ಪ್ರೀತಿ-ಪ್ರೇಮ-ಮದುವೆ: ಸಂಸಾರ ನಡೆಸಲು ಅಡ್ಡ ಬಂದ ಜಾತಿ- ಗಂಡನಿಂದಲೇ ಯುವತಿ ಕೊಲೆಯಾಗಿರೋ ಶಂಕೆ

ಬಾಗೇಪಲ್ಲಿ: ಪ್ರೀತಿ- ಪ್ರೇಮ ಎಂಬ ಹೆಸರಿನ ನೆಪ ಹೇಳಿಕೊಂಡು ಪ್ರೀತಿಯ ನಾಟಕವಾಡಿ ದಲಿತ ಯುವತಿಯನ್ನ ತನ್ನ ಬುಟ್ಟಿಗೆ ಬೀಳಿಸಿಕೊಂಡು ಮದುವೆಯಾಗಿ ತನ್ನ ಆಸೆಯನ್ನೆಲ್ಲಾ ತೀರಿಸಿಕೊಂಡ ನಂತರ ಅಮಾಯಕ ಯುವತಿಯನ್ನು ನೇಣು ಬಿಗಿದು ಕೊಂದು ಆತ್ಮಹತ್ಯೆ ಎಂದು ಬಿಂಬಿಸುವ ಪ್ರಯತ್ನ ಮೇಲ್ಜಾತಿ ಯುವಕನಿಂದ ನಡೆದಿದೆ.

ಚೇಳೂರು ಪೋಲೀಸ್ ಠಾಣೆಯ ಚಾಕವೇಲು ಗ್ರಾಮದ  ಎರಡನೇ ಬ್ಲಾಕ್ ನಿವಾಸಿ ಮಣಿಕಂಠ ಬಿನ್ ಲೇಟ್ ಶಂಕರಪ್ಪ ಎಂಬುವರು ಒಂದು ವರ್ಷದ ಹಿಂದೆ ಬಾಗೇಪಲ್ಲಿಗೆ ಗಾರ್ಮೆಟ್ಸ್‌ಗೆ ಬರುತ್ತಿದ್ದ ಆಂಧ್ರಪ್ರದೇಶದ ತನಕಲ್ಲು ಮಂಡಲ್ ರಾಚವಾರಪಲ್ಲಿ ಕೊಂಗರಾಳ್ಳ ಕಾಲೋನಿ ನಿವಾಸಿ ಕೊರಚ ಸಮುದಾಯಕ್ಕೆ ಸೇರಿದ ಗಂಗುಲಪ್ಪ ಅವರ ಮಗಳಾದ ಅನಿತಾ (23) ಅವರನ್ನ ಪ್ರೀತಿಯ ನಾಟಕವಾಡಿ ಪೋಷಕರು ಮತ್ತು ಸಂಬಂಧಿಕರ ವಿರೋಧದ ನಡುವೆ ಈ ಪ್ರೇಮಿಗಳಿಬ್ಬರೆ ದೇವಾಲಯದಲ್ಲಿ  ಮದುವೆಯಾಗಿದ್ದರು.

