ಪ್ರೀತಿ, ಪ್ರೇಮ, ಪೋಷಕರ ವಿರೋಧ, ಪೊಲೀಸ್ ಠಾಣೆಯಲ್ಲೇ ಮದುವೆ: ವಧುವಿನ ತಂದೆ ಸ್ಥಾನದಲ್ಲಿ ನಿಂತು ಆಶೀರ್ವಾದಿಸಿದ ಸಬ್ ಇನ್ಸ್ ಪೆಕ್ಟರ್

ಅವರಿಬ್ಬರು ಪ್ರೀತಿ ಅಮರ, ಮಧುರ, ಪ್ರೇಮ ಎಂದು 6 ವರ್ಷಗಳು ಸುತ್ತಾಡಿದ್ರು. ಆದ್ರೆ, ಮದುವೆ ಎಂಬ ಕೂಗು ಕೇಳುತ್ತಿದಂತೆ ಪೋಷಕರು ಬಿಲ್ ಕುಲ್ ವಿರೋಧ ವ್ಯಕ್ತಪಡಿಸಿದ್ರು, ಇದೆಕ್ಕೆಲ್ಲಾ ತಲೆಕೆಡಿಸಿಕೊಳ್ಳದ ಅಮರ ಪ್ರೇಮಿಗಳು ಪೊಲೀಸರ ಮೊರೆ ಹೋಗಿ ಸಾಂಪ್ರದಾಯದಂತೆ ಮದುವೆ ಆಗಿ ನೂತನ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ…ಇಷ್ಟಕ್ಕೂ ಈ ಮದುವೆ ನಡೆದಿದ್ರು ಆದ್ರು ಎಲ್ಲಿ ಅಂತೀರಾ… ಈ ಸ್ಟೋರಿ ಓದಿ…..

ಹೀಗೆ ಪೊಲೀಸರೇ ತಾಳಿ ಕಟ್ಟಿಸಿ, ಕಾಲುಂಗರ ತೊಡಿಸಿ ನೂತನ‌ ವಧು ವರರಿಗೆ ಆಶೀರ್ವಾದ ನೀಡುತ್ತಿರುವ ಘಟನೆ ಕಂಡು ಬಂದಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ. ಹೌದು, ಕಳೆದ ಆರು ವರ್ಷಗಳಿಂದ ಶಿಡ್ಲಘಟ್ಟ ತಾಲೂಕಿನ ದೊಡ್ಡದಾಸೇನಹಳ್ಳಿ ಗ್ರಾಮದ ಕಾರ್ತೀಕ್ ಹಾಗೂ ಶಿಡ್ಲಘಟ್ಟ ನಗರದ ಅಂಕಿತಾ ಪ್ರೀತಿ ಪ್ರೇಮ ಎಂದು ಸುತ್ತಾಟ ನಡೆಸಿದ್ರು. ಆದ್ರೆ, ಅಂಕಿತಾಗೆ ಮತ್ತೊಬ್ಬ ಯುವಕನ ಜೊತೆ ಮದುವೆ ಮಾಡಲು ಪೋಷಕರು ತೀರ್ಮಾನಿಸಿದ್ದರು. ಇದೇ ವಿಚಾರವನ್ನು ಪ್ರಿಯಕರ ಕಾರ್ತೀಕ್ ಗೆ ಅಂಕಿತಾ ತಿಳಿಸಿದ್ದಾಳೆ. ಆದ್ರೆ ಕಾರ್ತಿಕ್ ಇನ್ನೂ ಎರಡು ವರ್ಷಗಳ ಕಾಲ ಮದುವೆ ಬೇಡ ಎಂದು ತಿಳಿಸಿದ್ದಾನೆ. ಇದರಿಂದ ಬೇಸರಗೊಂಡ ಅಂಕಿತಾ ಕಳೆದ ದಿನ ಶಿಡ್ಲಘಟ್ಟ ನಗರಠಾಣೆಯ ಮೊರೆ ಹೋಗಿ ದೂರು ದಾಖಲಿಸಿದ್ದಾಳೆ. ಸದ್ಯ ಇಂದು ಶಿಡ್ಲಘಟ್ಟ ಠಾಣೆಯ ಪೊಲೀಸರು ಯುವಕ-ಯುವತಿಯ ಕಡೆ ಪೋಷಕರನ್ನು ಠಾಣೆಗೆ ಕರೆಸಿ ಮದುವೆ ಮಾಡಿಸುವಂತೆ  ಒಪ್ಪಿಸಿದ್ದಾರೆ. ಆದರೆ, ಮದುವೆಗೆ ಯುವತಿಯ ತಾಯಿ, ಅಕ್ಕ-ಬಾವ  ಒಪ್ಪಿಗೆ ಸೂಚಿಸಿದ್ದು, ತಂದೆ ಹಾಗೂ ಯುವಕನ ಪೋಷಕರು ಬಿಲ್ ಕುಲ್ ಒಪ್ಪದ ಹಿನ್ನೆಲೆ ಪೊಲೀಸರು ಯುವಕ-ಯುವತಿಯ ಹೇಳಿಕೆಯ ಆಧಾರದ ಮೇಲೆ ಪೊಲೀಸ್ ಠಾಣೆ ಮುಂಭಾಗ ಅರಿಶಿನ ಕುಂಕುಮ ಜೊತೆಗೆ ತಾಳಿಯನ್ನು ಕಟ್ಟಿಸಿ ನಂತರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವೇಣುಗೋಪಾಲ್ ತಂದೆಯ ಸ್ಥಾನದಲ್ಲಿ ನಿಂತು ನವ ವಧುವಿಗೆ ಕಾಲುಂಗರ ತೊಡಿಸಿ ಆಶೀರ್ವಾದ ನೀಡಿ ಎಲ್ಲರ ಗಮನವನ್ನು ಸೆಳೆದಿದ್ದಾರೆ.

ಇನ್ನೂಈ ಜೊಡಿಯ ಆರು ವರ್ಷಗಳ ಪ್ರೀತಿಗೆ ಪೊಲೀಸರಿಂದ ನ್ಯಾಯ ದೊರೆಕಿದ್ದು, ನೂತನ ವೈವಾಹಿಕ ಜೀವನಕ್ಕೆ ಕಾಲಿಟ್ಟ ನವ ಜೋಡಿ ಪೋಷಕರ ವಿರೋಧ ನಡುವೆ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ.

ಪೊಲೀಸರು ಹಾರ ತೂರಾಯಿ ಕಾನೂನು ಬದ್ಧವಾಗಿ ಮದುವೆ ಮಾಡಿಸಿಕೊಟ್ಟಿರುವುದು ಎಲ್ಲರ ಗಮನವನ್ನು ಸೆಳೆದಿದೆ.

Ramesh Babu

Journalist

Recent Posts

“ಕುವೆಂಪು”….. ಸಾಹಿತ್ಯ – ವಿಶ್ವ ಮಾನವ ಪ್ರಜ್ಞೆ……

ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…

28 minutes ago

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

23 hours ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

1 day ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

2 days ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

2 days ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

2 days ago