ಪ್ರೀತಿಸಿ ಇಬ್ಬರೂ ಒಟ್ಟೊಟ್ಟಿಗೆ ಪ್ರಣಯ ಪಕ್ಷಿಗಳಂತೆ ಸುತ್ತುತ್ತಿದ್ದರು. ಪ್ರೀತಿಗೆ ಅಡ್ಡವಾಗದ ಜಾತಿ ಮದುವೆಗೆ ಅಡ್ಡಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸ್ ಪೇದೆ ಮತ್ತು ಯುವತಿ ಇಬ್ಬರೂ ವಿಷ ಸೇವಿಸಿ ಆಸ್ಪತ್ರೆಯಲ್ಲಿ ಬೆಡ್ ಮೇಲೆ ನರಳಾಡುತ್ತಿದ್ದಾರೆ. ಈ ಕುರಿತ ಕಂಪ್ಲೀಟ್ ವರದಿ ಇಲ್ಲಿದೆ ನೋಡಿ….
ಹೌದು, ಮದುವೆಯಾಗಲು ಜಾತಿ ಅಡ್ಡಿಯಾದ ಹಿನ್ನೆಲೆ ಇಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ತಿಮ್ಮಣ್ಣರಾಮಪ್ಪಭೂಸರೆಡ್ಡಿ ಎಂಬ ವ್ಯಕ್ತಿ, ಶಿರಿಷಾ ಎಂಬ ಯುವತಿಯೊಂದಿಗೆ ಪ್ರೀತಿ ಮಾಡುತ್ತಿದ್ದ. ಪೊಲೀಸ್ ಪೇದೆಯ ಪ್ರೀತಿಯನ್ನು ನಂಬಿ ಯುವತಿ ಆತನೊಂದಿಗೆ ದೈಹಿಕ ಸಂಪರ್ಕ ಕೂಡ ಬೆಳೆಸಿದ್ದಾಳೆ ಎನ್ನಲಾಗಿದೆ.
ಮದುವೆಯ ದಿನಾಂಕ ಕೂಡ ನಿಗದಿ ಮಾಡಿ ಲಗ್ನ ಪತ್ರಿಕೆಯನ್ನೂ ಸಹ ಪ್ರಿಂಟ್ ಮಾಡಿಸಿದ್ದಾರೆ. ಕೊನೆ ಗಳಿಗೆಯಲ್ಲಿ ಯುವಕನಿಗೆ ಅದೇನಾಯ್ತೋ ಏನು. ಮದುವೆ ಬೇಡ, ನೀವು ಬೇರೆ ಜಾತಿ ನಾವು ಬೇರೆ ಜಾತಿ ಎಂದು ನೆಪ ಹೇಳಿ ಮದುವೆಗೆ ನಿರಾಕರಿಸಿದ್ದಾನೆ ಆರೋಪ ಕೇಳಿಬಂದಿದೆ.
ಇನ್ನು, ಈ ಮೊದಲು ಮದುವೆಗೆ ನಿರಾಕರಿಸಿದ ಹಿನ್ನೆಲೆ ಯುವತಿ ವಿಷ ಸೇವನೆ ಮಾಡಿದ್ದಳು. ಆಗ ರಾಜಿ ಸಂಧಾನಕ್ಕೆ ಮುಂದಾದ ಪೊಲೀಸ್ ಪೇದೆ, ಮದುವೆ ಆಗುವುದಾಗಿ ಹೇಳಿದ್ದಾನೆ. ಇದೇ ರೀತಿ ಪದೇ ಪದೇ ಜಗಳ ಆಗುತ್ತಿತ್ತು. ಎರಡು ಬಾರಿ ವಿಷ ಸೇವನೆ ಮಾಡಿದ್ದ ಯುವತಿ ಈಗ ಮೂರನೇ ಬಾರಿಗೆ ವಿಷ ಸೇವನೆ ಮಾಡಿದ್ದಾಳೆ ಎನ್ನಲಾಗಿದೆ. ನನ್ನನ್ನು ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದಾನೆ. ನನಗೆ ಆತನೇ ಬೇಕು ಎಂದು ಯುವತಿ ಪಟ್ಟು ಹಿಡಿದಿದ್ದಾಳೆ.
ಇನ್ನೂ, ಇವರಿಬ್ಬರು ಕರೆಸ್ಪಾಂಡೆನ್ಸ್ ನಲ್ಲಿ ಬಿಎ ವ್ಯಾಸಂಗ ಮಾಡಲು ಚಿಕ್ಕಬಳ್ಳಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸೇರುತ್ತಾರೆ. ಕಾಲೇಜಿನಲ್ಲಿ ವಿದ್ಯಾರ್ಥಿಗಳು ಎಲ್ಲರು ಸೇರಿ ಒಂದು ವಾಟ್ಸ್ ಆಪ್ ಗ್ರೂಪ್ ಮಾಡುತ್ತಾರೆ. ಅಲ್ಲಿಂದ ನಂಬರ್ ತೆಗೆದುಕೊಂಡು ಅಲ್ಲಿಂದ ಆರಂಭ ಆದ ಪ್ರೀತಿ ಈಗ ವಿಷ ಸೇವಿಸಿ ಆಸ್ಪತ್ರೆಯಲ್ಲಿ ಮಲಗುವ ಹಂತಕ್ಕೆ ತಲುಪಿದೆ.
ವಿಷ ಸೇವನೆ ಮಾಡುವಾಗ ಪೊಲೀಸ್ ಪೇದೆ, ನನಗೆ ಯುವತಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾಳೆ, ಮಧ್ಯಸ್ಥಿಕೆ ವಹಿಸಿದ್ದವರು ಹಣ ಕೇಳಿದ್ದರು. ಕೊಟ್ಟರೂ ನನಗೆ ಕಿರುಕುಳ ತಪ್ಪಿಲ್ಲ ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾ ಇದ್ದೇನೆ ಎಂದು ಹೇಳಿದ್ದಾನೆ.
ಒಟ್ಟಾರೆ ಪ್ರೀತಿಸಿ ಮದುವೆ ಆಗಿ ಸುಖ ಸಂಸಾರ ಸಾಗಿಸಬೇಕಿದ್ದ ಜೋಡಿ, ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಪಾಲಾಗಿದ್ದು ಮಾತ್ರ ವಿಪರ್ಯಾಸ. ಪೊಲೀಸ್ ಪೇದೆಯಾಗಿ ಜನಸಾಮಾನ್ಯರಿಗೆ ನ್ಯಾಯ ಹೇಳಬೇಕಿದ್ದ ವ್ಯಕ್ತಿ, ಈಗ ಯುವತಿಗೆ ಮೋಸ ಮಾಡಿರುವ ಆರೋಪ ಹೊತ್ತಿದ್ದಾನೆ. ಆಸ್ಪತ್ರೆಗೆ ಎಸ್ಪಿ ಕುಶಾಲ್ ಚೌಕ್ಸೆ ಭೇಟಿ ನೀಡಿ, ತನಿಖೆ ಮುಂದುವರಿಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…