ಪ್ರೀತಿ, ಪ್ರೇಮ, ಪೋಷಕರ ವಿರೋಧ, ಪೊಲೀಸ್ ಠಾಣೆಯಲ್ಲೇ ಮದುವೆ: ವಧುವಿನ ತಂದೆ ಸ್ಥಾನದಲ್ಲಿ ನಿಂತು ಆಶೀರ್ವಾದಿಸಿದ ಸಬ್ ಇನ್ಸ್ ಪೆಕ್ಟರ್

ಅವರಿಬ್ಬರು ಪ್ರೀತಿ ಅಮರ, ಮಧುರ, ಪ್ರೇಮ ಎಂದು 6 ವರ್ಷಗಳು ಸುತ್ತಾಡಿದ್ರು. ಆದ್ರೆ, ಮದುವೆ ಎಂಬ ಕೂಗು ಕೇಳುತ್ತಿದಂತೆ ಪೋಷಕರು ಬಿಲ್ ಕುಲ್ ವಿರೋಧ ವ್ಯಕ್ತಪಡಿಸಿದ್ರು, ಇದೆಕ್ಕೆಲ್ಲಾ ತಲೆಕೆಡಿಸಿಕೊಳ್ಳದ ಅಮರ ಪ್ರೇಮಿಗಳು ಪೊಲೀಸರ ಮೊರೆ ಹೋಗಿ ಸಾಂಪ್ರದಾಯದಂತೆ ಮದುವೆ ಆಗಿ ನೂತನ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ…ಇಷ್ಟಕ್ಕೂ ಈ ಮದುವೆ ನಡೆದಿದ್ರು ಆದ್ರು ಎಲ್ಲಿ ಅಂತೀರಾ… ಈ ಸ್ಟೋರಿ ಓದಿ…..

ಹೀಗೆ ಪೊಲೀಸರೇ ತಾಳಿ ಕಟ್ಟಿಸಿ, ಕಾಲುಂಗರ ತೊಡಿಸಿ ನೂತನ‌ ವಧು ವರರಿಗೆ ಆಶೀರ್ವಾದ ನೀಡುತ್ತಿರುವ ಘಟನೆ ಕಂಡು ಬಂದಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ. ಹೌದು, ಕಳೆದ ಆರು ವರ್ಷಗಳಿಂದ ಶಿಡ್ಲಘಟ್ಟ ತಾಲೂಕಿನ ದೊಡ್ಡದಾಸೇನಹಳ್ಳಿ ಗ್ರಾಮದ ಕಾರ್ತೀಕ್ ಹಾಗೂ ಶಿಡ್ಲಘಟ್ಟ ನಗರದ ಅಂಕಿತಾ ಪ್ರೀತಿ ಪ್ರೇಮ ಎಂದು ಸುತ್ತಾಟ ನಡೆಸಿದ್ರು. ಆದ್ರೆ, ಅಂಕಿತಾಗೆ ಮತ್ತೊಬ್ಬ ಯುವಕನ ಜೊತೆ ಮದುವೆ ಮಾಡಲು ಪೋಷಕರು ತೀರ್ಮಾನಿಸಿದ್ದರು. ಇದೇ ವಿಚಾರವನ್ನು ಪ್ರಿಯಕರ ಕಾರ್ತೀಕ್ ಗೆ ಅಂಕಿತಾ ತಿಳಿಸಿದ್ದಾಳೆ. ಆದ್ರೆ ಕಾರ್ತಿಕ್ ಇನ್ನೂ ಎರಡು ವರ್ಷಗಳ ಕಾಲ ಮದುವೆ ಬೇಡ ಎಂದು ತಿಳಿಸಿದ್ದಾನೆ. ಇದರಿಂದ ಬೇಸರಗೊಂಡ ಅಂಕಿತಾ ಕಳೆದ ದಿನ ಶಿಡ್ಲಘಟ್ಟ ನಗರಠಾಣೆಯ ಮೊರೆ ಹೋಗಿ ದೂರು ದಾಖಲಿಸಿದ್ದಾಳೆ. ಸದ್ಯ ಇಂದು ಶಿಡ್ಲಘಟ್ಟ ಠಾಣೆಯ ಪೊಲೀಸರು ಯುವಕ-ಯುವತಿಯ ಕಡೆ ಪೋಷಕರನ್ನು ಠಾಣೆಗೆ ಕರೆಸಿ ಮದುವೆ ಮಾಡಿಸುವಂತೆ  ಒಪ್ಪಿಸಿದ್ದಾರೆ. ಆದರೆ, ಮದುವೆಗೆ ಯುವತಿಯ ತಾಯಿ, ಅಕ್ಕ-ಬಾವ  ಒಪ್ಪಿಗೆ ಸೂಚಿಸಿದ್ದು, ತಂದೆ ಹಾಗೂ ಯುವಕನ ಪೋಷಕರು ಬಿಲ್ ಕುಲ್ ಒಪ್ಪದ ಹಿನ್ನೆಲೆ ಪೊಲೀಸರು ಯುವಕ-ಯುವತಿಯ ಹೇಳಿಕೆಯ ಆಧಾರದ ಮೇಲೆ ಪೊಲೀಸ್ ಠಾಣೆ ಮುಂಭಾಗ ಅರಿಶಿನ ಕುಂಕುಮ ಜೊತೆಗೆ ತಾಳಿಯನ್ನು ಕಟ್ಟಿಸಿ ನಂತರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವೇಣುಗೋಪಾಲ್ ತಂದೆಯ ಸ್ಥಾನದಲ್ಲಿ ನಿಂತು ನವ ವಧುವಿಗೆ ಕಾಲುಂಗರ ತೊಡಿಸಿ ಆಶೀರ್ವಾದ ನೀಡಿ ಎಲ್ಲರ ಗಮನವನ್ನು ಸೆಳೆದಿದ್ದಾರೆ.

ಇನ್ನೂಈ ಜೊಡಿಯ ಆರು ವರ್ಷಗಳ ಪ್ರೀತಿಗೆ ಪೊಲೀಸರಿಂದ ನ್ಯಾಯ ದೊರೆಕಿದ್ದು, ನೂತನ ವೈವಾಹಿಕ ಜೀವನಕ್ಕೆ ಕಾಲಿಟ್ಟ ನವ ಜೋಡಿ ಪೋಷಕರ ವಿರೋಧ ನಡುವೆ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ.

ಪೊಲೀಸರು ಹಾರ ತೂರಾಯಿ ಕಾನೂನು ಬದ್ಧವಾಗಿ ಮದುವೆ ಮಾಡಿಸಿಕೊಟ್ಟಿರುವುದು ಎಲ್ಲರ ಗಮನವನ್ನು ಸೆಳೆದಿದೆ.

Ramesh Babu

Journalist

Recent Posts

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

49 minutes ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

3 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

3 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

4 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

6 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

11 hours ago