬುದ್ದಿ, ಶ್ರೀಮಂತಿಕೆ, ಗೆಳೆತನ, ಮಾರ್ಗದರ್ಶನ ಇದ್ದರು ಈ ವೈಯಕ್ತಿಕ ಹಿಂಸೆಯನ್ನು ಸಹಿಸುವುದು ಅಸಾಧ್ಯ.

ಹೌದು, ಕಾಲ ಎಲ್ಲವನ್ನೂ ಗುಣಪಡಿಸುತ್ತದೆ ಎಂಬುದೇನೋ ನಿಜ. ಆದರೆ ಆ ಕಾಲವನ್ನು ಸವೆಸುವುದು ಹೇಗೆ ?

ಹೊರಗಿನ ಜನ ಸಾಕಷ್ಟು ತಿಳಿವಳಿಕೆ, ಸಮಾಧಾನ, ಧೈರ್ಯ, ಉತ್ಸಾಹದ ಮಾತುಗಳನ್ನು ಆಡಬಹುದು. ಆದರೆ ಅದು ಕೇವಲ ಸಮಯ ಕೊಲ್ಲುವ ಕ್ರಿಯೆ ಮಾತ್ರವಾಗಿರುತ್ತದೆ.

ಅಂತಹ ನೋವಿನ ಪ್ರೇಮಿಯೊಬ್ಬರ ಹೃದಯದಲ್ಲಿ ಜ್ವಾಲಾಮುಖಿಯಂತೆ ಸಿಡಿಯುತ್ತಿದ್ದ ಭಾವನೆಗಳಿಗೆ ಅಕ್ಷರ ರೂಪ ನೀಡಿದಾಗ ಮೂಡಿದ……

ಹೃದಯದೊಳಗಿನ ಕಿಚ್ಚು
ಇನ್ನೂ ಉರಿಯುತ್ತಲೇ ಇದೆ.
ನೋವು, ಪಶ್ಚಾತ್ತಾಪ, ಅಸಹಾಯಕತೆ ಬೆರೆತ ಕಿಚ್ಚಿನ ಜ್ವಾಲೆ ದಿನಕಳೆದಂತೆ ಹೆಚ್ಚಾಗುತ್ತಲೇ ಇದೆ.

ಜ್ವಾಲಾಮುಖಿಯಂತೆ ಸಿಡಿದು ಅಗ್ನಿಪರ್ವತವೂ ಆಗುತ್ತಿಲ್ಲ.

ಹಿಮಪಾತಕ್ಕೆ ಸಿಲುಕಿ ತಣ್ಣಗಾಗುತ್ತಲೂ ಇಲ್ಲ.

ಕೆಲವೊಮ್ಮೆ ತನ್ನಷ್ಟಕ್ಕೆ ತಾನೇ ತನ್ನಿಷ್ಟದಂತೆ ಉರಿಯುತ್ತದೆ.

ಆಗಾಗ ಬಿರುಗಾಳಿಯ ಅಬ್ಬರಕ್ಕೆ ಧಗಧಗನೆ ದಹಿಸಿ ಸುತ್ತಲೂ ಹರಡುತ್ತದೆ ಕಿಚ್ಚು.

ಆರಿಸುವವರೂ ಯಾರಿಲ್ಲ,
ಆಲಿಸುವವರೂ ಯಾರಿಲ್ಲ.
ಹಾರಿಸುವವರೇ ಎಲ್ಲರೂ.

ಆ, ಆಗೊಮ್ಮೆ ಆ ದಿನಗಳೂ ಇದ್ದವು.

ಶೀತಗಾಳಿಯ ನಡುವೆ,
ಮಳೆಯ ತುಂತುರು ಹನಿಗಳ ಮಧ್ಯೆ ,
ಕಿಚ್ಚಿಗೆ ಜಾಗವೂ ಇಲ್ಲದ,
ಅವಕಾಶವೂ ಇಲ್ಲದ ಕಾಲದಲ್ಲಿ ಪ್ರಶಾಂತತೆ ಮನೆ ಮಾಡಿತ್ತು.
ಸುತ್ತಲೂ ಸಂಭ್ರಮವೋ ಸಂಭ್ರಮ.

ಸ್ವರ್ಗಕ್ಕೇ ಕಿಚ್ಚು ಹಚ್ಚಿದ ದಿನಗಳವು.

ಎಲ್ಲಿಂದಲೋ ತೂರಿ ಬಂದವು,
ಅಜ್ಞಾನ, ಅಹಂಕಾರ, ದುರಾಸೆ, ಅಹಂಗಳೆಂಬ ಕಿಡಿಗಳು,

ಹತ್ತಿಸಿಯೇ ಬಿಟ್ಟವು ಕಿಚ್ಚು.
ಕೆಲ ಸಮಯದಲ್ಲೇ ಎಲ್ಲವೂ ಚೆಲ್ಲಾಪಿಲ್ಲಿ.

ಅಂದು ಉರಿ ಹತ್ತಿದ ಕಿಚ್ಚು ಇನ್ನೂ ಉರಿಯುತ್ತಲೇ ಇದೆ.

ಇನ್ನೆಷ್ಟು ದಿನವೋ,

ಉರಿದುರಿದು ಸ್ಪೋಟಿಸುತ್ತದೋ
ಅಥವಾ
ಉರುದುರಿದು ತಾನೇ ನಿರ್ನಾಮವಾಗುತ್ತದೋ
ಅಥವಾ
ಉರಿದುರಿದು ಆರಿ ಮತ್ತೆ ತಣ್ಣನೆಯ ಹಿಮಪಾತದಲ್ಲಿ ಲೀನವಾಗುತ್ತದೋ ಬಲ್ಲವರಾರು.

ಕಾಯುತ್ತಲೇ ಇದ್ದೇನೆ ಕಿಚ್ಚು ಆರುವುದನ್ನು.
ಇನ್ನೂ ಕಾಯುತ್ತಲೇ ಇರುತ್ತೇನೆ.
ಸೃಷ್ಟಿ ನನಗಾಗಿ ಕಾಲ ಮೀಸಲಿಡುವ ತನಕ……

ಕಾಲದ ನಿರ್ಣಯಕ್ಕೆ ಕಾಯುವುದು ಮತ್ತು ಪ್ರಕೃತಿಗೆ ನಿಷ್ಠೆ ತೋರುವುದು ಮಾತ್ರ ಸದ್ಯ ನನಗೆ ಉಳಿದಿರುವ ಆಯ್ಕೆಗಳು……..

ಅದರೊಂದಿಗೆ ನನ್ನ ಬದುಕಿನ ತಿರುವುಗಳ ಜೊತೆಯಾಗಿ ಜೀವಿಸುತ್ತಿದ್ದೇನೆ ಮತ್ತು ಜೀವಿಸುತ್ತಲೇ ಇರುತ್ತೇನೆ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

3 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

6 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

7 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

11 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

15 hours ago