ಪ್ರೀತಿ-ಪ್ರೇಮ-ಮದುವೆ: ಸಂಸಾರ ನಡೆಸಲು ಅಡ್ಡ ಬಂದ ಜಾತಿ- ಗಂಡನಿಂದಲೇ ಯುವತಿ ಕೊಲೆಯಾಗಿರೋ ಶಂಕೆ

ಬಾಗೇಪಲ್ಲಿ: ಪ್ರೀತಿ- ಪ್ರೇಮ ಎಂಬ ಹೆಸರಿನ ನೆಪ ಹೇಳಿಕೊಂಡು ಪ್ರೀತಿಯ ನಾಟಕವಾಡಿ ದಲಿತ ಯುವತಿಯನ್ನ ತನ್ನ ಬುಟ್ಟಿಗೆ ಬೀಳಿಸಿಕೊಂಡು ಮದುವೆಯಾಗಿ ತನ್ನ ಆಸೆಯನ್ನೆಲ್ಲಾ ತೀರಿಸಿಕೊಂಡ ನಂತರ ಅಮಾಯಕ ಯುವತಿಯನ್ನು ನೇಣು ಬಿಗಿದು ಕೊಂದು ಆತ್ಮಹತ್ಯೆ ಎಂದು ಬಿಂಬಿಸುವ ಪ್ರಯತ್ನ ಮೇಲ್ಜಾತಿ ಯುವಕನಿಂದ ನಡೆದಿದೆ.

ಚೇಳೂರು ಪೋಲೀಸ್ ಠಾಣೆಯ ಚಾಕವೇಲು ಗ್ರಾಮದ  ಎರಡನೇ ಬ್ಲಾಕ್ ನಿವಾಸಿ ಮಣಿಕಂಠ ಬಿನ್ ಲೇಟ್ ಶಂಕರಪ್ಪ ಎಂಬುವರು ಒಂದು ವರ್ಷದ ಹಿಂದೆ ಬಾಗೇಪಲ್ಲಿಗೆ ಗಾರ್ಮೆಟ್ಸ್‌ಗೆ ಬರುತ್ತಿದ್ದ ಆಂಧ್ರಪ್ರದೇಶದ ತನಕಲ್ಲು ಮಂಡಲ್ ರಾಚವಾರಪಲ್ಲಿ ಕೊಂಗರಾಳ್ಳ ಕಾಲೋನಿ ನಿವಾಸಿ ಕೊರಚ ಸಮುದಾಯಕ್ಕೆ ಸೇರಿದ ಗಂಗುಲಪ್ಪ ಅವರ ಮಗಳಾದ ಅನಿತಾ (23) ಅವರನ್ನ ಪ್ರೀತಿಯ ನಾಟಕವಾಡಿ ಪೋಷಕರು ಮತ್ತು ಸಂಬಂಧಿಕರ ವಿರೋಧದ ನಡುವೆ ಈ ಪ್ರೇಮಿಗಳಿಬ್ಬರೆ ದೇವಾಲಯದಲ್ಲಿ  ಮದುವೆಯಾಗಿದ್ದರು.

