ಪ್ರೀತಿಸಿ ಇಬ್ಬರೂ ಒಟ್ಟೊಟ್ಟಿಗೆ ಪ್ರಣಯ ಪಕ್ಷಿಗಳಂತೆ ಸುತ್ತುತ್ತಿದ್ದರು. ಪ್ರೀತಿಗೆ ಅಡ್ಡವಾಗದ ಜಾತಿ ಮದುವೆಗೆ ಅಡ್ಡಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸ್ ಪೇದೆ ಮತ್ತು ಯುವತಿ ಇಬ್ಬರೂ ವಿಷ ಸೇವಿಸಿ ಆಸ್ಪತ್ರೆಯಲ್ಲಿ ಬೆಡ್ ಮೇಲೆ ನರಳಾಡುತ್ತಿದ್ದಾರೆ. ಈ ಕುರಿತ ಕಂಪ್ಲೀಟ್ ವರದಿ ಇಲ್ಲಿದೆ ನೋಡಿ….
ಹೌದು, ಮದುವೆಯಾಗಲು ಜಾತಿ ಅಡ್ಡಿಯಾದ ಹಿನ್ನೆಲೆ ಇಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ತಿಮ್ಮಣ್ಣರಾಮಪ್ಪಭೂಸರೆಡ್ಡಿ ಎಂಬ ವ್ಯಕ್ತಿ, ಶಿರಿಷಾ ಎಂಬ ಯುವತಿಯೊಂದಿಗೆ ಪ್ರೀತಿ ಮಾಡುತ್ತಿದ್ದ. ಪೊಲೀಸ್ ಪೇದೆಯ ಪ್ರೀತಿಯನ್ನು ನಂಬಿ ಯುವತಿ ಆತನೊಂದಿಗೆ ದೈಹಿಕ ಸಂಪರ್ಕ ಕೂಡ ಬೆಳೆಸಿದ್ದಾಳೆ ಎನ್ನಲಾಗಿದೆ.
ಮದುವೆಯ ದಿನಾಂಕ ಕೂಡ ನಿಗದಿ ಮಾಡಿ ಲಗ್ನ ಪತ್ರಿಕೆಯನ್ನೂ ಸಹ ಪ್ರಿಂಟ್ ಮಾಡಿಸಿದ್ದಾರೆ. ಕೊನೆ ಗಳಿಗೆಯಲ್ಲಿ ಯುವಕನಿಗೆ ಅದೇನಾಯ್ತೋ ಏನು. ಮದುವೆ ಬೇಡ, ನೀವು ಬೇರೆ ಜಾತಿ ನಾವು ಬೇರೆ ಜಾತಿ ಎಂದು ನೆಪ ಹೇಳಿ ಮದುವೆಗೆ ನಿರಾಕರಿಸಿದ್ದಾನೆ ಆರೋಪ ಕೇಳಿಬಂದಿದೆ.
ಇನ್ನು, ಈ ಮೊದಲು ಮದುವೆಗೆ ನಿರಾಕರಿಸಿದ ಹಿನ್ನೆಲೆ ಯುವತಿ ವಿಷ ಸೇವನೆ ಮಾಡಿದ್ದಳು. ಆಗ ರಾಜಿ ಸಂಧಾನಕ್ಕೆ ಮುಂದಾದ ಪೊಲೀಸ್ ಪೇದೆ, ಮದುವೆ ಆಗುವುದಾಗಿ ಹೇಳಿದ್ದಾನೆ. ಇದೇ ರೀತಿ ಪದೇ ಪದೇ ಜಗಳ ಆಗುತ್ತಿತ್ತು. ಎರಡು ಬಾರಿ ವಿಷ ಸೇವನೆ ಮಾಡಿದ್ದ ಯುವತಿ ಈಗ ಮೂರನೇ ಬಾರಿಗೆ ವಿಷ ಸೇವನೆ ಮಾಡಿದ್ದಾಳೆ ಎನ್ನಲಾಗಿದೆ. ನನ್ನನ್ನು ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದಾನೆ. ನನಗೆ ಆತನೇ ಬೇಕು ಎಂದು ಯುವತಿ ಪಟ್ಟು ಹಿಡಿದಿದ್ದಾಳೆ.
ಇನ್ನೂ, ಇವರಿಬ್ಬರು ಕರೆಸ್ಪಾಂಡೆನ್ಸ್ ನಲ್ಲಿ ಬಿಎ ವ್ಯಾಸಂಗ ಮಾಡಲು ಚಿಕ್ಕಬಳ್ಳಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸೇರುತ್ತಾರೆ. ಕಾಲೇಜಿನಲ್ಲಿ ವಿದ್ಯಾರ್ಥಿಗಳು ಎಲ್ಲರು ಸೇರಿ ಒಂದು ವಾಟ್ಸ್ ಆಪ್ ಗ್ರೂಪ್ ಮಾಡುತ್ತಾರೆ. ಅಲ್ಲಿಂದ ನಂಬರ್ ತೆಗೆದುಕೊಂಡು ಅಲ್ಲಿಂದ ಆರಂಭ ಆದ ಪ್ರೀತಿ ಈಗ ವಿಷ ಸೇವಿಸಿ ಆಸ್ಪತ್ರೆಯಲ್ಲಿ ಮಲಗುವ ಹಂತಕ್ಕೆ ತಲುಪಿದೆ.
ವಿಷ ಸೇವನೆ ಮಾಡುವಾಗ ಪೊಲೀಸ್ ಪೇದೆ, ನನಗೆ ಯುವತಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾಳೆ, ಮಧ್ಯಸ್ಥಿಕೆ ವಹಿಸಿದ್ದವರು ಹಣ ಕೇಳಿದ್ದರು. ಕೊಟ್ಟರೂ ನನಗೆ ಕಿರುಕುಳ ತಪ್ಪಿಲ್ಲ ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾ ಇದ್ದೇನೆ ಎಂದು ಹೇಳಿದ್ದಾನೆ.
ಒಟ್ಟಾರೆ ಪ್ರೀತಿಸಿ ಮದುವೆ ಆಗಿ ಸುಖ ಸಂಸಾರ ಸಾಗಿಸಬೇಕಿದ್ದ ಜೋಡಿ, ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಪಾಲಾಗಿದ್ದು ಮಾತ್ರ ವಿಪರ್ಯಾಸ. ಪೊಲೀಸ್ ಪೇದೆಯಾಗಿ ಜನಸಾಮಾನ್ಯರಿಗೆ ನ್ಯಾಯ ಹೇಳಬೇಕಿದ್ದ ವ್ಯಕ್ತಿ, ಈಗ ಯುವತಿಗೆ ಮೋಸ ಮಾಡಿರುವ ಆರೋಪ ಹೊತ್ತಿದ್ದಾನೆ. ಆಸ್ಪತ್ರೆಗೆ ಎಸ್ಪಿ ಕುಶಾಲ್ ಚೌಕ್ಸೆ ಭೇಟಿ ನೀಡಿ, ತನಿಖೆ ಮುಂದುವರಿಸಿದ್ದಾರೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…