ಪ್ರೇಮಿಗಳ ದಿನವೇ ನಂದಿಬೆಟ್ಟದ ಟಿಪ್ಪು ಡ್ರಾಪ್‌ನಿಂದ ಬಿದ್ದು ಯುವಕ ಆತ್ಮಹತ್ಯೆ

ಪ್ರೇಮಿಗಳ ದಿನವೇ ನಂದಿಬೆಟ್ಟದ ಟಿಪ್ಪು ಡ್ರಾಪ್‌ನಿಂದ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಂಡಿರೋ ಪ್ರಕರಣ ಬೆಳಕಿಗೆ ಬಂದಿದೆ.

ಮೂರು ದಿನಗಳಿಂದ ಅನಾಥವಾಗಿದ್ದ ಬೈಕ್ ಹಿಂದೆ ಬಿದ್ದಿದ್ದ ಪೊಲೀಸರಿಗೆ ಯುವಕನ ಆತ್ಮಹತ್ಯೆ ಪ್ರಕರಣ ತಿಳಿದಿದೆ. ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಬಂದು ಅರುಣ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಮೃತದೇಹ ಸಹ ಪತ್ತೆಯಾಗಿದೆ.

ಕಳೆದ ಶನಿವಾರ ತನ್ನ ಸ್ನೇಹಿತನ ಬೈಕ್‌ನಲ್ಲಿ ನಂದಿಬೆಟ್ಟಕ್ಕೆ ಬಂದ ಅರುಣ್, ಪಾರ್ಕಿಂಗ್ ಪ್ಲಾಟ್‌ನಲ್ಲಿ ಬೈಕ್ ನಿಲ್ಲಿಸಿ ನಂದಿಬೆಟ್ಟದ ಮೇಲ್ಭಾಗಕ್ಕೆ ಹೋಗಿದ್ದಾನೆ. ಆದರೆ ಶನಿವಾರ ಬೆಟ್ಟದ ಮೇಲೆ ಹೋದವನು ಮರಳಿ ವಾಪಸ್ ಬಂದಿಲ್ಲ. ಶನಿವಾರ, ಭಾನುವಾರ, ಸೋಮವಾರ ಕಾದರೂ ಅರುಣ್ ವಾಪಸ್ ಬಾರದ ಹಿನ್ನೆಲೆ ಅನುಮಾನಗೊಂಡ ಹೆಲ್ಮೆಟ್ ಲಾಕ್ ರೂಂ ಮಾಲೀಕರು, ಪೊಲೀಸರಿಗೆ ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದಾಗ ಅರುಣ್ ಹೋಗಿರೋ ವೀಡಿಯೋ ಸಿಕ್ಕಿದೆ. ಆದರೆ ವಾಪಾಸ್ ಬಂದಿರೋ ವೀಡಿಯೋ ಸಿಕ್ಕಿಲ್ಲ. ಹೀಗಾಗಿ ಬೆಟ್ಟವೆಲ್ಲಾ ತಡಿಕಾಡಿದಾಗ ಟಿಪ್ಪು ಡ್ರಾಪ್‌ನ ಜಾಗದಲ್ಲಿ ಅರುಣ್ ಬ್ಯಾಗ್ ಪತ್ತೆಯಾಗಿದೆ.

ಬ್ಯಾಗ್‌ನಲ್ಲಿ ಡೆತ್‌ನೋಟ್ ಸಹ ಪತ್ತೆಯಾಗಿದ್ದು, ಅದರಲ್ಲಿ ಸಾವಿಗೆ ನಿಖರ ಕಾರಣ ಬರೆದಿಲ್ಲ. “ತಾನು ಸಂತೋಷವಾಗಿ ಸಾಯುತ್ತಿದ್ದೇನೆ. ರಾಜಕೀಯ ವ್ಯವಸ್ಥೆ ಸರಿ ಇಲ್ಲ. ನಟ ಉಪೇಂದ್ರ ಅವರ ಪ್ರಜಾಕೀಯ ಪಕ್ಷದ ಸಿದ್ದಾಂತಗಳನ್ನ ಜನ ಬೆಂಬಲಿಸಿಬೇಕು” ಎಂದು ಡೆತ್‌ನೋಟ್‌ನಲ್ಲಿ ಯುವಕ ಬರೆದಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ಅರುಣ್ ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿ ನಿವಾಸಿಯಾಗಿದ್ದು, ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದ. ಸ್ನೇಹಿತರ ಜೊತೆ ಪಿಜಿಯಲ್ಲಿ ಉಳಿದುಕೊಂಡಿದ್ದ.

Ramesh Babu

Journalist

Recent Posts

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

13 minutes ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

6 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

7 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

10 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

13 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

1 day ago