 ಮದುವೆಯಾದ ಸ್ವಲ್ಪ ದಿನಗಳ ಕಾಲ ಚಿಕ್ಕಬಳ್ಳಾಪುರ ಮತ್ತು ಅನಿತಾ ಅವರ ತವರೂರಾದ ಕೊಂಗರಾಳ್ಳ ಗ್ರಾಮದಲ್ಲಿ ವಾಸ ಮಾಡಿ ನಂತರ ಚಾಕವೇಲು ಗ್ರಾಮಕ್ಕೆ ಅನಿತಾ ಅವರನ್ನು ಕರೆ ತಂದಿದ್ದಾನೆ. ಮಣಿಕಂಠ ಮದುವೆಯಾದ ಅನಿತಾ ಪರಿಶಿಷ್ಠ ಜಾತಿಯವಳು ಎಂಬ ಕಾರಣವೊಡ್ಡಿ ನಾವು ಸವರ್ಣಿಯರು ನಮ್ಮ ಮನೆಗೆ ಸೇರಿಸುವುದಿಲ್ಲ ಎಂದು ಮಣಿಕಂಠನ ತಾಯಿ ಸಾವಿತ್ರಮ್ಮ, ಅಕ್ಕ ಕುಸುಮ, ಬಾವನಾದ ರಾಘವೇಂದ್ರ ಗಲಾಟೆ ಮಾಡಿ ಮನೆಯೊಳಗೆ ಸೇರಿಸಿಕೊಳ್ಳದ ಕಾರಣಕ್ಕೆ ಜೋಡಿಗಳು ಕಳೆದ ಆರು ತಿಂಗಳಿಂದ ಆರೋಪಿ ಮಣಿಕಂಠ ಅವರ ಹಳೆಯ ಮನೆಯಲ್ಲಿ ವಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದ ಭೂ- ಮಾಪನ ಇಲಾಖೆಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿರುವ ಮಣಿಕಂಠ ಸಂಬಂಧಿಕರ ಮಾತು ಕೇಳಿ ಅವರ ಜೊತೆಗೂಡಿ ಪ್ರೀತಿಸಿ ಮದುವೆಯಾದ ಅನಿತಾಳಿಗೆ ನಾನಾ ವಿಧದಲ್ಲಿ ಚಿತ್ರ ಹಿಂಸೆ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.

 ಅನಿತಾ ಮಾನಸಿಕ ಹಾಗೂ ದೈಹಿಕ ಹಿಂಸೆಯಿಂದ ನರಕಯಾತನೆ ಅನುಭವಿಸಿತ್ತಿದ್ದರು, ಮಣಿಕಂಠ ಮತ್ತು ಆತನ ಸಂಬಂಧಿಕರು ಏನಾದರೂ ಮಾಡಿ ಅನಿತಾಳನ್ನು ಸಾಯಿಸಬೇಕೆಂದು ಹಲವು ಬಗೆಯಲ್ಲಿ ಹೊಂಚು ಹಾಕುತ್ತಿದ್ದರು ಎಂದು ಆರೋಪಿಸಲಾಗಿದೆ.

ಗುರುವಾರ ಸಂಜೆ ಹಳೇ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆಂದು ಚಾಕವೇಲು ಗ್ರಾಮದ ಸಾರ್ವಜನಿಕರು ಹೇಳಿದ್ದು, ನಾನು ಚಾಕವೇಲುಗೆ ಹೋಗಿ ನೋಡಿದಾಗ ನನ್ನ ಮಗಳು ಅನುಮಾನಸ್ಪದವಾಗಿ ಮೃತಪಟ್ಟಿದ್ದು ತನ್ನ ಮಗಳ ಸಾವಿಗೆ ಈ ನಾಲ್ಕು ಜನರೇ ಕಾರಣ, ಇವರ ವಿರುಧ್ದ ಕಾನೂನಿನ ಕ್ರಮ ಜರುಗಿಸಿ ಎಂದು ಮೃತಳ ತಾಯಿ ಡಿ.ನಾಗಮ್ಮ ಚೇಳೂರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಸದ್ಯ ಭೂ- ಮಾಪನ ಇಲಾಖೆಯ ಗುಮಾಸ್ತ ಮಣಿಕಂಠ ಚಾಕವೇಲು ಗ್ರಾಮದಲ್ಲಿರುವ ಪೊಲೀಸ್ ಚೌಕಿಯೊಳಗೆ ಗುರುವಾರ ರಾತ್ರಿ ಬಂದು ಶರಣಾಗಿದ್ದಾನೆ.

ರಾತ್ರಿ ಹತ್ತಾರು ವಾಹನಗಳಲ್ಲಿ ಮೃತ ಅನಿತಾಳ ಸಂಬಂಧಿಕರು ಹಾಗೂ ಗ್ರಾಮಸ್ಥರು ಸುಮಾರು 50 ರಿಂದ 60 ಜನರಿದ್ದ ಆಂಧ್ರಪ್ರದೇಶದ ತನಕಲ್ಲು ಗ್ರಾಮದಿಂದ ಬಂದು ಚಾಕವೇಲು ಗ್ರಾಮದ ಪೊಲೀಸ್ ಚೌಕಿಗೆ ನುಗ್ಗಿ ತನ್ನ ಮಗಳನ್ನ ಸಾಯಿಸಿರುವ ಇವನನ್ನು ಇಲ್ಲೇ ಸಾಯಿಸುತ್ತೇವೆಂದು ಗಲಾಟೆ ಮಾಡಿ ಚೌಕಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ, ಗಲಾಟೆ ತಿಳಿಗೊಳಿಸಲು ಪೊಲೀಸರು ಹರ ಸಾಹಸ ಮಾಡಿದರಾದರೂ  ಪೊಲೀಸರಿಗೆ ಕೇರ್ ಮಾಡದ ಆಂಧ್ರ ಜನರು ಚೌಕಿಗೆ ನುಗ್ಗಲು ಯತ್ನಿಸಿದರು ಎನ್ನಲಾಗಿದೆ.

 ಇದೇ ಸಮಯಕ್ಕೆ ಚಿಕ್ಕಬಳ್ಳಾಪುರ ಡಿವೈಎಸ್ಪಿ  ಶಿವಕುಮಾರ್ ಅವರು  ದಿಢೀರನೇ ಭೇಟಿ ನೀಡಿ ವಸ್ತು ಸ್ಥಿತಿ ಕಣ್ಣಾರೇ ಕಂಡು ಪರಸ್ಥಿತಿ ತಿಳಿಗೊಳಿಸಿ ನಿಮಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿ ರೊಚ್ಚಿ ಗೆದ್ದ ಜನರನ್ನು ಸಮಾಧಾನ ಮಾಡಿದ್ದಾರೆ.

 ನಂತರ ಆರೋಪಿಯನ್ನು ಪೊಲೀಸ್ ಜೀಪ್‍ನಲ್ಲಿ ಚಿಕ್ಕಬಳ್ಳಾಪುರ ಜೈಲಿಗೆ ಕಳುಹಿಸುತ್ತಿರುವಾಗ ನೂರಾರು ಜನರ ಗುಂಪು ಪೊಲೀಸ್ ಜೀಪಿಗೆ ಅಡ್ಡ ಹೋಗಿ ಮುಗಿಬಿದ್ದ ಜನರು ಪೊಲೀಸ್ ವಾಹನವನ್ನು ಜಖಂಗೊಳಿಸಲು ಪ್ರಯತ್ನಿಸಿದ್ದಾರೆ.

ಪೊಲೀಸರ ಸಮಯ ಪ್ರಜ್ಞೆಯಿಂದ ನಡೆಯಬಹುದಾದ ಅನಾಹುತವನ್ನು ತಪ್ಪಿಸಿ ಆರೋಪಿ ಮಣಿಕಂಠನನ್ನು ಚಿಕ್ಕಬಳ್ಳಾಪುರ ಜೈಲಿಗೆ ಕಳುಹಿಸಿದ್ದಾರೆ.

ಅನಿತಾಳ ತಾಯಿ ನಾಗಮ್ಮ ಅವರು ಸಲ್ಲಿಸಿರುವ ದೂರಿನ‌ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಚೇಳೂರು ಸಬ್‌ ಇನ್ಸ್ ಪೆಕ್ಟರ್ ಜಿ.ಜಿ. ನರಸಿಂಹ ನಾಯುಡು. ತನಿಖೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

10 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

11 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

13 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

15 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

18 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

22 hours ago