ಪ್ರೀತಿ, ಪ್ರೇಮ, ಪೋಷಕರ ವಿರೋಧ, ಪೊಲೀಸ್ ಠಾಣೆಯಲ್ಲೇ ಮದುವೆ: ವಧುವಿನ ತಂದೆ ಸ್ಥಾನದಲ್ಲಿ ನಿಂತು ಆಶೀರ್ವಾದಿಸಿದ ಸಬ್ ಇನ್ಸ್ ಪೆಕ್ಟರ್

ಅವರಿಬ್ಬರು ಪ್ರೀತಿ ಅಮರ, ಮಧುರ, ಪ್ರೇಮ ಎಂದು 6 ವರ್ಷಗಳು ಸುತ್ತಾಡಿದ್ರು. ಆದ್ರೆ, ಮದುವೆ ಎಂಬ ಕೂಗು ಕೇಳುತ್ತಿದಂತೆ ಪೋಷಕರು ಬಿಲ್ ಕುಲ್ ವಿರೋಧ ವ್ಯಕ್ತಪಡಿಸಿದ್ರು, ಇದೆಕ್ಕೆಲ್ಲಾ ತಲೆಕೆಡಿಸಿಕೊಳ್ಳದ ಅಮರ ಪ್ರೇಮಿಗಳು ಪೊಲೀಸರ ಮೊರೆ ಹೋಗಿ ಸಾಂಪ್ರದಾಯದಂತೆ ಮದುವೆ ಆಗಿ ನೂತನ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ…ಇಷ್ಟಕ್ಕೂ ಈ ಮದುವೆ ನಡೆದಿದ್ರು ಆದ್ರು ಎಲ್ಲಿ ಅಂತೀರಾ… ಈ ಸ್ಟೋರಿ ಓದಿ…..

ಹೀಗೆ ಪೊಲೀಸರೇ ತಾಳಿ ಕಟ್ಟಿಸಿ, ಕಾಲುಂಗರ ತೊಡಿಸಿ ನೂತನ‌ ವಧು ವರರಿಗೆ ಆಶೀರ್ವಾದ ನೀಡುತ್ತಿರುವ ಘಟನೆ ಕಂಡು ಬಂದಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ. ಹೌದು, ಕಳೆದ ಆರು ವರ್ಷಗಳಿಂದ ಶಿಡ್ಲಘಟ್ಟ ತಾಲೂಕಿನ ದೊಡ್ಡದಾಸೇನಹಳ್ಳಿ ಗ್ರಾಮದ ಕಾರ್ತೀಕ್ ಹಾಗೂ ಶಿಡ್ಲಘಟ್ಟ ನಗರದ ಅಂಕಿತಾ ಪ್ರೀತಿ ಪ್ರೇಮ ಎಂದು ಸುತ್ತಾಟ ನಡೆಸಿದ್ರು. ಆದ್ರೆ, ಅಂಕಿತಾಗೆ ಮತ್ತೊಬ್ಬ ಯುವಕನ ಜೊತೆ ಮದುವೆ ಮಾಡಲು ಪೋಷಕರು ತೀರ್ಮಾನಿಸಿದ್ದರು. ಇದೇ ವಿಚಾರವನ್ನು ಪ್ರಿಯಕರ ಕಾರ್ತೀಕ್ ಗೆ ಅಂಕಿತಾ ತಿಳಿಸಿದ್ದಾಳೆ. ಆದ್ರೆ ಕಾರ್ತಿಕ್ ಇನ್ನೂ ಎರಡು ವರ್ಷಗಳ ಕಾಲ ಮದುವೆ ಬೇಡ ಎಂದು ತಿಳಿಸಿದ್ದಾನೆ. ಇದರಿಂದ ಬೇಸರಗೊಂಡ ಅಂಕಿತಾ ಕಳೆದ ದಿನ ಶಿಡ್ಲಘಟ್ಟ ನಗರಠಾಣೆಯ ಮೊರೆ ಹೋಗಿ ದೂರು ದಾಖಲಿಸಿದ್ದಾಳೆ. ಸದ್ಯ ಇಂದು ಶಿಡ್ಲಘಟ್ಟ ಠಾಣೆಯ ಪೊಲೀಸರು ಯುವಕ-ಯುವತಿಯ ಕಡೆ ಪೋಷಕರನ್ನು ಠಾಣೆಗೆ ಕರೆಸಿ ಮದುವೆ ಮಾಡಿಸುವಂತೆ  ಒಪ್ಪಿಸಿದ್ದಾರೆ. ಆದರೆ, ಮದುವೆಗೆ ಯುವತಿಯ ತಾಯಿ, ಅಕ್ಕ-ಬಾವ  ಒಪ್ಪಿಗೆ ಸೂಚಿಸಿದ್ದು, ತಂದೆ ಹಾಗೂ ಯುವಕನ ಪೋಷಕರು ಬಿಲ್ ಕುಲ್ ಒಪ್ಪದ ಹಿನ್ನೆಲೆ ಪೊಲೀಸರು ಯುವಕ-ಯುವತಿಯ ಹೇಳಿಕೆಯ ಆಧಾರದ ಮೇಲೆ ಪೊಲೀಸ್ ಠಾಣೆ ಮುಂಭಾಗ ಅರಿಶಿನ ಕುಂಕುಮ ಜೊತೆಗೆ ತಾಳಿಯನ್ನು ಕಟ್ಟಿಸಿ ನಂತರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವೇಣುಗೋಪಾಲ್ ತಂದೆಯ ಸ್ಥಾನದಲ್ಲಿ ನಿಂತು ನವ ವಧುವಿಗೆ ಕಾಲುಂಗರ ತೊಡಿಸಿ ಆಶೀರ್ವಾದ ನೀಡಿ ಎಲ್ಲರ ಗಮನವನ್ನು ಸೆಳೆದಿದ್ದಾರೆ.

ಇನ್ನೂಈ ಜೊಡಿಯ ಆರು ವರ್ಷಗಳ ಪ್ರೀತಿಗೆ ಪೊಲೀಸರಿಂದ ನ್ಯಾಯ ದೊರೆಕಿದ್ದು, ನೂತನ ವೈವಾಹಿಕ ಜೀವನಕ್ಕೆ ಕಾಲಿಟ್ಟ ನವ ಜೋಡಿ ಪೋಷಕರ ವಿರೋಧ ನಡುವೆ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ.

ಪೊಲೀಸರು ಹಾರ ತೂರಾಯಿ ಕಾನೂನು ಬದ್ಧವಾಗಿ ಮದುವೆ ಮಾಡಿಸಿಕೊಟ್ಟಿರುವುದು ಎಲ್ಲರ ಗಮನವನ್ನು ಸೆಳೆದಿದೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

29 minutes ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

21 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago