ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ ಮಧ್ಯರಾತ್ರಿ ಎರಡು ಬೃಹತ್ ಗಾತ್ರದ ಕರಡಿಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ರೆಸಾರ್ಟ್‌ನ ಗಾರ್ಡನ್ ಹಾಗೂ ಬ್ಯಾಡ್ಮಿಂಟನ್ ಕೋರ್ಟ್ ಪ್ರದೇಶದಲ್ಲಿ ಕರಡಿಗಳು ಓಡಾಡಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ದೃಶ್ಯಗಳನ್ನು ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಳುಹಿಸಿ, ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ನಂದಿಬೆಟ್ಟದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಪ್ರೆಸ್ಟೀಜ್ ಗಾಲ್ಫ್‌ಶೈರ್‌ಗೆ ಆಹಾರ ಅರಸಿ ಕರಡಿಗಳು ಬಂದಿರಬಹುದೆಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

 ಸಿಸಿಟಿವಿ ದೃಶ್ಯಗಳಲ್ಲಿ ಎರಡು ಕರಡಿಗಳು ಕೆಲಕಾಲ ಗಾರ್ಡನ್ ಹಾಗೂ ಬ್ಯಾಡ್ಮಿಂಟನ್ ಕೋರ್ಟ್ ಸುತ್ತಮುತ್ತ ಓಡಾಡಿ ಬಳಿಕ ಅಲ್ಲಿಂದ ತೆರಳಿರುವುದು ಕಂಡುಬಂದಿದೆ.

ಇತ್ತೀಚಿನ ದಿನಗಳಲ್ಲಿ ನಂದಿಬೆಟ್ಟ ಸುತ್ತಮುತ್ತ ವನ್ಯಜೀವಿಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ವಿಶೇಷವಾಗಿ ರಾತ್ರಿ ವೇಳೆಯಲ್ಲಿ ಕರಡಿಗಳು ಗ್ರಾಮಗಳತ್ತ ಬಂದರೆ ಜನರ ಮೇಲೆ ದಾಳಿ ಮಾಡುವ ಅಪಾಯ ಇರುವುದರಿಂದ ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕೆಂದು ಅರಣ್ಯ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.

ಅರಣ್ಯ ಇಲಾಖೆ ವನ್ಯಜೀವಿಗಳ ಚಲನವಲನದ ಮೇಲೆ ನಿರಂತರ ನಿಗಾ ವಹಿಸಿ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಜನರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

47 minutes ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

56 minutes ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

9 hours ago

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾವು: ಹಲವರಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…

12 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

1 day ago

ಬೆಂ. ಗ್ರಾ ಜಿಲ್ಲೆಯಲ್ಲಿ ಶೇ.87.44ರಷ್ಟು ಎನ್ಯುಮರೇಷನ್ ಫಾರ್ಮ್ ವಿತರಣೆ- ಡಿಸಿ ಡಾ.ಕೆ ಎನ್ ಅನುರಾಧ

ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…

1 day ago