ಪ್ರೇಮಿಗಳ ದಿನವೇ ನಂದಿಬೆಟ್ಟದ ಟಿಪ್ಪು ಡ್ರಾಪ್ನಿಂದ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಂಡಿರೋ ಪ್ರಕರಣ ಬೆಳಕಿಗೆ ಬಂದಿದೆ.
ಮೂರು ದಿನಗಳಿಂದ ಅನಾಥವಾಗಿದ್ದ ಬೈಕ್ ಹಿಂದೆ ಬಿದ್ದಿದ್ದ ಪೊಲೀಸರಿಗೆ ಯುವಕನ ಆತ್ಮಹತ್ಯೆ ಪ್ರಕರಣ ತಿಳಿದಿದೆ. ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಬಂದು ಅರುಣ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಮೃತದೇಹ ಸಹ ಪತ್ತೆಯಾಗಿದೆ.
ಕಳೆದ ಶನಿವಾರ ತನ್ನ ಸ್ನೇಹಿತನ ಬೈಕ್ನಲ್ಲಿ ನಂದಿಬೆಟ್ಟಕ್ಕೆ ಬಂದ ಅರುಣ್, ಪಾರ್ಕಿಂಗ್ ಪ್ಲಾಟ್ನಲ್ಲಿ ಬೈಕ್ ನಿಲ್ಲಿಸಿ ನಂದಿಬೆಟ್ಟದ ಮೇಲ್ಭಾಗಕ್ಕೆ ಹೋಗಿದ್ದಾನೆ. ಆದರೆ ಶನಿವಾರ ಬೆಟ್ಟದ ಮೇಲೆ ಹೋದವನು ಮರಳಿ ವಾಪಸ್ ಬಂದಿಲ್ಲ. ಶನಿವಾರ, ಭಾನುವಾರ, ಸೋಮವಾರ ಕಾದರೂ ಅರುಣ್ ವಾಪಸ್ ಬಾರದ ಹಿನ್ನೆಲೆ ಅನುಮಾನಗೊಂಡ ಹೆಲ್ಮೆಟ್ ಲಾಕ್ ರೂಂ ಮಾಲೀಕರು, ಪೊಲೀಸರಿಗೆ ತಿಳಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದಾಗ ಅರುಣ್ ಹೋಗಿರೋ ವೀಡಿಯೋ ಸಿಕ್ಕಿದೆ. ಆದರೆ ವಾಪಾಸ್ ಬಂದಿರೋ ವೀಡಿಯೋ ಸಿಕ್ಕಿಲ್ಲ. ಹೀಗಾಗಿ ಬೆಟ್ಟವೆಲ್ಲಾ ತಡಿಕಾಡಿದಾಗ ಟಿಪ್ಪು ಡ್ರಾಪ್ನ ಜಾಗದಲ್ಲಿ ಅರುಣ್ ಬ್ಯಾಗ್ ಪತ್ತೆಯಾಗಿದೆ.
ಬ್ಯಾಗ್ನಲ್ಲಿ ಡೆತ್ನೋಟ್ ಸಹ ಪತ್ತೆಯಾಗಿದ್ದು, ಅದರಲ್ಲಿ ಸಾವಿಗೆ ನಿಖರ ಕಾರಣ ಬರೆದಿಲ್ಲ. “ತಾನು ಸಂತೋಷವಾಗಿ ಸಾಯುತ್ತಿದ್ದೇನೆ. ರಾಜಕೀಯ ವ್ಯವಸ್ಥೆ ಸರಿ ಇಲ್ಲ. ನಟ ಉಪೇಂದ್ರ ಅವರ ಪ್ರಜಾಕೀಯ ಪಕ್ಷದ ಸಿದ್ದಾಂತಗಳನ್ನ ಜನ ಬೆಂಬಲಿಸಿಬೇಕು” ಎಂದು ಡೆತ್ನೋಟ್ನಲ್ಲಿ ಯುವಕ ಬರೆದಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ಅರುಣ್ ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿ ನಿವಾಸಿಯಾಗಿದ್ದು, ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದ. ಸ್ನೇಹಿತರ ಜೊತೆ ಪಿಜಿಯಲ್ಲಿ ಉಳಿದುಕೊಂಡಿದ್ದ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…