ಪ್ರೀತಿ-ಪ್ರೇಮ-ಮದುವೆ: ಸಂಸಾರ ನಡೆಸಲು ಅಡ್ಡ ಬಂದ ಜಾತಿ- ಗಂಡನಿಂದಲೇ ಯುವತಿ ಕೊಲೆಯಾಗಿರೋ ಶಂಕೆ

ಬಾಗೇಪಲ್ಲಿ: ಪ್ರೀತಿ- ಪ್ರೇಮ ಎಂಬ ಹೆಸರಿನ ನೆಪ ಹೇಳಿಕೊಂಡು ಪ್ರೀತಿಯ ನಾಟಕವಾಡಿ ದಲಿತ ಯುವತಿಯನ್ನ ತನ್ನ ಬುಟ್ಟಿಗೆ ಬೀಳಿಸಿಕೊಂಡು ಮದುವೆಯಾಗಿ ತನ್ನ ಆಸೆಯನ್ನೆಲ್ಲಾ ತೀರಿಸಿಕೊಂಡ ನಂತರ ಅಮಾಯಕ ಯುವತಿಯನ್ನು ನೇಣು ಬಿಗಿದು ಕೊಂದು ಆತ್ಮಹತ್ಯೆ ಎಂದು ಬಿಂಬಿಸುವ ಪ್ರಯತ್ನ ಮೇಲ್ಜಾತಿ ಯುವಕನಿಂದ ನಡೆದಿದೆ.

ಚೇಳೂರು ಪೋಲೀಸ್ ಠಾಣೆಯ ಚಾಕವೇಲು ಗ್ರಾಮದ  ಎರಡನೇ ಬ್ಲಾಕ್ ನಿವಾಸಿ ಮಣಿಕಂಠ ಬಿನ್ ಲೇಟ್ ಶಂಕರಪ್ಪ ಎಂಬುವರು ಒಂದು ವರ್ಷದ ಹಿಂದೆ ಬಾಗೇಪಲ್ಲಿಗೆ ಗಾರ್ಮೆಟ್ಸ್‌ಗೆ ಬರುತ್ತಿದ್ದ ಆಂಧ್ರಪ್ರದೇಶದ ತನಕಲ್ಲು ಮಂಡಲ್ ರಾಚವಾರಪಲ್ಲಿ ಕೊಂಗರಾಳ್ಳ ಕಾಲೋನಿ ನಿವಾಸಿ ಕೊರಚ ಸಮುದಾಯಕ್ಕೆ ಸೇರಿದ ಗಂಗುಲಪ್ಪ ಅವರ ಮಗಳಾದ ಅನಿತಾ (23) ಅವರನ್ನ ಪ್ರೀತಿಯ ನಾಟಕವಾಡಿ ಪೋಷಕರು ಮತ್ತು ಸಂಬಂಧಿಕರ ವಿರೋಧದ ನಡುವೆ ಈ ಪ್ರೇಮಿಗಳಿಬ್ಬರೆ ದೇವಾಲಯದಲ್ಲಿ  ಮದುವೆಯಾಗಿದ್ದರು.

