ಪ್ರೀತಿ ನೆಪದಲ್ಲಿ ವಿದ್ಯಾರ್ಥಿನಿ ಜೊತೆ ದೈಹಿಕ ಸಂಪರ್ಕ ಬೆಳೆಸಿದ ಪೊಲೀಸ್ ಪೇದೆ: ಪ್ರಿಯತಮೆಯನ್ನು ಮದುವೆಯಾಗಲು ಅಡ್ಡಿಯಾದ ಜಾತಿ: ಮದುವೆ ನಿರಾಕರಿಸಿದ ಹಿನ್ನೆಲೆ ಮೂರನೇ ಬಾರಿ ವಿಷ ಸೇವಿಸಿ ಆಸ್ಪತ್ರೆ ಪಾಲಾದ ಯುವತಿ

ಪ್ರೀತಿಸಿ ಇಬ್ಬರೂ ಒಟ್ಟೊಟ್ಟಿಗೆ ಪ್ರಣಯ ಪಕ್ಷಿಗಳಂತೆ ಸುತ್ತುತ್ತಿದ್ದರು. ಪ್ರೀತಿಗೆ ಅಡ್ಡವಾಗದ ಜಾತಿ ಮದುವೆಗೆ ಅಡ್ಡಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸ್ ಪೇದೆ ಮತ್ತು ಯುವತಿ ಇಬ್ಬರೂ ವಿಷ ಸೇವಿಸಿ ಆಸ್ಪತ್ರೆಯಲ್ಲಿ ಬೆಡ್ ಮೇಲೆ ನರಳಾಡುತ್ತಿದ್ದಾರೆ. ಈ ಕುರಿತ ಕಂಪ್ಲೀಟ್ ವರದಿ ಇಲ್ಲಿದೆ ನೋಡಿ….

ಹೌದು, ಮದುವೆಯಾಗಲು ಜಾತಿ ಅಡ್ಡಿಯಾದ ಹಿನ್ನೆಲೆ ಇಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ತಿಮ್ಮಣ್ಣರಾಮಪ್ಪಭೂಸರೆಡ್ಡಿ ಎಂಬ ವ್ಯಕ್ತಿ, ಶಿರಿಷಾ ಎಂಬ ಯುವತಿಯೊಂದಿಗೆ ಪ್ರೀತಿ ಮಾಡುತ್ತಿದ್ದ. ಪೊಲೀಸ್ ಪೇದೆಯ ಪ್ರೀತಿಯನ್ನು ನಂಬಿ ಯುವತಿ ಆತನೊಂದಿಗೆ ದೈಹಿಕ‌ ಸಂಪರ್ಕ ಕೂಡ ಬೆಳೆಸಿದ್ದಾಳೆ ಎನ್ನಲಾಗಿದೆ.

ಮದುವೆಯ ದಿನಾಂಕ ಕೂಡ ನಿಗದಿ ಮಾಡಿ ಲಗ್ನ ಪತ್ರಿಕೆಯನ್ನೂ ಸಹ ಪ್ರಿಂಟ್ ಮಾಡಿಸಿದ್ದಾರೆ. ಕೊನೆ ಗಳಿಗೆಯಲ್ಲಿ ಯುವಕನಿಗೆ ಅದೇನಾಯ್ತೋ ಏನು. ಮದುವೆ ಬೇಡ, ನೀವು ಬೇರೆ ಜಾತಿ ನಾವು ಬೇರೆ ಜಾತಿ ಎಂದು ನೆಪ ಹೇಳಿ ಮದುವೆಗೆ ನಿರಾಕರಿಸಿದ್ದಾನೆ ಆರೋಪ ಕೇಳಿಬಂದಿದೆ.

