ಅವರಿಬ್ಬರು ಪ್ರೀತಿ ಅಮರ, ಮಧುರ, ಪ್ರೇಮ ಎಂದು 6 ವರ್ಷಗಳು ಸುತ್ತಾಡಿದ್ರು. ಆದ್ರೆ, ಮದುವೆ ಎಂಬ ಕೂಗು ಕೇಳುತ್ತಿದಂತೆ ಪೋಷಕರು ಬಿಲ್ ಕುಲ್ ವಿರೋಧ ವ್ಯಕ್ತಪಡಿಸಿದ್ರು, ಇದೆಕ್ಕೆಲ್ಲಾ ತಲೆಕೆಡಿಸಿಕೊಳ್ಳದ ಅಮರ ಪ್ರೇಮಿಗಳು ಪೊಲೀಸರ ಮೊರೆ ಹೋಗಿ ಸಾಂಪ್ರದಾಯದಂತೆ ಮದುವೆ ಆಗಿ ನೂತನ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ…ಇಷ್ಟಕ್ಕೂ ಈ ಮದುವೆ ನಡೆದಿದ್ರು ಆದ್ರು ಎಲ್ಲಿ ಅಂತೀರಾ… ಈ ಸ್ಟೋರಿ ಓದಿ…..
ಹೀಗೆ ಪೊಲೀಸರೇ ತಾಳಿ ಕಟ್ಟಿಸಿ, ಕಾಲುಂಗರ ತೊಡಿಸಿ ನೂತನ ವಧು ವರರಿಗೆ ಆಶೀರ್ವಾದ ನೀಡುತ್ತಿರುವ ಘಟನೆ ಕಂಡು ಬಂದಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ. ಹೌದು, ಕಳೆದ ಆರು ವರ್ಷಗಳಿಂದ ಶಿಡ್ಲಘಟ್ಟ ತಾಲೂಕಿನ ದೊಡ್ಡದಾಸೇನಹಳ್ಳಿ ಗ್ರಾಮದ ಕಾರ್ತೀಕ್ ಹಾಗೂ ಶಿಡ್ಲಘಟ್ಟ ನಗರದ ಅಂಕಿತಾ ಪ್ರೀತಿ ಪ್ರೇಮ ಎಂದು ಸುತ್ತಾಟ ನಡೆಸಿದ್ರು. ಆದ್ರೆ, ಅಂಕಿತಾಗೆ ಮತ್ತೊಬ್ಬ ಯುವಕನ ಜೊತೆ ಮದುವೆ ಮಾಡಲು ಪೋಷಕರು ತೀರ್ಮಾನಿಸಿದ್ದರು. ಇದೇ ವಿಚಾರವನ್ನು ಪ್ರಿಯಕರ ಕಾರ್ತೀಕ್ ಗೆ ಅಂಕಿತಾ ತಿಳಿಸಿದ್ದಾಳೆ. ಆದ್ರೆ ಕಾರ್ತಿಕ್ ಇನ್ನೂ ಎರಡು ವರ್ಷಗಳ ಕಾಲ ಮದುವೆ ಬೇಡ ಎಂದು ತಿಳಿಸಿದ್ದಾನೆ. ಇದರಿಂದ ಬೇಸರಗೊಂಡ ಅಂಕಿತಾ ಕಳೆದ ದಿನ ಶಿಡ್ಲಘಟ್ಟ ನಗರಠಾಣೆಯ ಮೊರೆ ಹೋಗಿ ದೂರು ದಾಖಲಿಸಿದ್ದಾಳೆ. ಸದ್ಯ ಇಂದು ಶಿಡ್ಲಘಟ್ಟ ಠಾಣೆಯ ಪೊಲೀಸರು ಯುವಕ-ಯುವತಿಯ ಕಡೆ ಪೋಷಕರನ್ನು ಠಾಣೆಗೆ ಕರೆಸಿ ಮದುವೆ ಮಾಡಿಸುವಂತೆ ಒಪ್ಪಿಸಿದ್ದಾರೆ. ಆದರೆ, ಮದುವೆಗೆ ಯುವತಿಯ ತಾಯಿ, ಅಕ್ಕ-ಬಾವ ಒಪ್ಪಿಗೆ ಸೂಚಿಸಿದ್ದು, ತಂದೆ ಹಾಗೂ ಯುವಕನ ಪೋಷಕರು ಬಿಲ್ ಕುಲ್ ಒಪ್ಪದ ಹಿನ್ನೆಲೆ ಪೊಲೀಸರು ಯುವಕ-ಯುವತಿಯ ಹೇಳಿಕೆಯ ಆಧಾರದ ಮೇಲೆ ಪೊಲೀಸ್ ಠಾಣೆ ಮುಂಭಾಗ ಅರಿಶಿನ ಕುಂಕುಮ ಜೊತೆಗೆ ತಾಳಿಯನ್ನು ಕಟ್ಟಿಸಿ ನಂತರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವೇಣುಗೋಪಾಲ್ ತಂದೆಯ ಸ್ಥಾನದಲ್ಲಿ ನಿಂತು ನವ ವಧುವಿಗೆ ಕಾಲುಂಗರ ತೊಡಿಸಿ ಆಶೀರ್ವಾದ ನೀಡಿ ಎಲ್ಲರ ಗಮನವನ್ನು ಸೆಳೆದಿದ್ದಾರೆ.
ಇನ್ನೂಈ ಜೊಡಿಯ ಆರು ವರ್ಷಗಳ ಪ್ರೀತಿಗೆ ಪೊಲೀಸರಿಂದ ನ್ಯಾಯ ದೊರೆಕಿದ್ದು, ನೂತನ ವೈವಾಹಿಕ ಜೀವನಕ್ಕೆ ಕಾಲಿಟ್ಟ ನವ ಜೋಡಿ ಪೋಷಕರ ವಿರೋಧ ನಡುವೆ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ.
ಪೊಲೀಸರು ಹಾರ ತೂರಾಯಿ ಕಾನೂನು ಬದ್ಧವಾಗಿ ಮದುವೆ ಮಾಡಿಸಿಕೊಟ್ಟಿರುವುದು ಎಲ್ಲರ ಗಮನವನ್ನು ಸೆಳೆದಿದೆ.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…