ಪ್ರೀತಿಸಿ ಇಬ್ಬರೂ ಒಟ್ಟೊಟ್ಟಿಗೆ ಪ್ರಣಯ ಪಕ್ಷಿಗಳಂತೆ ಸುತ್ತುತ್ತಿದ್ದರು. ಪ್ರೀತಿಗೆ ಅಡ್ಡವಾಗದ ಜಾತಿ ಮದುವೆಗೆ ಅಡ್ಡಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸ್ ಪೇದೆ ಮತ್ತು ಯುವತಿ ಇಬ್ಬರೂ ವಿಷ ಸೇವಿಸಿ ಆಸ್ಪತ್ರೆಯಲ್ಲಿ ಬೆಡ್ ಮೇಲೆ ನರಳಾಡುತ್ತಿದ್ದಾರೆ. ಈ ಕುರಿತ ಕಂಪ್ಲೀಟ್ ವರದಿ ಇಲ್ಲಿದೆ ನೋಡಿ….
ಹೌದು, ಮದುವೆಯಾಗಲು ಜಾತಿ ಅಡ್ಡಿಯಾದ ಹಿನ್ನೆಲೆ ಇಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ತಿಮ್ಮಣ್ಣರಾಮಪ್ಪಭೂಸರೆಡ್ಡಿ ಎಂಬ ವ್ಯಕ್ತಿ, ಶಿರಿಷಾ ಎಂಬ ಯುವತಿಯೊಂದಿಗೆ ಪ್ರೀತಿ ಮಾಡುತ್ತಿದ್ದ. ಪೊಲೀಸ್ ಪೇದೆಯ ಪ್ರೀತಿಯನ್ನು ನಂಬಿ ಯುವತಿ ಆತನೊಂದಿಗೆ ದೈಹಿಕ ಸಂಪರ್ಕ ಕೂಡ ಬೆಳೆಸಿದ್ದಾಳೆ ಎನ್ನಲಾಗಿದೆ.
ಮದುವೆಯ ದಿನಾಂಕ ಕೂಡ ನಿಗದಿ ಮಾಡಿ ಲಗ್ನ ಪತ್ರಿಕೆಯನ್ನೂ ಸಹ ಪ್ರಿಂಟ್ ಮಾಡಿಸಿದ್ದಾರೆ. ಕೊನೆ ಗಳಿಗೆಯಲ್ಲಿ ಯುವಕನಿಗೆ ಅದೇನಾಯ್ತೋ ಏನು. ಮದುವೆ ಬೇಡ, ನೀವು ಬೇರೆ ಜಾತಿ ನಾವು ಬೇರೆ ಜಾತಿ ಎಂದು ನೆಪ ಹೇಳಿ ಮದುವೆಗೆ ನಿರಾಕರಿಸಿದ್ದಾನೆ ಆರೋಪ ಕೇಳಿಬಂದಿದೆ.
ಇನ್ನು, ಈ ಮೊದಲು ಮದುವೆಗೆ ನಿರಾಕರಿಸಿದ ಹಿನ್ನೆಲೆ ಯುವತಿ ವಿಷ ಸೇವನೆ ಮಾಡಿದ್ದಳು. ಆಗ ರಾಜಿ ಸಂಧಾನಕ್ಕೆ ಮುಂದಾದ ಪೊಲೀಸ್ ಪೇದೆ, ಮದುವೆ ಆಗುವುದಾಗಿ ಹೇಳಿದ್ದಾನೆ. ಇದೇ ರೀತಿ ಪದೇ ಪದೇ ಜಗಳ ಆಗುತ್ತಿತ್ತು. ಎರಡು ಬಾರಿ ವಿಷ ಸೇವನೆ ಮಾಡಿದ್ದ ಯುವತಿ ಈಗ ಮೂರನೇ ಬಾರಿಗೆ ವಿಷ ಸೇವನೆ ಮಾಡಿದ್ದಾಳೆ ಎನ್ನಲಾಗಿದೆ. ನನ್ನನ್ನು ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದಾನೆ. ನನಗೆ ಆತನೇ ಬೇಕು ಎಂದು ಯುವತಿ ಪಟ್ಟು ಹಿಡಿದಿದ್ದಾಳೆ.
ಇನ್ನೂ, ಇವರಿಬ್ಬರು ಕರೆಸ್ಪಾಂಡೆನ್ಸ್ ನಲ್ಲಿ ಬಿಎ ವ್ಯಾಸಂಗ ಮಾಡಲು ಚಿಕ್ಕಬಳ್ಳಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸೇರುತ್ತಾರೆ. ಕಾಲೇಜಿನಲ್ಲಿ ವಿದ್ಯಾರ್ಥಿಗಳು ಎಲ್ಲರು ಸೇರಿ ಒಂದು ವಾಟ್ಸ್ ಆಪ್ ಗ್ರೂಪ್ ಮಾಡುತ್ತಾರೆ. ಅಲ್ಲಿಂದ ನಂಬರ್ ತೆಗೆದುಕೊಂಡು ಅಲ್ಲಿಂದ ಆರಂಭ ಆದ ಪ್ರೀತಿ ಈಗ ವಿಷ ಸೇವಿಸಿ ಆಸ್ಪತ್ರೆಯಲ್ಲಿ ಮಲಗುವ ಹಂತಕ್ಕೆ ತಲುಪಿದೆ.
ವಿಷ ಸೇವನೆ ಮಾಡುವಾಗ ಪೊಲೀಸ್ ಪೇದೆ, ನನಗೆ ಯುವತಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾಳೆ, ಮಧ್ಯಸ್ಥಿಕೆ ವಹಿಸಿದ್ದವರು ಹಣ ಕೇಳಿದ್ದರು. ಕೊಟ್ಟರೂ ನನಗೆ ಕಿರುಕುಳ ತಪ್ಪಿಲ್ಲ ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾ ಇದ್ದೇನೆ ಎಂದು ಹೇಳಿದ್ದಾನೆ.
ಒಟ್ಟಾರೆ ಪ್ರೀತಿಸಿ ಮದುವೆ ಆಗಿ ಸುಖ ಸಂಸಾರ ಸಾಗಿಸಬೇಕಿದ್ದ ಜೋಡಿ, ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಪಾಲಾಗಿದ್ದು ಮಾತ್ರ ವಿಪರ್ಯಾಸ. ಪೊಲೀಸ್ ಪೇದೆಯಾಗಿ ಜನಸಾಮಾನ್ಯರಿಗೆ ನ್ಯಾಯ ಹೇಳಬೇಕಿದ್ದ ವ್ಯಕ್ತಿ, ಈಗ ಯುವತಿಗೆ ಮೋಸ ಮಾಡಿರುವ ಆರೋಪ ಹೊತ್ತಿದ್ದಾನೆ. ಆಸ್ಪತ್ರೆಗೆ ಎಸ್ಪಿ ಕುಶಾಲ್ ಚೌಕ್ಸೆ ಭೇಟಿ ನೀಡಿ, ತನಿಖೆ ಮುಂದುವರಿಸಿದ್ದಾರೆ.
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…