ಅವರಿಬ್ಬರು ಪ್ರೀತಿ ಅಮರ, ಮಧುರ, ಪ್ರೇಮ ಎಂದು 6 ವರ್ಷಗಳು ಸುತ್ತಾಡಿದ್ರು. ಆದ್ರೆ, ಮದುವೆ ಎಂಬ ಕೂಗು ಕೇಳುತ್ತಿದಂತೆ ಪೋಷಕರು ಬಿಲ್ ಕುಲ್ ವಿರೋಧ ವ್ಯಕ್ತಪಡಿಸಿದ್ರು, ಇದೆಕ್ಕೆಲ್ಲಾ ತಲೆಕೆಡಿಸಿಕೊಳ್ಳದ ಅಮರ ಪ್ರೇಮಿಗಳು ಪೊಲೀಸರ ಮೊರೆ ಹೋಗಿ ಸಾಂಪ್ರದಾಯದಂತೆ ಮದುವೆ ಆಗಿ ನೂತನ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ…ಇಷ್ಟಕ್ಕೂ ಈ ಮದುವೆ ನಡೆದಿದ್ರು ಆದ್ರು ಎಲ್ಲಿ ಅಂತೀರಾ… ಈ ಸ್ಟೋರಿ ಓದಿ…..
ಹೀಗೆ ಪೊಲೀಸರೇ ತಾಳಿ ಕಟ್ಟಿಸಿ, ಕಾಲುಂಗರ ತೊಡಿಸಿ ನೂತನ ವಧು ವರರಿಗೆ ಆಶೀರ್ವಾದ ನೀಡುತ್ತಿರುವ ಘಟನೆ ಕಂಡು ಬಂದಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ. ಹೌದು, ಕಳೆದ ಆರು ವರ್ಷಗಳಿಂದ ಶಿಡ್ಲಘಟ್ಟ ತಾಲೂಕಿನ ದೊಡ್ಡದಾಸೇನಹಳ್ಳಿ ಗ್ರಾಮದ ಕಾರ್ತೀಕ್ ಹಾಗೂ ಶಿಡ್ಲಘಟ್ಟ ನಗರದ ಅಂಕಿತಾ ಪ್ರೀತಿ ಪ್ರೇಮ ಎಂದು ಸುತ್ತಾಟ ನಡೆಸಿದ್ರು. ಆದ್ರೆ, ಅಂಕಿತಾಗೆ ಮತ್ತೊಬ್ಬ ಯುವಕನ ಜೊತೆ ಮದುವೆ ಮಾಡಲು ಪೋಷಕರು ತೀರ್ಮಾನಿಸಿದ್ದರು. ಇದೇ ವಿಚಾರವನ್ನು ಪ್ರಿಯಕರ ಕಾರ್ತೀಕ್ ಗೆ ಅಂಕಿತಾ ತಿಳಿಸಿದ್ದಾಳೆ. ಆದ್ರೆ ಕಾರ್ತಿಕ್ ಇನ್ನೂ ಎರಡು ವರ್ಷಗಳ ಕಾಲ ಮದುವೆ ಬೇಡ ಎಂದು ತಿಳಿಸಿದ್ದಾನೆ. ಇದರಿಂದ ಬೇಸರಗೊಂಡ ಅಂಕಿತಾ ಕಳೆದ ದಿನ ಶಿಡ್ಲಘಟ್ಟ ನಗರಠಾಣೆಯ ಮೊರೆ ಹೋಗಿ ದೂರು ದಾಖಲಿಸಿದ್ದಾಳೆ. ಸದ್ಯ ಇಂದು ಶಿಡ್ಲಘಟ್ಟ ಠಾಣೆಯ ಪೊಲೀಸರು ಯುವಕ-ಯುವತಿಯ ಕಡೆ ಪೋಷಕರನ್ನು ಠಾಣೆಗೆ ಕರೆಸಿ ಮದುವೆ ಮಾಡಿಸುವಂತೆ ಒಪ್ಪಿಸಿದ್ದಾರೆ. ಆದರೆ, ಮದುವೆಗೆ ಯುವತಿಯ ತಾಯಿ, ಅಕ್ಕ-ಬಾವ ಒಪ್ಪಿಗೆ ಸೂಚಿಸಿದ್ದು, ತಂದೆ ಹಾಗೂ ಯುವಕನ ಪೋಷಕರು ಬಿಲ್ ಕುಲ್ ಒಪ್ಪದ ಹಿನ್ನೆಲೆ ಪೊಲೀಸರು ಯುವಕ-ಯುವತಿಯ ಹೇಳಿಕೆಯ ಆಧಾರದ ಮೇಲೆ ಪೊಲೀಸ್ ಠಾಣೆ ಮುಂಭಾಗ ಅರಿಶಿನ ಕುಂಕುಮ ಜೊತೆಗೆ ತಾಳಿಯನ್ನು ಕಟ್ಟಿಸಿ ನಂತರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವೇಣುಗೋಪಾಲ್ ತಂದೆಯ ಸ್ಥಾನದಲ್ಲಿ ನಿಂತು ನವ ವಧುವಿಗೆ ಕಾಲುಂಗರ ತೊಡಿಸಿ ಆಶೀರ್ವಾದ ನೀಡಿ ಎಲ್ಲರ ಗಮನವನ್ನು ಸೆಳೆದಿದ್ದಾರೆ.
ಇನ್ನೂಈ ಜೊಡಿಯ ಆರು ವರ್ಷಗಳ ಪ್ರೀತಿಗೆ ಪೊಲೀಸರಿಂದ ನ್ಯಾಯ ದೊರೆಕಿದ್ದು, ನೂತನ ವೈವಾಹಿಕ ಜೀವನಕ್ಕೆ ಕಾಲಿಟ್ಟ ನವ ಜೋಡಿ ಪೋಷಕರ ವಿರೋಧ ನಡುವೆ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ.
ಪೊಲೀಸರು ಹಾರ ತೂರಾಯಿ ಕಾನೂನು ಬದ್ಧವಾಗಿ ಮದುವೆ ಮಾಡಿಸಿಕೊಟ್ಟಿರುವುದು ಎಲ್ಲರ ಗಮನವನ್ನು ಸೆಳೆದಿದೆ.
ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…
ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…
ಬದುಕಿನ ಬೆಳದಿಂಗಳಲ್ಲಿ ನಮ್ಮ ಹುರುಪು, ಹುಕುಂಗಳು ಹಾಗೂ ಹಲವು ವಿಭಿನ್ನತೆಗಳ ವಿಚಾರಾರ್ಥಗಳು ನೆನೆಗುದಿಗೆ ಬಿದ್ದಿದ್ದುಂಟು. ಹಾಗೆಯೇ ಸದ್ಗುಣ-ದುರ್ಗುಣಗಳ ವ್ಯತ್ಯಾಸವನು ಅರಿತು…
ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3 ಗಂಟೆಯಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ…
2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ…
ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತೋಟಗಾರಿಕೆ…