ಪ್ರೀತಿ, ಪ್ರೇಮ, ಪೋಷಕರ ವಿರೋಧ, ಪೊಲೀಸ್ ಠಾಣೆಯಲ್ಲೇ ಮದುವೆ: ವಧುವಿನ ತಂದೆ ಸ್ಥಾನದಲ್ಲಿ ನಿಂತು ಆಶೀರ್ವಾದಿಸಿದ ಸಬ್ ಇನ್ಸ್ ಪೆಕ್ಟರ್

ಅವರಿಬ್ಬರು ಪ್ರೀತಿ ಅಮರ, ಮಧುರ, ಪ್ರೇಮ ಎಂದು 6 ವರ್ಷಗಳು ಸುತ್ತಾಡಿದ್ರು. ಆದ್ರೆ, ಮದುವೆ ಎಂಬ ಕೂಗು ಕೇಳುತ್ತಿದಂತೆ ಪೋಷಕರು ಬಿಲ್ ಕುಲ್ ವಿರೋಧ ವ್ಯಕ್ತಪಡಿಸಿದ್ರು, ಇದೆಕ್ಕೆಲ್ಲಾ ತಲೆಕೆಡಿಸಿಕೊಳ್ಳದ ಅಮರ ಪ್ರೇಮಿಗಳು ಪೊಲೀಸರ ಮೊರೆ ಹೋಗಿ ಸಾಂಪ್ರದಾಯದಂತೆ ಮದುವೆ ಆಗಿ ನೂತನ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ…ಇಷ್ಟಕ್ಕೂ ಈ ಮದುವೆ ನಡೆದಿದ್ರು ಆದ್ರು ಎಲ್ಲಿ ಅಂತೀರಾ… ಈ ಸ್ಟೋರಿ ಓದಿ…..

ಹೀಗೆ ಪೊಲೀಸರೇ ತಾಳಿ ಕಟ್ಟಿಸಿ, ಕಾಲುಂಗರ ತೊಡಿಸಿ ನೂತನ‌ ವಧು ವರರಿಗೆ ಆಶೀರ್ವಾದ ನೀಡುತ್ತಿರುವ ಘಟನೆ ಕಂಡು ಬಂದಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ. ಹೌದು, ಕಳೆದ ಆರು ವರ್ಷಗಳಿಂದ ಶಿಡ್ಲಘಟ್ಟ ತಾಲೂಕಿನ ದೊಡ್ಡದಾಸೇನಹಳ್ಳಿ ಗ್ರಾಮದ ಕಾರ್ತೀಕ್ ಹಾಗೂ ಶಿಡ್ಲಘಟ್ಟ ನಗರದ ಅಂಕಿತಾ ಪ್ರೀತಿ ಪ್ರೇಮ ಎಂದು ಸುತ್ತಾಟ ನಡೆಸಿದ್ರು. ಆದ್ರೆ, ಅಂಕಿತಾಗೆ ಮತ್ತೊಬ್ಬ ಯುವಕನ ಜೊತೆ ಮದುವೆ ಮಾಡಲು ಪೋಷಕರು ತೀರ್ಮಾನಿಸಿದ್ದರು. ಇದೇ ವಿಚಾರವನ್ನು ಪ್ರಿಯಕರ ಕಾರ್ತೀಕ್ ಗೆ ಅಂಕಿತಾ ತಿಳಿಸಿದ್ದಾಳೆ. ಆದ್ರೆ ಕಾರ್ತಿಕ್ ಇನ್ನೂ ಎರಡು ವರ್ಷಗಳ ಕಾಲ ಮದುವೆ ಬೇಡ ಎಂದು ತಿಳಿಸಿದ್ದಾನೆ. ಇದರಿಂದ ಬೇಸರಗೊಂಡ ಅಂಕಿತಾ ಕಳೆದ ದಿನ ಶಿಡ್ಲಘಟ್ಟ ನಗರಠಾಣೆಯ ಮೊರೆ ಹೋಗಿ ದೂರು ದಾಖಲಿಸಿದ್ದಾಳೆ. ಸದ್ಯ ಇಂದು ಶಿಡ್ಲಘಟ್ಟ ಠಾಣೆಯ ಪೊಲೀಸರು ಯುವಕ-ಯುವತಿಯ ಕಡೆ ಪೋಷಕರನ್ನು ಠಾಣೆಗೆ ಕರೆಸಿ ಮದುವೆ ಮಾಡಿಸುವಂತೆ  ಒಪ್ಪಿಸಿದ್ದಾರೆ. ಆದರೆ, ಮದುವೆಗೆ ಯುವತಿಯ ತಾಯಿ, ಅಕ್ಕ-ಬಾವ  ಒಪ್ಪಿಗೆ ಸೂಚಿಸಿದ್ದು, ತಂದೆ ಹಾಗೂ ಯುವಕನ ಪೋಷಕರು ಬಿಲ್ ಕುಲ್ ಒಪ್ಪದ ಹಿನ್ನೆಲೆ ಪೊಲೀಸರು ಯುವಕ-ಯುವತಿಯ ಹೇಳಿಕೆಯ ಆಧಾರದ ಮೇಲೆ ಪೊಲೀಸ್ ಠಾಣೆ ಮುಂಭಾಗ ಅರಿಶಿನ ಕುಂಕುಮ ಜೊತೆಗೆ ತಾಳಿಯನ್ನು ಕಟ್ಟಿಸಿ ನಂತರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವೇಣುಗೋಪಾಲ್ ತಂದೆಯ ಸ್ಥಾನದಲ್ಲಿ ನಿಂತು ನವ ವಧುವಿಗೆ ಕಾಲುಂಗರ ತೊಡಿಸಿ ಆಶೀರ್ವಾದ ನೀಡಿ ಎಲ್ಲರ ಗಮನವನ್ನು ಸೆಳೆದಿದ್ದಾರೆ.

ಇನ್ನೂಈ ಜೊಡಿಯ ಆರು ವರ್ಷಗಳ ಪ್ರೀತಿಗೆ ಪೊಲೀಸರಿಂದ ನ್ಯಾಯ ದೊರೆಕಿದ್ದು, ನೂತನ ವೈವಾಹಿಕ ಜೀವನಕ್ಕೆ ಕಾಲಿಟ್ಟ ನವ ಜೋಡಿ ಪೋಷಕರ ವಿರೋಧ ನಡುವೆ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ.

ಪೊಲೀಸರು ಹಾರ ತೂರಾಯಿ ಕಾನೂನು ಬದ್ಧವಾಗಿ ಮದುವೆ ಮಾಡಿಸಿಕೊಟ್ಟಿರುವುದು ಎಲ್ಲರ ಗಮನವನ್ನು ಸೆಳೆದಿದೆ.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

1 hour ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

2 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

8 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

20 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

20 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

21 hours ago