ಅವರಿಬ್ಬರು ಪ್ರೀತಿ ಅಮರ, ಮಧುರ, ಪ್ರೇಮ ಎಂದು 6 ವರ್ಷಗಳು ಸುತ್ತಾಡಿದ್ರು. ಆದ್ರೆ, ಮದುವೆ ಎಂಬ ಕೂಗು ಕೇಳುತ್ತಿದಂತೆ ಪೋಷಕರು ಬಿಲ್ ಕುಲ್ ವಿರೋಧ ವ್ಯಕ್ತಪಡಿಸಿದ್ರು, ಇದೆಕ್ಕೆಲ್ಲಾ ತಲೆಕೆಡಿಸಿಕೊಳ್ಳದ ಅಮರ ಪ್ರೇಮಿಗಳು ಪೊಲೀಸರ ಮೊರೆ ಹೋಗಿ ಸಾಂಪ್ರದಾಯದಂತೆ ಮದುವೆ ಆಗಿ ನೂತನ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ…ಇಷ್ಟಕ್ಕೂ ಈ ಮದುವೆ ನಡೆದಿದ್ರು ಆದ್ರು ಎಲ್ಲಿ ಅಂತೀರಾ… ಈ ಸ್ಟೋರಿ ಓದಿ…..
ಹೀಗೆ ಪೊಲೀಸರೇ ತಾಳಿ ಕಟ್ಟಿಸಿ, ಕಾಲುಂಗರ ತೊಡಿಸಿ ನೂತನ ವಧು ವರರಿಗೆ ಆಶೀರ್ವಾದ ನೀಡುತ್ತಿರುವ ಘಟನೆ ಕಂಡು ಬಂದಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ. ಹೌದು, ಕಳೆದ ಆರು ವರ್ಷಗಳಿಂದ ಶಿಡ್ಲಘಟ್ಟ ತಾಲೂಕಿನ ದೊಡ್ಡದಾಸೇನಹಳ್ಳಿ ಗ್ರಾಮದ ಕಾರ್ತೀಕ್ ಹಾಗೂ ಶಿಡ್ಲಘಟ್ಟ ನಗರದ ಅಂಕಿತಾ ಪ್ರೀತಿ ಪ್ರೇಮ ಎಂದು ಸುತ್ತಾಟ ನಡೆಸಿದ್ರು. ಆದ್ರೆ, ಅಂಕಿತಾಗೆ ಮತ್ತೊಬ್ಬ ಯುವಕನ ಜೊತೆ ಮದುವೆ ಮಾಡಲು ಪೋಷಕರು ತೀರ್ಮಾನಿಸಿದ್ದರು. ಇದೇ ವಿಚಾರವನ್ನು ಪ್ರಿಯಕರ ಕಾರ್ತೀಕ್ ಗೆ ಅಂಕಿತಾ ತಿಳಿಸಿದ್ದಾಳೆ. ಆದ್ರೆ ಕಾರ್ತಿಕ್ ಇನ್ನೂ ಎರಡು ವರ್ಷಗಳ ಕಾಲ ಮದುವೆ ಬೇಡ ಎಂದು ತಿಳಿಸಿದ್ದಾನೆ. ಇದರಿಂದ ಬೇಸರಗೊಂಡ ಅಂಕಿತಾ ಕಳೆದ ದಿನ ಶಿಡ್ಲಘಟ್ಟ ನಗರಠಾಣೆಯ ಮೊರೆ ಹೋಗಿ ದೂರು ದಾಖಲಿಸಿದ್ದಾಳೆ. ಸದ್ಯ ಇಂದು ಶಿಡ್ಲಘಟ್ಟ ಠಾಣೆಯ ಪೊಲೀಸರು ಯುವಕ-ಯುವತಿಯ ಕಡೆ ಪೋಷಕರನ್ನು ಠಾಣೆಗೆ ಕರೆಸಿ ಮದುವೆ ಮಾಡಿಸುವಂತೆ ಒಪ್ಪಿಸಿದ್ದಾರೆ. ಆದರೆ, ಮದುವೆಗೆ ಯುವತಿಯ ತಾಯಿ, ಅಕ್ಕ-ಬಾವ ಒಪ್ಪಿಗೆ ಸೂಚಿಸಿದ್ದು, ತಂದೆ ಹಾಗೂ ಯುವಕನ ಪೋಷಕರು ಬಿಲ್ ಕುಲ್ ಒಪ್ಪದ ಹಿನ್ನೆಲೆ ಪೊಲೀಸರು ಯುವಕ-ಯುವತಿಯ ಹೇಳಿಕೆಯ ಆಧಾರದ ಮೇಲೆ ಪೊಲೀಸ್ ಠಾಣೆ ಮುಂಭಾಗ ಅರಿಶಿನ ಕುಂಕುಮ ಜೊತೆಗೆ ತಾಳಿಯನ್ನು ಕಟ್ಟಿಸಿ ನಂತರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವೇಣುಗೋಪಾಲ್ ತಂದೆಯ ಸ್ಥಾನದಲ್ಲಿ ನಿಂತು ನವ ವಧುವಿಗೆ ಕಾಲುಂಗರ ತೊಡಿಸಿ ಆಶೀರ್ವಾದ ನೀಡಿ ಎಲ್ಲರ ಗಮನವನ್ನು ಸೆಳೆದಿದ್ದಾರೆ.
ಇನ್ನೂಈ ಜೊಡಿಯ ಆರು ವರ್ಷಗಳ ಪ್ರೀತಿಗೆ ಪೊಲೀಸರಿಂದ ನ್ಯಾಯ ದೊರೆಕಿದ್ದು, ನೂತನ ವೈವಾಹಿಕ ಜೀವನಕ್ಕೆ ಕಾಲಿಟ್ಟ ನವ ಜೋಡಿ ಪೋಷಕರ ವಿರೋಧ ನಡುವೆ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ.
ಪೊಲೀಸರು ಹಾರ ತೂರಾಯಿ ಕಾನೂನು ಬದ್ಧವಾಗಿ ಮದುವೆ ಮಾಡಿಸಿಕೊಟ್ಟಿರುವುದು ಎಲ್ಲರ ಗಮನವನ್ನು ಸೆಳೆದಿದೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…