ಪ್ರೀತಿಸಿದ ಹುಡುಗನೊಂದಿಗೆ ಮನೆಬಿಟ್ಟು ಓಡಿ ಹೋದ ಕೋಪಕ್ಕೆ ಮಗಳ ತಿಥಿ ಮಾಡಿದ ಅಪ್ಪ. ನಮ್ಮ ಪಾಲಿಗೆ ಮಗಳು ಇನ್ನಿಲ್ಲ ಎಂದು ಇಲ್ಲೊಬ್ಬ ನೊಂದ ತಂದೆ ಊರಿಗೆ ಊಟ ಹಾಕಿಸಿದ್ದಾನೆ.
19 ವರ್ಷದ ಹುಡುಗಿ, 29 ವರ್ಷದ ಹುಡುಗ ಪರಸ್ಪರ ಪ್ರೀತಿಸಿದ್ದರು, ಮದುವೆಯಾಗಲು ಮನೆಯಿಂದ ಪರಾರಿಯಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದಲ್ಲಿ ತಂದೆ ಹೆತ್ತ ಮಗಳಿಗೆ ಶ್ರಾದ್ಧ ಮಾಡಿ ಕರುಳ ಬಳ್ಳಿ ಸಂಬಂಧ ಕತ್ತರಿಸಿಕೊಂಡಿದ್ದಾನೆ.
ಸುಶ್ಮಿತಾ ಶಿವಗೌಡ ಪಾಟೀಲ ಪ್ರೀತಿಸಿ ಓಡಿಹೋದ ಯುವತಿ. ಅದೇ ಗ್ರಾಮದ ವಿಠ್ಠಲ ಬಸ್ತವಾಡೆ ಎಂಬ ಯುವಕನೊಂದಿಗೆ ಪರಾರಿಯಾಗಿದ್ದ ಸುಶ್ಮಿತಾ.
ವಿಠ್ಠಲ ಬಸ್ತವಾಡ ತಹಶೀಲ್ದಾರ್ ಕಚೇರಿಯಲ್ಲಿ ಗ್ರಾಮ ಸೇವಕನಾಗಿ ಕೆಲಸ ಮಾಡುತ್ತಿದ್ದ. ಸುಶ್ಮಿತಾ ತಂದೆಯ ನಾಲ್ಕು ಜನ ಹೆಣ್ಣುಮಕ್ಕಳು ಪೈಕಿ ಸುಶ್ಮಿತಾ ಕೊನೆಯವಳು.
ಮನೆತನದ ಸಂಸ್ಕಾರ ಮುರಿದು ಓಡಿಹೋಗಿದ್ದರಿಂದ ಮನನೊಂದಿರೋ ತಂದೆ ಶಿವಗೌಡ ಪಾಟೀಲ. ಮೊದಲಿಗೆ ರಾಯಬಾಗ ಪೊಲೀಸ್ ಸ್ಟೇಷನ್ನಲ್ಲಿ ಮಿಸ್ಸಿಂಗ್ ಕಂಪ್ಲೆಂಟ್ ಕೊಟ್ಟಿದ್ದ ಶಿವಗೌಡ. ಬಂಧು-ಬಳಗ ಸೇರಿದಂತೆ ಸಂಬಂಧಿಕರನ್ನು ಕರೆಯಿಸಿ ಭರ್ಜರಿ ಭೋಜನ ಹಾಕಿಸಿದ್ದಾನೆ. ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…