 ಮದುವೆಯಾದ ಸ್ವಲ್ಪ ದಿನಗಳ ಕಾಲ ಚಿಕ್ಕಬಳ್ಳಾಪುರ ಮತ್ತು ಅನಿತಾ ಅವರ ತವರೂರಾದ ಕೊಂಗರಾಳ್ಳ ಗ್ರಾಮದಲ್ಲಿ ವಾಸ ಮಾಡಿ ನಂತರ ಚಾಕವೇಲು ಗ್ರಾಮಕ್ಕೆ ಅನಿತಾ ಅವರನ್ನು ಕರೆ ತಂದಿದ್ದಾನೆ. ಮಣಿಕಂಠ ಮದುವೆಯಾದ ಅನಿತಾ ಪರಿಶಿಷ್ಠ ಜಾತಿಯವಳು ಎಂಬ ಕಾರಣವೊಡ್ಡಿ ನಾವು ಸವರ್ಣಿಯರು ನಮ್ಮ ಮನೆಗೆ ಸೇರಿಸುವುದಿಲ್ಲ ಎಂದು ಮಣಿಕಂಠನ ತಾಯಿ ಸಾವಿತ್ರಮ್ಮ, ಅಕ್ಕ ಕುಸುಮ, ಬಾವನಾದ ರಾಘವೇಂದ್ರ ಗಲಾಟೆ ಮಾಡಿ ಮನೆಯೊಳಗೆ ಸೇರಿಸಿಕೊಳ್ಳದ ಕಾರಣಕ್ಕೆ ಜೋಡಿಗಳು ಕಳೆದ ಆರು ತಿಂಗಳಿಂದ ಆರೋಪಿ ಮಣಿಕಂಠ ಅವರ ಹಳೆಯ ಮನೆಯಲ್ಲಿ ವಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದ ಭೂ- ಮಾಪನ ಇಲಾಖೆಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿರುವ ಮಣಿಕಂಠ ಸಂಬಂಧಿಕರ ಮಾತು ಕೇಳಿ ಅವರ ಜೊತೆಗೂಡಿ ಪ್ರೀತಿಸಿ ಮದುವೆಯಾದ ಅನಿತಾಳಿಗೆ ನಾನಾ ವಿಧದಲ್ಲಿ ಚಿತ್ರ ಹಿಂಸೆ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.

 ಅನಿತಾ ಮಾನಸಿಕ ಹಾಗೂ ದೈಹಿಕ ಹಿಂಸೆಯಿಂದ ನರಕಯಾತನೆ ಅನುಭವಿಸಿತ್ತಿದ್ದರು, ಮಣಿಕಂಠ ಮತ್ತು ಆತನ ಸಂಬಂಧಿಕರು ಏನಾದರೂ ಮಾಡಿ ಅನಿತಾಳನ್ನು ಸಾಯಿಸಬೇಕೆಂದು ಹಲವು ಬಗೆಯಲ್ಲಿ ಹೊಂಚು ಹಾಕುತ್ತಿದ್ದರು ಎಂದು ಆರೋಪಿಸಲಾಗಿದೆ.

ಗುರುವಾರ ಸಂಜೆ ಹಳೇ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆಂದು ಚಾಕವೇಲು ಗ್ರಾಮದ ಸಾರ್ವಜನಿಕರು ಹೇಳಿದ್ದು, ನಾನು ಚಾಕವೇಲುಗೆ ಹೋಗಿ ನೋಡಿದಾಗ ನನ್ನ ಮಗಳು ಅನುಮಾನಸ್ಪದವಾಗಿ ಮೃತಪಟ್ಟಿದ್ದು ತನ್ನ ಮಗಳ ಸಾವಿಗೆ ಈ ನಾಲ್ಕು ಜನರೇ ಕಾರಣ, ಇವರ ವಿರುಧ್ದ ಕಾನೂನಿನ ಕ್ರಮ ಜರುಗಿಸಿ ಎಂದು ಮೃತಳ ತಾಯಿ ಡಿ.ನಾಗಮ್ಮ ಚೇಳೂರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಸದ್ಯ ಭೂ- ಮಾಪನ ಇಲಾಖೆಯ ಗುಮಾಸ್ತ ಮಣಿಕಂಠ ಚಾಕವೇಲು ಗ್ರಾಮದಲ್ಲಿರುವ ಪೊಲೀಸ್ ಚೌಕಿಯೊಳಗೆ ಗುರುವಾರ ರಾತ್ರಿ ಬಂದು ಶರಣಾಗಿದ್ದಾನೆ.

ರಾತ್ರಿ ಹತ್ತಾರು ವಾಹನಗಳಲ್ಲಿ ಮೃತ ಅನಿತಾಳ ಸಂಬಂಧಿಕರು ಹಾಗೂ ಗ್ರಾಮಸ್ಥರು ಸುಮಾರು 50 ರಿಂದ 60 ಜನರಿದ್ದ ಆಂಧ್ರಪ್ರದೇಶದ ತನಕಲ್ಲು ಗ್ರಾಮದಿಂದ ಬಂದು ಚಾಕವೇಲು ಗ್ರಾಮದ ಪೊಲೀಸ್ ಚೌಕಿಗೆ ನುಗ್ಗಿ ತನ್ನ ಮಗಳನ್ನ ಸಾಯಿಸಿರುವ ಇವನನ್ನು ಇಲ್ಲೇ ಸಾಯಿಸುತ್ತೇವೆಂದು ಗಲಾಟೆ ಮಾಡಿ ಚೌಕಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ, ಗಲಾಟೆ ತಿಳಿಗೊಳಿಸಲು ಪೊಲೀಸರು ಹರ ಸಾಹಸ ಮಾಡಿದರಾದರೂ  ಪೊಲೀಸರಿಗೆ ಕೇರ್ ಮಾಡದ ಆಂಧ್ರ ಜನರು ಚೌಕಿಗೆ ನುಗ್ಗಲು ಯತ್ನಿಸಿದರು ಎನ್ನಲಾಗಿದೆ.

 ಇದೇ ಸಮಯಕ್ಕೆ ಚಿಕ್ಕಬಳ್ಳಾಪುರ ಡಿವೈಎಸ್ಪಿ  ಶಿವಕುಮಾರ್ ಅವರು  ದಿಢೀರನೇ ಭೇಟಿ ನೀಡಿ ವಸ್ತು ಸ್ಥಿತಿ ಕಣ್ಣಾರೇ ಕಂಡು ಪರಸ್ಥಿತಿ ತಿಳಿಗೊಳಿಸಿ ನಿಮಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿ ರೊಚ್ಚಿ ಗೆದ್ದ ಜನರನ್ನು ಸಮಾಧಾನ ಮಾಡಿದ್ದಾರೆ.

 ನಂತರ ಆರೋಪಿಯನ್ನು ಪೊಲೀಸ್ ಜೀಪ್‍ನಲ್ಲಿ ಚಿಕ್ಕಬಳ್ಳಾಪುರ ಜೈಲಿಗೆ ಕಳುಹಿಸುತ್ತಿರುವಾಗ ನೂರಾರು ಜನರ ಗುಂಪು ಪೊಲೀಸ್ ಜೀಪಿಗೆ ಅಡ್ಡ ಹೋಗಿ ಮುಗಿಬಿದ್ದ ಜನರು ಪೊಲೀಸ್ ವಾಹನವನ್ನು ಜಖಂಗೊಳಿಸಲು ಪ್ರಯತ್ನಿಸಿದ್ದಾರೆ.

ಪೊಲೀಸರ ಸಮಯ ಪ್ರಜ್ಞೆಯಿಂದ ನಡೆಯಬಹುದಾದ ಅನಾಹುತವನ್ನು ತಪ್ಪಿಸಿ ಆರೋಪಿ ಮಣಿಕಂಠನನ್ನು ಚಿಕ್ಕಬಳ್ಳಾಪುರ ಜೈಲಿಗೆ ಕಳುಹಿಸಿದ್ದಾರೆ.

ಅನಿತಾಳ ತಾಯಿ ನಾಗಮ್ಮ ಅವರು ಸಲ್ಲಿಸಿರುವ ದೂರಿನ‌ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಚೇಳೂರು ಸಬ್‌ ಇನ್ಸ್ ಪೆಕ್ಟರ್ ಜಿ.ಜಿ. ನರಸಿಂಹ ನಾಯುಡು. ತನಿಖೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

7 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

8 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

23 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago