ಪ್ರೀತಿ ನೆಪದಲ್ಲಿ ವಿದ್ಯಾರ್ಥಿನಿ ಜೊತೆ ದೈಹಿಕ ಸಂಪರ್ಕ ಬೆಳೆಸಿದ ಪೊಲೀಸ್ ಪೇದೆ: ಪ್ರಿಯತಮೆಯನ್ನು ಮದುವೆಯಾಗಲು ಅಡ್ಡಿಯಾದ ಜಾತಿ: ಮದುವೆ ನಿರಾಕರಿಸಿದ ಹಿನ್ನೆಲೆ ಮೂರನೇ ಬಾರಿ ವಿಷ ಸೇವಿಸಿ ಆಸ್ಪತ್ರೆ ಪಾಲಾದ ಯುವತಿ

ಪ್ರೀತಿಸಿ ಇಬ್ಬರೂ ಒಟ್ಟೊಟ್ಟಿಗೆ ಪ್ರಣಯ ಪಕ್ಷಿಗಳಂತೆ ಸುತ್ತುತ್ತಿದ್ದರು. ಪ್ರೀತಿಗೆ ಅಡ್ಡವಾಗದ ಜಾತಿ ಮದುವೆಗೆ ಅಡ್ಡಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸ್ ಪೇದೆ ಮತ್ತು ಯುವತಿ ಇಬ್ಬರೂ ವಿಷ ಸೇವಿಸಿ ಆಸ್ಪತ್ರೆಯಲ್ಲಿ ಬೆಡ್ ಮೇಲೆ ನರಳಾಡುತ್ತಿದ್ದಾರೆ. ಈ ಕುರಿತ ಕಂಪ್ಲೀಟ್ ವರದಿ ಇಲ್ಲಿದೆ ನೋಡಿ….

ಹೌದು, ಮದುವೆಯಾಗಲು ಜಾತಿ ಅಡ್ಡಿಯಾದ ಹಿನ್ನೆಲೆ ಇಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ತಿಮ್ಮಣ್ಣರಾಮಪ್ಪಭೂಸರೆಡ್ಡಿ ಎಂಬ ವ್ಯಕ್ತಿ, ಶಿರಿಷಾ ಎಂಬ ಯುವತಿಯೊಂದಿಗೆ ಪ್ರೀತಿ ಮಾಡುತ್ತಿದ್ದ. ಪೊಲೀಸ್ ಪೇದೆಯ ಪ್ರೀತಿಯನ್ನು ನಂಬಿ ಯುವತಿ ಆತನೊಂದಿಗೆ ದೈಹಿಕ‌ ಸಂಪರ್ಕ ಕೂಡ ಬೆಳೆಸಿದ್ದಾಳೆ ಎನ್ನಲಾಗಿದೆ.

ಮದುವೆಯ ದಿನಾಂಕ ಕೂಡ ನಿಗದಿ ಮಾಡಿ ಲಗ್ನ ಪತ್ರಿಕೆಯನ್ನೂ ಸಹ ಪ್ರಿಂಟ್ ಮಾಡಿಸಿದ್ದಾರೆ. ಕೊನೆ ಗಳಿಗೆಯಲ್ಲಿ ಯುವಕನಿಗೆ ಅದೇನಾಯ್ತೋ ಏನು. ಮದುವೆ ಬೇಡ, ನೀವು ಬೇರೆ ಜಾತಿ ನಾವು ಬೇರೆ ಜಾತಿ ಎಂದು ನೆಪ ಹೇಳಿ ಮದುವೆಗೆ ನಿರಾಕರಿಸಿದ್ದಾನೆ ಆರೋಪ ಕೇಳಿಬಂದಿದೆ.