ಇನ್ನು, ಈ ಮೊದಲು ಮದುವೆಗೆ ನಿರಾಕರಿಸಿದ ಹಿನ್ನೆಲೆ ಯುವತಿ ವಿಷ ಸೇವನೆ ಮಾಡಿದ್ದಳು. ಆಗ ರಾಜಿ ಸಂಧಾನಕ್ಕೆ ಮುಂದಾದ ಪೊಲೀಸ್ ಪೇದೆ, ಮದುವೆ ಆಗುವುದಾಗಿ ಹೇಳಿದ್ದಾನೆ. ಇದೇ ರೀತಿ ಪದೇ ಪದೇ ಜಗಳ ಆಗುತ್ತಿತ್ತು. ಎರಡು ಬಾರಿ ವಿಷ ಸೇವನೆ ಮಾಡಿದ್ದ ಯುವತಿ ಈಗ ಮೂರನೇ ಬಾರಿಗೆ ವಿಷ ಸೇವನೆ ಮಾಡಿದ್ದಾಳೆ ಎನ್ನಲಾಗಿದೆ. ನನ್ನನ್ನು ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದಾನೆ. ನನಗೆ ಆತನೇ ಬೇಕು ಎಂದು ಯುವತಿ ಪಟ್ಟು ಹಿಡಿದಿದ್ದಾಳೆ.

ಇನ್ನೂ, ಇವರಿಬ್ಬರು ಕರೆಸ್ಪಾಂಡೆನ್ಸ್ ನಲ್ಲಿ ಬಿಎ ವ್ಯಾಸಂಗ ಮಾಡಲು ಚಿಕ್ಕಬಳ್ಳಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸೇರುತ್ತಾರೆ. ಕಾಲೇಜಿನಲ್ಲಿ ವಿದ್ಯಾರ್ಥಿಗಳು ಎಲ್ಲರು ಸೇರಿ ಒಂದು ವಾಟ್ಸ್ ಆಪ್ ಗ್ರೂಪ್ ಮಾಡುತ್ತಾರೆ. ಅಲ್ಲಿಂದ ನಂಬರ್ ತೆಗೆದುಕೊಂಡು ಅಲ್ಲಿಂದ ಆರಂಭ ಆದ ಪ್ರೀತಿ ಈಗ ವಿಷ ಸೇವಿಸಿ ಆಸ್ಪತ್ರೆಯಲ್ಲಿ ಮಲಗುವ ಹಂತಕ್ಕೆ ತಲುಪಿದೆ.

ವಿಷ ಸೇವನೆ ಮಾಡುವಾಗ ಪೊಲೀಸ್ ಪೇದೆ, ನನಗೆ ಯುವತಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾಳೆ, ಮಧ್ಯಸ್ಥಿಕೆ ವಹಿಸಿದ್ದವರು ಹಣ ಕೇಳಿದ್ದರು. ಕೊಟ್ಟರೂ ನನಗೆ ಕಿರುಕುಳ ತಪ್ಪಿಲ್ಲ ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾ ಇದ್ದೇನೆ ಎಂದು ಹೇಳಿದ್ದಾನೆ.

ಒಟ್ಟಾರೆ ಪ್ರೀತಿಸಿ ಮದುವೆ ಆಗಿ ಸುಖ ಸಂಸಾರ ಸಾಗಿಸಬೇಕಿದ್ದ ಜೋಡಿ, ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಪಾಲಾಗಿದ್ದು ಮಾತ್ರ ವಿಪರ್ಯಾಸ. ಪೊಲೀಸ್ ಪೇದೆಯಾಗಿ ಜನಸಾಮಾನ್ಯರಿಗೆ ನ್ಯಾಯ ಹೇಳಬೇಕಿದ್ದ ವ್ಯಕ್ತಿ, ಈಗ ಯುವತಿಗೆ ಮೋಸ ಮಾಡಿರುವ ಆರೋಪ ಹೊತ್ತಿದ್ದಾನೆ. ಆಸ್ಪತ್ರೆಗೆ ಎಸ್ಪಿ ಕುಶಾಲ್ ಚೌಕ್ಸೆ ಭೇಟಿ ನೀಡಿ, ತನಿಖೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

11 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

17 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

20 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

24 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago