ಪ್ರೀತಿಸಿದ ಹುಡುಗನೊಂದಿಗೆ ಮನೆಬಿಟ್ಟು ಓಡಿ ಹೋದ ಕೋಪಕ್ಕೆ ಮಗಳ ತಿಥಿ ಮಾಡಿದ ಅಪ್ಪ. ನಮ್ಮ ಪಾಲಿಗೆ ಮಗಳು ಇನ್ನಿಲ್ಲ ಎಂದು ಇಲ್ಲೊಬ್ಬ ನೊಂದ ತಂದೆ ಊರಿಗೆ ಊಟ ಹಾಕಿಸಿದ್ದಾನೆ.
19 ವರ್ಷದ ಹುಡುಗಿ, 29 ವರ್ಷದ ಹುಡುಗ ಪರಸ್ಪರ ಪ್ರೀತಿಸಿದ್ದರು, ಮದುವೆಯಾಗಲು ಮನೆಯಿಂದ ಪರಾರಿಯಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದಲ್ಲಿ ತಂದೆ ಹೆತ್ತ ಮಗಳಿಗೆ ಶ್ರಾದ್ಧ ಮಾಡಿ ಕರುಳ ಬಳ್ಳಿ ಸಂಬಂಧ ಕತ್ತರಿಸಿಕೊಂಡಿದ್ದಾನೆ.
ಸುಶ್ಮಿತಾ ಶಿವಗೌಡ ಪಾಟೀಲ ಪ್ರೀತಿಸಿ ಓಡಿಹೋದ ಯುವತಿ. ಅದೇ ಗ್ರಾಮದ ವಿಠ್ಠಲ ಬಸ್ತವಾಡೆ ಎಂಬ ಯುವಕನೊಂದಿಗೆ ಪರಾರಿಯಾಗಿದ್ದ ಸುಶ್ಮಿತಾ.
ವಿಠ್ಠಲ ಬಸ್ತವಾಡ ತಹಶೀಲ್ದಾರ್ ಕಚೇರಿಯಲ್ಲಿ ಗ್ರಾಮ ಸೇವಕನಾಗಿ ಕೆಲಸ ಮಾಡುತ್ತಿದ್ದ. ಸುಶ್ಮಿತಾ ತಂದೆಯ ನಾಲ್ಕು ಜನ ಹೆಣ್ಣುಮಕ್ಕಳು ಪೈಕಿ ಸುಶ್ಮಿತಾ ಕೊನೆಯವಳು.
ಮನೆತನದ ಸಂಸ್ಕಾರ ಮುರಿದು ಓಡಿಹೋಗಿದ್ದರಿಂದ ಮನನೊಂದಿರೋ ತಂದೆ ಶಿವಗೌಡ ಪಾಟೀಲ. ಮೊದಲಿಗೆ ರಾಯಬಾಗ ಪೊಲೀಸ್ ಸ್ಟೇಷನ್ನಲ್ಲಿ ಮಿಸ್ಸಿಂಗ್ ಕಂಪ್ಲೆಂಟ್ ಕೊಟ್ಟಿದ್ದ ಶಿವಗೌಡ. ಬಂಧು-ಬಳಗ ಸೇರಿದಂತೆ ಸಂಬಂಧಿಕರನ್ನು ಕರೆಯಿಸಿ ಭರ್ಜರಿ ಭೋಜನ ಹಾಕಿಸಿದ್ದಾನೆ. ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…