ಇನ್ನು, ಈ ಮೊದಲು ಮದುವೆಗೆ ನಿರಾಕರಿಸಿದ ಹಿನ್ನೆಲೆ ಯುವತಿ ವಿಷ ಸೇವನೆ ಮಾಡಿದ್ದಳು. ಆಗ ರಾಜಿ ಸಂಧಾನಕ್ಕೆ ಮುಂದಾದ ಪೊಲೀಸ್ ಪೇದೆ, ಮದುವೆ ಆಗುವುದಾಗಿ ಹೇಳಿದ್ದಾನೆ. ಇದೇ ರೀತಿ ಪದೇ ಪದೇ ಜಗಳ ಆಗುತ್ತಿತ್ತು. ಎರಡು ಬಾರಿ ವಿಷ ಸೇವನೆ ಮಾಡಿದ್ದ ಯುವತಿ ಈಗ ಮೂರನೇ ಬಾರಿಗೆ ವಿಷ ಸೇವನೆ ಮಾಡಿದ್ದಾಳೆ ಎನ್ನಲಾಗಿದೆ. ನನ್ನನ್ನು ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದಾನೆ. ನನಗೆ ಆತನೇ ಬೇಕು ಎಂದು ಯುವತಿ ಪಟ್ಟು ಹಿಡಿದಿದ್ದಾಳೆ.

ಇನ್ನೂ, ಇವರಿಬ್ಬರು ಕರೆಸ್ಪಾಂಡೆನ್ಸ್ ನಲ್ಲಿ ಬಿಎ ವ್ಯಾಸಂಗ ಮಾಡಲು ಚಿಕ್ಕಬಳ್ಳಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸೇರುತ್ತಾರೆ. ಕಾಲೇಜಿನಲ್ಲಿ ವಿದ್ಯಾರ್ಥಿಗಳು ಎಲ್ಲರು ಸೇರಿ ಒಂದು ವಾಟ್ಸ್ ಆಪ್ ಗ್ರೂಪ್ ಮಾಡುತ್ತಾರೆ. ಅಲ್ಲಿಂದ ನಂಬರ್ ತೆಗೆದುಕೊಂಡು ಅಲ್ಲಿಂದ ಆರಂಭ ಆದ ಪ್ರೀತಿ ಈಗ ವಿಷ ಸೇವಿಸಿ ಆಸ್ಪತ್ರೆಯಲ್ಲಿ ಮಲಗುವ ಹಂತಕ್ಕೆ ತಲುಪಿದೆ.

ವಿಷ ಸೇವನೆ ಮಾಡುವಾಗ ಪೊಲೀಸ್ ಪೇದೆ, ನನಗೆ ಯುವತಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾಳೆ, ಮಧ್ಯಸ್ಥಿಕೆ ವಹಿಸಿದ್ದವರು ಹಣ ಕೇಳಿದ್ದರು. ಕೊಟ್ಟರೂ ನನಗೆ ಕಿರುಕುಳ ತಪ್ಪಿಲ್ಲ ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾ ಇದ್ದೇನೆ ಎಂದು ಹೇಳಿದ್ದಾನೆ.

ಒಟ್ಟಾರೆ ಪ್ರೀತಿಸಿ ಮದುವೆ ಆಗಿ ಸುಖ ಸಂಸಾರ ಸಾಗಿಸಬೇಕಿದ್ದ ಜೋಡಿ, ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಪಾಲಾಗಿದ್ದು ಮಾತ್ರ ವಿಪರ್ಯಾಸ. ಪೊಲೀಸ್ ಪೇದೆಯಾಗಿ ಜನಸಾಮಾನ್ಯರಿಗೆ ನ್ಯಾಯ ಹೇಳಬೇಕಿದ್ದ ವ್ಯಕ್ತಿ, ಈಗ ಯುವತಿಗೆ ಮೋಸ ಮಾಡಿರುವ ಆರೋಪ ಹೊತ್ತಿದ್ದಾನೆ. ಆಸ್ಪತ್ರೆಗೆ ಎಸ್ಪಿ ಕುಶಾಲ್ ಚೌಕ್ಸೆ ಭೇಟಿ ನೀಡಿ, ತನಿಖೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

11 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

12 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

12 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

12 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

14 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

18 hours ago