Categories: ಲೇಖನ

ಪ್ರೀತಿ ಎಂಬ ಮಾಯೆಯೊಳಗೆ ಸಿಲುಕಿ……

ಪ್ರೀತಿ ಎಂಬ ಭಾವನೆಗಳ ಆಳಕ್ಕೆ ಅರಿವಿಲ್ಲದೇ ಪ್ರವೇಶಿಸುವ ಯುವಕ ಯುವತಿಯರು ಮತ್ತು ಅದರ ಒಳ ಸುಳಿಗಳ ಹಿಡಿತದಲ್ಲಿ ಅನುಭವಿಸುವ ಯಾತನೆಗಳು……………

ಯಾವುದೋ ಸಂದರ್ಭ, ಸನ್ನಿವೇಶ, ಆಕಸ್ಮಿಕ ಅಥವಾ ಇನ್ನೇನೋ ಕಾರಣದಿಂದ ಪ್ರೇಮಿಗಳು ಪ್ರೀತಿಯ ಆಳಕ್ಕೆ ಇಳಿದು ಬಿಡುತ್ತಾರೆ. ಅದು ಎಷ್ಟು ಆಳವಾಗಿ ಇರುತ್ತದೆಯೆಂದರೆ ಎಷ್ಟೋ ಮುಗ್ಧ ಮನಸ್ಸುಗಳು ಅಲ್ಲಿಂದ ಹೊರ ಬರುವ ದಾರಿಯನ್ನೇ ಗುರುತಿಸಲು ವಿಫಲರಾಗುತ್ತಾರೆ.

ಒಂದು ವೇಳೆ ಪ್ರೀತಿಯ ಆಳದಲ್ಲಿ ಅವರಿಗೆ ಒಂದಷ್ಟು ಕಷ್ಟ, ಬೇಸರ, ಜಗಳ, ಅಸಮಾಧಾನ, ನಿರಾಸೆಯ ಅನುಭವವಾದರು ಪ್ರೀತಿ ಎಂಬ ಭಾವ ತೀವ್ರತೆ ಅದನ್ನೆಲ್ಲಾ ಹೇಗೋ ಸಹಿಸಿಕೊಳ್ಳುತ್ತದೆ. ಕೊನೆಗೆ ತೀರಾ ಹೊಂದಾಣಿಕೆ ಸಾಧ್ಯವಾಗದಿದ್ದರೆ ಮುಂದೆ ಬಿಡುಗಡೆ ಹೊಂದಬಹುದು ಅಥವಾ ಅದು ಕೋಪವಾಗಿ ಪರಿವರ್ತನೆ ಹೊಂದಿ ಬೇರೆ ಬೇರೆಯಾಗಬಹುದು. ಇದೊಂದು ಸಹಜ ಪ್ರಕ್ರಿಯೆ.

ಆದರೆ ಪ್ರೀತಿಯಲ್ಲಿ ಇದನ್ನು ಮೀರಿದ ಈ ಎರಡು ಘಟನೆಗಳು ಪ್ರೀತಿಸುವ ಜೀವಗಳನ್ನು ವಯಸ್ಸು, ಲಿಂಗದ ಭೇದವಿಲ್ಲದೆ ತುಂಬಾ ನೋವು, ಸಂಕಟ, ಜಿಗುಪ್ಸೆ, ಯಾತನೆ, ಕೊನೆಗೆ ಪದಗಳಲ್ಲಿ – ಮಾತುಗಳಲ್ಲಿ ವಿವರಿಸಲಾಗದ ಮನಸ್ಥಿತಿಗೆ ತಲುಪಿಸಿಬಿಡುತ್ತದೆ. ನಮ್ಮ ಸುತ್ತಮುತ್ತಲಿನ ಯಾವ‌ ಸಂಬಂಧವೂ ಇದನ್ನು ‌ಗುರುತಿಸುವ ಅಥವಾ ಅರ್ಥಮಾಡಿಕೊಳ್ಳುವ ಹಂತವನ್ನು ‌ದಾಟಿ ಬಿಡುತ್ತದೆ. ಅಂತಹ ಸಮಯದಲ್ಲಿ ನಿಜವಾದ ನರಕ ಎಂಬುದು ಅದನ್ನು ಅನುಭವಿಸಿದವರಿಗೆ ಮಾತ್ರ ಗೊತ್ತಿರುತ್ತದೆ.

ಒಂದು,
ಪರಿಸ್ಥಿತಿಯ ಒತ್ತಡದ ಕಾರಣದಿಂದಾಗಿ ಪ್ರೀತಿಸುವ ಎರಡು ಜೀವಗಳು ಅನಿವಾರ್ಯವಾಗಿ ಬೇರ್ಪಡಲೇ ಬೇಕಾದಾಗ…..

ಇನ್ನು ಈ ಜನ್ಮದಲ್ಲಿ ನಾವು ಪ್ರೇಮಿಗಳಾಗಿ ಇರುವುದು ಸಾಧ್ಯವೇ ಇಲ್ಲ ಮತ್ತು ಆ ಜಾಗದಲ್ಲಿ ನಮ್ಮ ಜೊತೆ ಇನ್ನೊಬ್ಬರು ಬರುತ್ತಾರೆ ಎಂಬುದೇ ಆ ಕ್ಷಣದಲ್ಲಿ ಮನಸ್ಸು ವಿಲವಿಲ ಒದ್ದಾಡುವಂತೆ ಮಾಡಿ ಬಿಡುತ್ತದೆ. ಅಬ್ಬಾ ಆ ಯಾತನೆ ಯಾವ ಶತ್ರುವಿಗೂ ಬೇಡ. ಒಳಗೊಳಗೆ, ಒಳಗೊಳಗೆ ಮನಸ್ಸು ದಹಿಸಿ ಬಿಡುತ್ತದೆ.

ಇನ್ನೊಂದು,
ಗಾಢ ಪ್ರೀತಿಯಲ್ಲಿ ಇರುವಾಗ ಗಂಡು ಅಥವಾ ಹೆಣ್ಣು ವೈಯಕ್ತಿಕವಾಗಿ ಮೋಸ ಮಾಡಿ ಇನ್ನೊಬ್ಬರ ಜೊತೆ ಸ್ವತಃ ಸೇರುವುದು. ಇಲ್ಲಿ ಅಗಲಿಕೆಯ ವಿರಹ ಮಾತ್ರವಿರುವುದಿಲ್ಲ. ಮೋಸ ಮಾಡಿದ, ಮೋಸ ಹೋದ, ನಮ್ಮ ನಂಬಿಕೆಗೆ ದ್ರೋಹ ಬಗೆದ, ನಮ್ಮ ಸರ್ವಸ್ವವೂ ಆಗಿದ್ದ ಒಂದು ಜೀವ ಇನ್ನೊಬ್ಬರ ಜೊತೆಗೆ ಸೇರುವುದು ಮುಂತಾದ ಭಾವಗಳು ಒಟ್ಟಿಗೆ ಸೇರಿ ಮನಸ್ಸು – ದೇಹವನ್ನು ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ.

ಪ್ರತಿ ಕ್ಷಣವೂ ಅದೇ ನೆನಪಾಗಿ ದುಃಖ ಉಕ್ಕಿ ಉಕ್ಕಿ ಬರುತ್ತದೆ.
ಸಾವಿನ ಭಯಕ್ಕಿಂತ ತೀವ್ರ ನೋವನ್ನು ಇದು ಕೊಡುತ್ತದೆ. ಎಷ್ಟೇ ವಿದ್ಯೆ, ಬುದ್ದಿ, ಶ್ರೀಮಂತಿಕೆ, ಗೆಳೆತನ, ಮಾರ್ಗದರ್ಶನ ಇದ್ದರು ಈ ವೈಯಕ್ತಿಕ ಹಿಂಸೆಯನ್ನು ಸಹಿಸುವುದು ಅಸಾಧ್ಯ.

ಹೌದು, ಕಾಲ ಎಲ್ಲವನ್ನೂ ಗುಣಪಡಿಸುತ್ತದೆ ಎಂಬುದೇನೋ ನಿಜ. ಆದರೆ ಆ ಕಾಲವನ್ನು ಸವೆಸುವುದು ಹೇಗೆ ?

ಹೊರಗಿನ ಜನ ಸಾಕಷ್ಟು ತಿಳಿವಳಿಕೆ, ಸಮಾಧಾನ, ಧೈರ್ಯ, ಉತ್ಸಾಹದ ಮಾತುಗಳನ್ನು ಆಡಬಹುದು. ಆದರೆ ಅದು ಕೇವಲ ಸಮಯ ಕೊಲ್ಲುವ ಕ್ರಿಯೆ ಮಾತ್ರವಾಗಿರುತ್ತದೆ.

ಅಂತಹ ನೋವಿನ ಪ್ರೇಮಿಯೊಬ್ಬರ ಹೃದಯದಲ್ಲಿ ಜ್ವಾಲಾಮುಖಿಯಂತೆ ಸಿಡಿಯುತ್ತಿದ್ದ ಭಾವನೆಗಳಿಗೆ ಅಕ್ಷರ ರೂಪ ನೀಡಿದಾಗ ಮೂಡಿದ……

ಹೃದಯದೊಳಗಿನ ಕಿಚ್ಚು
ಇನ್ನೂ ಉರಿಯುತ್ತಲೇ ಇದೆ.
ನೋವು, ಪಶ್ಚಾತ್ತಾಪ, ಅಸಹಾಯಕತೆ ಬೆರೆತ ಕಿಚ್ಚಿನ ಜ್ವಾಲೆ ದಿನಕಳೆದಂತೆ ಹೆಚ್ಚಾಗುತ್ತಲೇ ಇದೆ.

ಜ್ವಾಲಾಮುಖಿಯಂತೆ ಸಿಡಿದು ಅಗ್ನಿಪರ್ವತವೂ ಆಗುತ್ತಿಲ್ಲ.

ಹಿಮಪಾತಕ್ಕೆ ಸಿಲುಕಿ ತಣ್ಣಗಾಗುತ್ತಲೂ ಇಲ್ಲ.

ಕೆಲವೊಮ್ಮೆ ತನ್ನಷ್ಟಕ್ಕೆ ತಾನೇ ತನ್ನಿಷ್ಟದಂತೆ ಉರಿಯುತ್ತದೆ.

ಆಗಾಗ ಬಿರುಗಾಳಿಯ ಅಬ್ಬರಕ್ಕೆ ಧಗಧಗನೆ ದಹಿಸಿ ಸುತ್ತಲೂ ಹರಡುತ್ತದೆ ಕಿಚ್ಚು.

ಆರಿಸುವವರೂ ಯಾರಿಲ್ಲ,
ಆಲಿಸುವವರೂ ಯಾರಿಲ್ಲ.
ಹಾರಿಸುವವರೇ ಎಲ್ಲರೂ.

ಆ, ಆಗೊಮ್ಮೆ ಆ ದಿನಗಳೂ ಇದ್ದವು.

ಶೀತಗಾಳಿಯ ನಡುವೆ,
ಮಳೆಯ ತುಂತುರು ಹನಿಗಳ ಮಧ್ಯೆ ,
ಕಿಚ್ಚಿಗೆ ಜಾಗವೂ ಇಲ್ಲದ,
ಅವಕಾಶವೂ ಇಲ್ಲದ ಕಾಲದಲ್ಲಿ ಪ್ರಶಾಂತತೆ ಮನೆ ಮಾಡಿತ್ತು.
ಸುತ್ತಲೂ ಸಂಭ್ರಮವೋ ಸಂಭ್ರಮ.

ಸ್ವರ್ಗಕ್ಕೇ ಕಿಚ್ಚು ಹಚ್ಚಿದ ದಿನಗಳವು.

ಎಲ್ಲಿಂದಲೋ ತೂರಿ ಬಂದವು,
ಅಜ್ಞಾನ, ಅಹಂಕಾರ, ದುರಾಸೆ, ಅಹಂಗಳೆಂಬ ಕಿಡಿಗಳು,

ಹತ್ತಿಸಿಯೇ ಬಿಟ್ಟವು ಕಿಚ್ಚು.
ಕೆಲ ಸಮಯದಲ್ಲೇ ಎಲ್ಲವೂ ಚೆಲ್ಲಾಪಿಲ್ಲಿ.

ಅಂದು ಉರಿ ಹತ್ತಿದ ಕಿಚ್ಚು ಇನ್ನೂ ಉರಿಯುತ್ತಲೇ ಇದೆ.

ಇನ್ನೆಷ್ಟು ದಿನವೋ,

ಉರಿದುರಿದು ಸ್ಪೋಟಿಸುತ್ತದೋ
ಅಥವಾ
ಉರುದುರಿದು ತಾನೇ ನಿರ್ನಾಮವಾಗುತ್ತದೋ
ಅಥವಾ
ಉರಿದುರಿದು ಆರಿ ಮತ್ತೆ ತಣ್ಣನೆಯ ಹಿಮಪಾತದಲ್ಲಿ ಲೀನವಾಗುತ್ತದೋ ಬಲ್ಲವರಾರು.

ಕಾಯುತ್ತಲೇ ಇದ್ದೇನೆ ಕಿಚ್ಚು ಆರುವುದನ್ನು.
ಇನ್ನೂ ಕಾಯುತ್ತಲೇ ಇರುತ್ತೇನೆ.
ಸೃಷ್ಟಿ ನನಗಾಗಿ ಕಾಲ ಮೀಸಲಿಡುವ ತನಕ……

ಕಾಲದ ನಿರ್ಣಯಕ್ಕೆ ಕಾಯುವುದು ಮತ್ತು ಪ್ರಕೃತಿಗೆ ನಿಷ್ಠೆ ತೋರುವುದು ಮಾತ್ರ ಸದ್ಯ ನನಗೆ ಉಳಿದಿರುವ ಆಯ್ಕೆಗಳು……..

ಅದರೊಂದಿಗೆ ನನ್ನ ಬದುಕಿನ ತಿರುವುಗಳ ಜೊತೆಯಾಗಿ ಜೀವಿಸುತ್ತಿದ್ದೇನೆ ಮತ್ತು ಜೀವಿಸುತ್ತಲೇ ಇರುತ್ತೇನೆ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

3 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

10 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

11 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

24 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

24 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

1 day ago