ಅವರಿಬ್ಬರು ಪ್ರೀತಿ ಅಮರ, ಮಧುರ, ಪ್ರೇಮ ಎಂದು 6 ವರ್ಷಗಳು ಸುತ್ತಾಡಿದ್ರು. ಆದ್ರೆ, ಮದುವೆ ಎಂಬ ಕೂಗು ಕೇಳುತ್ತಿದಂತೆ ಪೋಷಕರು ಬಿಲ್ ಕುಲ್ ವಿರೋಧ ವ್ಯಕ್ತಪಡಿಸಿದ್ರು, ಇದೆಕ್ಕೆಲ್ಲಾ ತಲೆಕೆಡಿಸಿಕೊಳ್ಳದ ಅಮರ ಪ್ರೇಮಿಗಳು ಪೊಲೀಸರ ಮೊರೆ ಹೋಗಿ ಸಾಂಪ್ರದಾಯದಂತೆ ಮದುವೆ ಆಗಿ ನೂತನ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ…ಇಷ್ಟಕ್ಕೂ ಈ ಮದುವೆ ನಡೆದಿದ್ರು ಆದ್ರು ಎಲ್ಲಿ ಅಂತೀರಾ… ಈ ಸ್ಟೋರಿ ಓದಿ…..
ಹೀಗೆ ಪೊಲೀಸರೇ ತಾಳಿ ಕಟ್ಟಿಸಿ, ಕಾಲುಂಗರ ತೊಡಿಸಿ ನೂತನ ವಧು ವರರಿಗೆ ಆಶೀರ್ವಾದ ನೀಡುತ್ತಿರುವ ಘಟನೆ ಕಂಡು ಬಂದಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ. ಹೌದು, ಕಳೆದ ಆರು ವರ್ಷಗಳಿಂದ ಶಿಡ್ಲಘಟ್ಟ ತಾಲೂಕಿನ ದೊಡ್ಡದಾಸೇನಹಳ್ಳಿ ಗ್ರಾಮದ ಕಾರ್ತೀಕ್ ಹಾಗೂ ಶಿಡ್ಲಘಟ್ಟ ನಗರದ ಅಂಕಿತಾ ಪ್ರೀತಿ ಪ್ರೇಮ ಎಂದು ಸುತ್ತಾಟ ನಡೆಸಿದ್ರು. ಆದ್ರೆ, ಅಂಕಿತಾಗೆ ಮತ್ತೊಬ್ಬ ಯುವಕನ ಜೊತೆ ಮದುವೆ ಮಾಡಲು ಪೋಷಕರು ತೀರ್ಮಾನಿಸಿದ್ದರು. ಇದೇ ವಿಚಾರವನ್ನು ಪ್ರಿಯಕರ ಕಾರ್ತೀಕ್ ಗೆ ಅಂಕಿತಾ ತಿಳಿಸಿದ್ದಾಳೆ. ಆದ್ರೆ ಕಾರ್ತಿಕ್ ಇನ್ನೂ ಎರಡು ವರ್ಷಗಳ ಕಾಲ ಮದುವೆ ಬೇಡ ಎಂದು ತಿಳಿಸಿದ್ದಾನೆ. ಇದರಿಂದ ಬೇಸರಗೊಂಡ ಅಂಕಿತಾ ಕಳೆದ ದಿನ ಶಿಡ್ಲಘಟ್ಟ ನಗರಠಾಣೆಯ ಮೊರೆ ಹೋಗಿ ದೂರು ದಾಖಲಿಸಿದ್ದಾಳೆ. ಸದ್ಯ ಇಂದು ಶಿಡ್ಲಘಟ್ಟ ಠಾಣೆಯ ಪೊಲೀಸರು ಯುವಕ-ಯುವತಿಯ ಕಡೆ ಪೋಷಕರನ್ನು ಠಾಣೆಗೆ ಕರೆಸಿ ಮದುವೆ ಮಾಡಿಸುವಂತೆ ಒಪ್ಪಿಸಿದ್ದಾರೆ. ಆದರೆ, ಮದುವೆಗೆ ಯುವತಿಯ ತಾಯಿ, ಅಕ್ಕ-ಬಾವ ಒಪ್ಪಿಗೆ ಸೂಚಿಸಿದ್ದು, ತಂದೆ ಹಾಗೂ ಯುವಕನ ಪೋಷಕರು ಬಿಲ್ ಕುಲ್ ಒಪ್ಪದ ಹಿನ್ನೆಲೆ ಪೊಲೀಸರು ಯುವಕ-ಯುವತಿಯ ಹೇಳಿಕೆಯ ಆಧಾರದ ಮೇಲೆ ಪೊಲೀಸ್ ಠಾಣೆ ಮುಂಭಾಗ ಅರಿಶಿನ ಕುಂಕುಮ ಜೊತೆಗೆ ತಾಳಿಯನ್ನು ಕಟ್ಟಿಸಿ ನಂತರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವೇಣುಗೋಪಾಲ್ ತಂದೆಯ ಸ್ಥಾನದಲ್ಲಿ ನಿಂತು ನವ ವಧುವಿಗೆ ಕಾಲುಂಗರ ತೊಡಿಸಿ ಆಶೀರ್ವಾದ ನೀಡಿ ಎಲ್ಲರ ಗಮನವನ್ನು ಸೆಳೆದಿದ್ದಾರೆ.
ಇನ್ನೂಈ ಜೊಡಿಯ ಆರು ವರ್ಷಗಳ ಪ್ರೀತಿಗೆ ಪೊಲೀಸರಿಂದ ನ್ಯಾಯ ದೊರೆಕಿದ್ದು, ನೂತನ ವೈವಾಹಿಕ ಜೀವನಕ್ಕೆ ಕಾಲಿಟ್ಟ ನವ ಜೋಡಿ ಪೋಷಕರ ವಿರೋಧ ನಡುವೆ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ.
ಪೊಲೀಸರು ಹಾರ ತೂರಾಯಿ ಕಾನೂನು ಬದ್ಧವಾಗಿ ಮದುವೆ ಮಾಡಿಸಿಕೊಟ್ಟಿರುವುದು ಎಲ್ಲರ ಗಮನವನ್ನು ಸೆಳೆದಿದೆ.
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…