 ಮದುವೆಯಾದ ಸ್ವಲ್ಪ ದಿನಗಳ ಕಾಲ ಚಿಕ್ಕಬಳ್ಳಾಪುರ ಮತ್ತು ಅನಿತಾ ಅವರ ತವರೂರಾದ ಕೊಂಗರಾಳ್ಳ ಗ್ರಾಮದಲ್ಲಿ ವಾಸ ಮಾಡಿ ನಂತರ ಚಾಕವೇಲು ಗ್ರಾಮಕ್ಕೆ ಅನಿತಾ ಅವರನ್ನು ಕರೆ ತಂದಿದ್ದಾನೆ. ಮಣಿಕಂಠ ಮದುವೆಯಾದ ಅನಿತಾ ಪರಿಶಿಷ್ಠ ಜಾತಿಯವಳು ಎಂಬ ಕಾರಣವೊಡ್ಡಿ ನಾವು ಸವರ್ಣಿಯರು ನಮ್ಮ ಮನೆಗೆ ಸೇರಿಸುವುದಿಲ್ಲ ಎಂದು ಮಣಿಕಂಠನ ತಾಯಿ ಸಾವಿತ್ರಮ್ಮ, ಅಕ್ಕ ಕುಸುಮ, ಬಾವನಾದ ರಾಘವೇಂದ್ರ ಗಲಾಟೆ ಮಾಡಿ ಮನೆಯೊಳಗೆ ಸೇರಿಸಿಕೊಳ್ಳದ ಕಾರಣಕ್ಕೆ ಜೋಡಿಗಳು ಕಳೆದ ಆರು ತಿಂಗಳಿಂದ ಆರೋಪಿ ಮಣಿಕಂಠ ಅವರ ಹಳೆಯ ಮನೆಯಲ್ಲಿ ವಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದ ಭೂ- ಮಾಪನ ಇಲಾಖೆಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿರುವ ಮಣಿಕಂಠ ಸಂಬಂಧಿಕರ ಮಾತು ಕೇಳಿ ಅವರ ಜೊತೆಗೂಡಿ ಪ್ರೀತಿಸಿ ಮದುವೆಯಾದ ಅನಿತಾಳಿಗೆ ನಾನಾ ವಿಧದಲ್ಲಿ ಚಿತ್ರ ಹಿಂಸೆ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.

 ಅನಿತಾ ಮಾನಸಿಕ ಹಾಗೂ ದೈಹಿಕ ಹಿಂಸೆಯಿಂದ ನರಕಯಾತನೆ ಅನುಭವಿಸಿತ್ತಿದ್ದರು, ಮಣಿಕಂಠ ಮತ್ತು ಆತನ ಸಂಬಂಧಿಕರು ಏನಾದರೂ ಮಾಡಿ ಅನಿತಾಳನ್ನು ಸಾಯಿಸಬೇಕೆಂದು ಹಲವು ಬಗೆಯಲ್ಲಿ ಹೊಂಚು ಹಾಕುತ್ತಿದ್ದರು ಎಂದು ಆರೋಪಿಸಲಾಗಿದೆ.

ಗುರುವಾರ ಸಂಜೆ ಹಳೇ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆಂದು ಚಾಕವೇಲು ಗ್ರಾಮದ ಸಾರ್ವಜನಿಕರು ಹೇಳಿದ್ದು, ನಾನು ಚಾಕವೇಲುಗೆ ಹೋಗಿ ನೋಡಿದಾಗ ನನ್ನ ಮಗಳು ಅನುಮಾನಸ್ಪದವಾಗಿ ಮೃತಪಟ್ಟಿದ್ದು ತನ್ನ ಮಗಳ ಸಾವಿಗೆ ಈ ನಾಲ್ಕು ಜನರೇ ಕಾರಣ, ಇವರ ವಿರುಧ್ದ ಕಾನೂನಿನ ಕ್ರಮ ಜರುಗಿಸಿ ಎಂದು ಮೃತಳ ತಾಯಿ ಡಿ.ನಾಗಮ್ಮ ಚೇಳೂರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಸದ್ಯ ಭೂ- ಮಾಪನ ಇಲಾಖೆಯ ಗುಮಾಸ್ತ ಮಣಿಕಂಠ ಚಾಕವೇಲು ಗ್ರಾಮದಲ್ಲಿರುವ ಪೊಲೀಸ್ ಚೌಕಿಯೊಳಗೆ ಗುರುವಾರ ರಾತ್ರಿ ಬಂದು ಶರಣಾಗಿದ್ದಾನೆ.

ರಾತ್ರಿ ಹತ್ತಾರು ವಾಹನಗಳಲ್ಲಿ ಮೃತ ಅನಿತಾಳ ಸಂಬಂಧಿಕರು ಹಾಗೂ ಗ್ರಾಮಸ್ಥರು ಸುಮಾರು 50 ರಿಂದ 60 ಜನರಿದ್ದ ಆಂಧ್ರಪ್ರದೇಶದ ತನಕಲ್ಲು ಗ್ರಾಮದಿಂದ ಬಂದು ಚಾಕವೇಲು ಗ್ರಾಮದ ಪೊಲೀಸ್ ಚೌಕಿಗೆ ನುಗ್ಗಿ ತನ್ನ ಮಗಳನ್ನ ಸಾಯಿಸಿರುವ ಇವನನ್ನು ಇಲ್ಲೇ ಸಾಯಿಸುತ್ತೇವೆಂದು ಗಲಾಟೆ ಮಾಡಿ ಚೌಕಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ, ಗಲಾಟೆ ತಿಳಿಗೊಳಿಸಲು ಪೊಲೀಸರು ಹರ ಸಾಹಸ ಮಾಡಿದರಾದರೂ  ಪೊಲೀಸರಿಗೆ ಕೇರ್ ಮಾಡದ ಆಂಧ್ರ ಜನರು ಚೌಕಿಗೆ ನುಗ್ಗಲು ಯತ್ನಿಸಿದರು ಎನ್ನಲಾಗಿದೆ.

 ಇದೇ ಸಮಯಕ್ಕೆ ಚಿಕ್ಕಬಳ್ಳಾಪುರ ಡಿವೈಎಸ್ಪಿ  ಶಿವಕುಮಾರ್ ಅವರು  ದಿಢೀರನೇ ಭೇಟಿ ನೀಡಿ ವಸ್ತು ಸ್ಥಿತಿ ಕಣ್ಣಾರೇ ಕಂಡು ಪರಸ್ಥಿತಿ ತಿಳಿಗೊಳಿಸಿ ನಿಮಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿ ರೊಚ್ಚಿ ಗೆದ್ದ ಜನರನ್ನು ಸಮಾಧಾನ ಮಾಡಿದ್ದಾರೆ.

 ನಂತರ ಆರೋಪಿಯನ್ನು ಪೊಲೀಸ್ ಜೀಪ್‍ನಲ್ಲಿ ಚಿಕ್ಕಬಳ್ಳಾಪುರ ಜೈಲಿಗೆ ಕಳುಹಿಸುತ್ತಿರುವಾಗ ನೂರಾರು ಜನರ ಗುಂಪು ಪೊಲೀಸ್ ಜೀಪಿಗೆ ಅಡ್ಡ ಹೋಗಿ ಮುಗಿಬಿದ್ದ ಜನರು ಪೊಲೀಸ್ ವಾಹನವನ್ನು ಜಖಂಗೊಳಿಸಲು ಪ್ರಯತ್ನಿಸಿದ್ದಾರೆ.

ಪೊಲೀಸರ ಸಮಯ ಪ್ರಜ್ಞೆಯಿಂದ ನಡೆಯಬಹುದಾದ ಅನಾಹುತವನ್ನು ತಪ್ಪಿಸಿ ಆರೋಪಿ ಮಣಿಕಂಠನನ್ನು ಚಿಕ್ಕಬಳ್ಳಾಪುರ ಜೈಲಿಗೆ ಕಳುಹಿಸಿದ್ದಾರೆ.

ಅನಿತಾಳ ತಾಯಿ ನಾಗಮ್ಮ ಅವರು ಸಲ್ಲಿಸಿರುವ ದೂರಿನ‌ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಚೇಳೂರು ಸಬ್‌ ಇನ್ಸ್ ಪೆಕ್ಟರ್ ಜಿ.ಜಿ. ನರಸಿಂಹ ನಾಯುಡು. ತನಿಖೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

13 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

20 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

23 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

23 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago